ಕಾಂಗ್ರೆಸ್ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಅಲ್ಲ: ಬಿಎಸ್ವೈ
Team Udayavani, Aug 15, 2018, 6:00 AM IST
ಯಲ್ಲಾಪುರ: “ಕಾಂಗ್ರೆಸ್ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಅಲ್ಲ. ಸ್ವಾತಂತ್ರ್ಯ ಹೋರಾಟದ ನಂತರ ಕಾಂಗ್ರೆಸ್ನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಆದರೆ ಆಗ ಮಾಡದ್ದನ್ನು ಜನ ಈಗ ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮಂಗಳವಾರ ಜಿಲ್ಲೆಯ ಬಿಜೆಪಿ ಶಕ್ತಿಕೇಂದ್ರ ಹಾಗೂ ಪ್ರಮುಖ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ
ಕಾಂಗ್ರೆಸ್ ಜತೆ ಕೈ ಜೋಡಿಸಿದ್ದೇನೆ ಎಂದು ದೇವೆಗೌಡರು ಸುಳ್ಳು ಸಂದೇಶ ನೀಡುತ್ತಿದ್ದಾರೆ. ಭವಿಷ್ಯವಿಲ್ಲದ ಕಾಂಗ್ರೆಸ್ ಜತೆ ಕೈ ಜೋಡಿಸಿದರೆ ಏನಾಗಬಹುದು ಎಂಬುದನ್ನು ರಾಜ್ಯದ ಜನತೆ ಮುಂದೆ ತೋರಿಸಲಿದ್ದಾರೆ ಎಂದರು.
100 ಕೋಟಿ ಬಾಕಿ: ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಇಲ್ಲ. ಉಸ್ತುವಾರಿ ಸಚಿವರ ನೇಮಕವೇ ಸರ್ಕಾರಕ್ಕೆ ಸಮಸ್ಯೆಯಾಗಿದೆ. ಕುಮಾರಸ್ವಾಮಿ ಸಾಲಮನ್ನಾ ಹಣಕ್ಕಾಗಿ ರೈತರು ಕಾದು ಕುಳಿತುಕೊಳ್ಳುವಂತಾಗಿದೆ. ಸಾಲಮನ್ನಾ ಕುರಿತು ರೈತರಿಗೆ, ಸಹಕಾರಿ ಸಂಘಗಳಿಗೆ ಈವರೆಗೂ ಸ್ಪಷ್ಟತೆ
ಬಂದಿಲ್ಲ. ಈಗ ರಾಷ್ಟ್ರೀಕೃತ ಬ್ಯಾಂಕಿನ ಸಾಲದ ಬಗ್ಗೆ ಮಾತನಾಡತೊಡಗಿದ್ದಾರೆ ಎಂದು ಬಿಎ ಸ್ವೈ ಹೇಳಿದರು.