ರಾಷ್ಟ್ರೀಕೃತ ಬ್ಯಾಂಕ್‌ ಸಾಲಮನ್ನಾ ನಾಡಿದ್ದು


Team Udayavani, Aug 14, 2018, 5:15 AM IST

ban14081.jpg

ಹಾಸನ: ರೈತರು ಸಹಕಾರಿ ಸಂಘಗಳಲ್ಲಿ ಮಾಡಿದ್ದ 10,734 ಕೋಟಿ ರೂ. ಬೆಳೆಸಾಲದ ಪೈಕಿ 9,448 ಕೋಟಿ ರೂ. ಮನ್ನಾ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲದಲ್ಲಿ 2 ಲಕ್ಷರೂ.ವರೆಗಿನ ಸಾಲವನ್ನು ಮನ್ನಾ ಮಾಡುವ ಆದೇಶವನ್ನು ಗುರುವಾರ(ಆ.16) ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಕಟಿಸಿದರು.

ಹರದನಹಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ
ಮಾಡಿರುವ ಕೃಷಿ ಸಾಲ 32,000 ಕೋಟಿ ರೂ. ಇದೆ. ಆ ಪೈಕಿ 2 ಲಕ್ಷ ರೂ.ವರೆಗೆ ಸುಸ್ತಿಸಾಲವನ್ನು ಮನ್ನಾ ಮಾಡಲು ನಿರ್ಧರಿಸಿರುವ ಸರ್ಕಾರ, ಸಾಲದ ಮೊತ್ತವನ್ನು 4 ಕಂತುಗಳಲ್ಲಿ ಬ್ಯಾಂಕುಗಳಿಗೆ ತುಂಬಿಕೊಡಲು ತೀರ್ಮಾನಿಸಿದೆ. ಮೊದಲ ಕಂತಿನ 6,500 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿಯೇ ತೆಗೆದಿರಿಸಲಾಗಿದೆ.ಮುಂದಿನ ವರ್ಷದ ಬಜೆಟ್‌ನಲ್ಲಿ ಇನ್ನುಳಿದ 3 ಕಂತುಗಳ ಮೊತ್ತವನ್ನು ತೆಗೆದಿರಿಸಲು ಚಿಂತನೆ ನಡೆಸಿದ್ದೇನೆ ಎಂದರು.

ಸಾಲಮನ್ನಾ ಮಾಡಲು ನಾನೇನು ಜಾದೂ ಮಾಡುತ್ತಿಲ್ಲ. ಸರ್ಕಾರದ ಆದಾಯ ಸೋರಿಕೆ ತಡೆಯುವ ಪ್ರಯತ್ನ ಮಾಡಿ
ಅದರಲ್ಲಿನ ಉಳಿತಾಯವನ್ನು ಸಾಲಮನ್ನಾಕ್ಕೆ ಬಳಸಲಾಗುವುದು ಎಂದ ಅವರು, ಅಬಕಾರಿ ತೆರಿಗೆಯಲ್ಲಿ ಶೇ.7.8 ಸಂಗ್ರಹ ಹೆಚ್ಚಳವಾಗಿದೆ. ಜಿಎಸ್‌ಟಿ ಪಾಲಿನಲ್ಲಿ ಎಷ್ಟು ಸಂಗ್ರಹವಾಗುತ್ತದೆ ಎಂಬುದರ ಬಗ್ಗೆ ಲೆಕ್ಕಾಚಾರ ಮಾಡಲಾಗುತ್ತಿದೆ. ಆರ್ಥಿಕ ಶಿಸ್ತಿಗೆ ಧಕ್ಕೆಯಾಗದಂತೆ ಸಾಲಮನ್ನಾಕ್ಕೆ ಸಂಪನ್ಮೂಲ ಕ್ರೋಢೀಕರಿಸಲಾಗುತ್ತಿದೆ ಎಂದು ಹೇಳಿದರು.

ಮರಳು ನೀತಿ ಬದಲಾವಣೆ: ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮರಳು ನೀತಿಯಲ್ಲಿ ಬದಲಾವಣೆ
ತರಲಾಗುವುದು. ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ನೀತಿ ರೂಪಿಸಿ, ಜನ ಸಾಮಾನ್ಯರು
ಮನೆ ನಿರ್ಮಿಸಿಕೊಳ್ಳಲು, ಆಶ್ರಯ ಮನೆ, ಶೌಚಾಲಯ ನಿರ್ಮಾಣಕ್ಕೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದರು.

ಆಲಮಟ್ಟಿಗೆ ಮುಂದಿನ ವಾರ ಭೇಟಿ: ಆಲಮಟ್ಟಿಗೆ ಮುಂದಿನವಾರ ಭೇಟಿ ನೀಡಿ ಬಾಗಿನ ಅರ್ಪಿಸುವೆ ಎಂದ ಅವರು, ಬೆಳಗಾವಿಗೆ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡುವ ಸಂಬಂಧ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ
ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದರು.

ದೇವೇಗೌಡರ ಪರಿವಾರದ ಪೂಜೆ
ಸಿಎಂ ಕುಮಾರಸ್ವಾಮಿ ದಂಪತಿ ಸಹಿತ ಮಾಜಿ ಪ್ರಧಾನಿ ಎಚ್‌. ಡಿ.ದೇವೇಗೌಡರ ಪರಿವಾರ ಹುಟ್ಟೂರು ಹರದನಹಳ್ಳಿ ಈಶ್ವರ ದೇವಾಲಯ ಹಾಗೂ ಹೊಳೆನರಸೀಪುರದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯಲ್ಲಿ ಶ್ರಾವಣಮಾಸದ ಪ್ರಥಮ ಸೋಮವಾರದ ಪೂಜೆ ನೆರವೇರಿಸಿದರು.

ಭಾನುವಾರ ರಾತ್ರಿಯೇ ಹಾಸನಕ್ಕೆ ಬಂದು ತಂಗಿದ್ದ ದೇವೇಗೌಡ ದಂಪತಿ ಹಾಗೂ ಕುಮಾರಸ್ವಾಮಿ ದಂಪತಿ ಸೋಮವಾರ ಮುಂಜಾನೆ 7 ಗಂಟೆಗೆ ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ಆಗಮಿಸುವ ವೇಳೆಗೆ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ನೇತೃತ್ವದಲ್ಲಿ ಪೂಜಾ ಕಾರ್ಯದ ಸಿದ್ಧತೆ ನಡೆದಿತ್ತು. ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೂ ಎಚ್‌.ಡಿ.ದೇವೇಗೌಡ, ಚನ್ನಮ್ಮ, ಎಚ್‌.ಡಿ.ಕುಮಾರಸ್ವಾಮಿ, ಅನಿತಾ ಮತ್ತು ಎಚ್‌.ಡಿ.ರೇವಣ್ಣ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಹರದನಹಳ್ಳಿಯ ದೇವಾಲಯದಲ್ಲಿ ರೇವಣ್ಣ, ನಗರ ಸ್ಥಳೀಯ ಸಂಸ್ಥೆಗಳ ಚುನಾವನೆಗೆ ಜೆಡಿಎಸ್‌ ವಿತರಿಸಲಿರುವ ಬಿ ಫಾರಂ ಮತ್ತು ಇತರೆ ದಾಖಲೆಗಳಿಗೂ ಪೂಜೆ ಮಾಡಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪಿ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.