ಕೆಶಿಪ್ ಎತ್ತಂಗಡಿ ಮಾಡಿದರೆ ಹೋರಾಟ: ಉಮೇಶ ಕತ್ತಿ
Team Udayavani, Aug 13, 2018, 6:40 AM IST
ಬೆಳಗಾವಿ: ಬೆಳಗಾವಿ ವಿಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದು ಹೇಳಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಇದನ್ನು ಸಾಬೀತುಪಡಿಸಿ ತೋರಿಸಲಿ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿಯಿಂದ ಕೆಶಿಪ್ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವ ಸಚಿವ ರೇವಣ್ಣ ಅವರ ಕ್ರಮ ಸರಿಯಲ್ಲ. ಇದು ಸಮ್ಮಿಶ್ರ ಸರ್ಕಾರಕ್ಕೆ ಉತ್ತರ ಕರ್ನಾಟಕದ ಮೇಲೆ ಇರುವ ಪ್ರೀತಿಯನ್ನು ಎತ್ತಿ ತೋರಿಸುತ್ತದೆ. ಬೆಳಗಾವಿಯಿಂದ ಸ್ಥಳಾಂತರವಾಗಿರುವ ಕೆಶಿಪ್ ಕಚೇರಿಗಳನ್ನು ಕೂಡಲೇ ಇಲ್ಲಿ ಮುಂದುವರಿಸುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು.
ಅಲ್ಲದೆ, ಮುಖ್ಯಮಂತ್ರಿಯವರು ಹೇಳಿದಂತೆ ಆದಷ್ಟು ಬೇಗ ಸುವರ್ಣ ವಿಧಾನಸೌಧಕ್ಕೆ ಸರ್ಕಾರದ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು. ಈ ಬಾರಿಯ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೇ ಕಾರಣಕ್ಕೆ ಮಠಾಧೀಶರು ಒಂದು ದಿನ ಸುವರ್ಣ ವಿಧಾನಸೌಧದ ಮುಂದೆ ಸಾಂಕೇತಿಕ ಧರಣಿ ನಡೆಸಿದರು. ಇಷ್ಟಾದ ಮೇಲೂ ಅನ್ಯಾಯ ಮುಂದುವರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಇದೇ ರೀತಿ ತಾರತಮ್ಯ ಧೋರಣೆ ಮುಂದುವರಿದರೆ ಹೋರಾಟ ಅನಿವಾರ್ಯ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದರು.
ಕೆಶಿಪ್ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವುದು ಸರಿಯಲ್ಲ.ಇದು ಲೋಕೋಪ ಯೋಗಿ ಇಲಾಖೆ ಸಚಿವರ ತಪ್ಪು ನಿರ್ಧಾರ. ಈ ಭಾಗದ ಎಲ್ಲ ಶಾಸಕರು ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಚರ್ಚಿಸಿ ಈ ಕಚೇರಿಗಳನ್ನು ಇಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ.
– ರಮೇಶ ಜಾರಕಿಹೊಳಿ, ಸಚಿವ
ಕೆಲವು ಇಲಾಖೆಗಳಲ್ಲಿ ಕಾಮಗಾರಿಗಳು ಮುಗಿದ ಮೇಲೆ ಅದಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಯಾ ಇಲಾಖೆಯವರು ತೆಗೆದುಕೊಳ್ಳುತ್ತಾರೆ. ಉತ್ತರ ಕರ್ನಾಟಕದಲ್ಲಿದ್ದ ಕೆಶಿಪ್ ಸೇರಿ ಇತರ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಯವರಿಗೆ ಗೊತ್ತು. ಅವರನ್ನೇ ಕೇಳಬೇಕು. ಅಂತಹ ತೀರ್ಮಾನ ಕೈಗೊಳ್ಳುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ