ಆಶ್ವಾಸನೆ ಮರೆತ ಬಿಜೆಪಿ ನಾಯಕರು
Team Udayavani, Aug 14, 2018, 6:25 AM IST
ಬೆಂಗಳೂರು: “ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನಾಯಕರು ಕಳಸಾ ಬಂಡೂರಿ ಹೋರಾಟಗಾರರಿಗೆ ನ್ಯಾಯ ಕೊಡಿಸುವ ಅಶ್ವಾಸನೆಗಳನ್ನು ನೀಡಿದ್ದರು. ನಂತರ ಮರೆತು ಬಿಟ್ಟಿದ್ದಾರೆ’ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 75 ನೇ ವಯಸ್ಸಿನಲ್ಲೂ ಮುಖ್ಯಮಂತ್ರಿ ಆಗಬೇಕು ಎಂಬ ಕಾತರದಲ್ಲಿರುವ ಯಡಿಯೂರಪ್ಪ ಅವರಿಗೆ ಶಿವರಾಮ ಕಾರಂತ ಬಡಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಹಾಗೂ ರಾಮಚಂದ್ರಾಪುರ ಮಠದ ಅಧಿಕಾರ ವ್ಯಾಪ್ತಿಗೆ ಗೋಕರ್ಣ ದೇವಸ್ಥಾನ ಕೊಟ್ಟಿದ್ದ ಬಗ್ಗೆ ಹೈಕೋರ್ಟ್ ಕಪಾಳ ಮೋಕ್ಷ ಮಾಡಿದೆ. ಅವರಿಗೆ ಬದ್ಧತೆ ಇದ್ದರೆ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.