ನನ್ನ ಸಾಲಮನ್ನಾ ಮಾಡಬೇಡಿ; ಸಿಎಂಗೆ ರೈತ ಬರೆದ ಪತ್ರದಲ್ಲೇನಿದೆ
Team Udayavani, Aug 13, 2018, 1:53 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ನೀವು ರೈತರ ಸಾಲಮನ್ನಾ ಮಾಡಿರುವುದು ಉತ್ತಮ ವಿಚಾರ. ಆದರೆ ದಯವಿಟ್ಟು ನೀವು ನನ್ನ ಒಂದು ಲಕ್ಷ ರೂಪಾಯಿ ಸಾಲವನ್ನು ಮನ್ನಾ ಮಾಡಬೇಡಿ ಎಂದು ಮೂಡಿಗೆರೆ ತಾಲೂಕಿನ ಕರುಡಗೆರೆ ಗ್ರಾಮದ ರೈತರೊಬ್ಬರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಮೂಡಿಗೆರೆಯ ಕರುಡಗೆರೆ ಗ್ರಾಮದ ಅಮರನಾಥ ಎಂಬ ರೈತ ಪತ್ರ ಬರೆದು, ಸಾಲಮನ್ನಾ ಘೋಷಣೆ ಹಿನ್ನೆಲೆ ನನ್ನ ಆತ್ಮಸಾಕ್ಷಿಗೆ ಒಪ್ಪುವುದಿಲ್ಲ, ಸ್ವಾಭಿಮಾನಿಯಾದ ನನ್ನ ಸಾಲ ಮನ್ನಾ ಮಾಡೋದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರುಡಗೆರೆ ಗ್ರಾಮದಲ್ಲಿ ನಾನು 11ಎಕರೆ ಜಮೀನು ಹೊಂದಿದ್ದೇನೆ. 2016ರಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಆದರೆ ನನ್ನ ಸಾಲಮನ್ನಾ ಮಾಡೋದು ಬೇಡ, ಬೇರೆ ರೈತರ ಸಾಲ ಮನ್ನಾ ಬಗ್ಗೆ ನನ್ನ ಅಭ್ಯಂತರ ಇಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ