ರಾಜ್ಯದ ಪ್ರತಿ ರೈತರಿಗೂ ಆಧಾರ್‌ ಮಾದರಿ ಪ್ರತ್ಯೇಕ ನಂಬರ್‌


Team Udayavani, Aug 14, 2018, 6:10 AM IST

farmers-2525.jpg

ವಿಶೇಷ ವರದಿ- ಬಾಗಲಕೋಟೆ: ದೇಶದ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಮಾದರಿಯಲ್ಲಿ ರಾಜ್ಯದ ರೈತರಿಗೆ ಪ್ರತ್ಯೇಕ ಗುರುತಿನ ಸಂಖ್ಯೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ರೈತರು ಕಾಮನ್‌ ಫಾರ್ಮರ್‌ ರಿಜಿಸ್ಟ್ರೇಶನ್‌ ಪೋರ್ಟಲ್‌ (ಸಿಎಫ್‌ಆರ್‌ಪಿ)ನಲ್ಲಿ ನೋಂದಾಯಿಸಲು ಕಡ್ಡಾಯಗೊಳಿಸಿದೆ. ಈ ಸಿಎಫ್‌ಆರ್‌ಪಿ ಅಡಿ ಹೆಸರು ನೋಂದಾಯಿಸಿದರೆ ಮಾತ್ರ ಇನ್ನು ಮುಂದೆ ಕೃಷಿ ಇಲಾಖೆ, ಪಶು ಸಂಗೋಪನೆ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸೌಲಭ್ಯ ದೊರೆಯಲಿವೆ.

ಕೃಷಿ, ರೇಷ್ಮೆ, ಪಶು ಸಂಗೋಪನೆ ಹಾಗೂ ತೋಟಗಾರಿಕೆ ಇಲಾಖೆಗಳ ಸೌಲಭ್ಯಗಳ ದುರ್ಬಳಕೆ ತಡೆಗಟ್ಟುವ ಜತೆಗೆ ರೈತರು ಪ್ರತಿಯೊಂದು ಸೌಲಭ್ಯಕ್ಕೂ ಪ್ರತ್ಯೇಕ ಅರ್ಜಿ ಸಲ್ಲಿಸಿ, ಸೌಲಭ್ಯ ಪಡೆಯುವುದನ್ನು ತಡೆಯಲು ಈ ಯೋಜನೆ ಕಡ್ಡಾಯಗೊಳಿಸಿದೆ. ಆಧಾರ್‌ ಸಂಖ್ಯೆಯೊಂದಿಗೆ ರೈತರು ಹೆಸರು, ಹೊಂದಿರುವ ಒಟ್ಟು ಭೂಮಿ, ಖಾತೆ ಉತಾರ ಸಂಖ್ಯೆ, ರೈತರ ವರ್ಗ(ಸಾಮಾನ್ಯ, ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತ, ಅಂಗವಿಕಲ ಇತ್ಯಾದಿ), ಬ್ಯಾಂಕ್‌ ಖಾತೆ ಸಂಖ್ಯೆ ಮುಂತಾದ ಮಾಹಿತಿ ಒಳಗೊಂಡ ವಿವರವನ್ನು ಪೋರ್ಟಲ್‌ನಲ್ಲಿ ನೋಂದಾಯಿಸಬೇಕು. ಪ್ರತಿಯೊಂದು ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಈ ನೋಂದಣಿ ಈಗಾಗಲೇ ಆರಂಭಿಸಲಾಗಿದೆ. ಅಲ್ಲದೇ ಸದ್ಯ ರೈತರು ಯಾವುದೇ ಸೌಲಭ್ಯ ಕೇಳಿ ಅರ್ಜಿ ಸಲ್ಲಿಸಿದರೂ ಅವರ ವಿವರವನ್ನು ಈ ಪೋರ್ಟಲ್‌ನಲ್ಲಿ ದಾಖಲಿಸುವ ಕಾರ್ಯ ನಡೆಯುತ್ತಿದೆ.

ರಾಜ್ಯದ 6 ಕೋಟಿ ಜನಸಂಖ್ಯೆಯಲ್ಲಿ 75 ಲಕ್ಷ (ರೈತ ಕುಟುಂಬ ಹೆಚ್ಚಾದಾಗ ಅಥವಾ ಭೂಮಿ ವಿಂಗಡಣೆ ಮಾಡಿಕೊಂಡರೆ ಸಂಖ್ಯೆ ಹೆಚ್ಚಳವಾಗುತ್ತವೆ) ರೈತರಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 2,27,731 ರೈತರಿದ್ದಾರೆ. ಅದರಲ್ಲಿ 6010 ರೈತರು ವಿಶಿಷ್ಟ ಪ್ರತ್ಯೇಕ ಸಂಖ್ಯೆ (ಉದಾ: ಎಫ್‌ಐಡಿ-ಫಾರ್ಮರ್‌ ಐಡಿ )ಪಡೆಯಲು ನೋಂದಾಯಿಸಿಕೊಂಡಿದ್ದಾರೆ. ಇದು ಸದ್ಯ ನಿರಂತರವಾಗಿ ನಡೆಯಲಿದ್ದು, ರೈತರು ನೋಂದಾಯಿಸುವುದು ಕಡ್ಡಾಯವಾಗಿದೆ.

ಆಧಾರ್‌ ಸಂಖ್ಯೆ ಮಾದರಿ ರೈತರ ಸಮಗ್ರ ಮಾಹಿತಿಯುಳ್ಳ ಕಾಮನ್‌ ಫಾರ್ಮರ್‌ ರಿಜಿಸ್ಟ್ರೇಶನ್‌ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಈ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿದಾಗ ರೈತರಿಗೆ ಒಂದು ನಂಬರ್‌ ನೀಡಲಾಗುತ್ತದೆ. ಕೃಷಿ ಸಂಬಂಧಿತ ಯಾವುದೇ ಇಲಾಖೆಯ ಸೌಲಭ್ಯ ಪಡೆಯಲು ಪ್ರತ್ಯೇಕ ಅರ್ಜಿ ಕೊಡಬೇಕಿಲ್ಲ, ಕೇವಲ ಅವರಿಗೆ ನೀಡುವ ರೈತರ ನಂಬರ್‌ ನೀಡಿದರೆ ಆನ್‌ಲೈನ್‌ನಲ್ಲಿ ದಾಖಲೆ ಪಡೆಯುತ್ತದೆ.
– ಡಾ.ಪಿ.ರಮೇಶಕುಮಾರ, ಜಂಟಿ ಕೃಷಿ ನಿರ್ದೇಶಕ

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.