ಕಾರಾಗೃಹದಲ್ಲಿದ್ದ ಕೈದಿ ನಾಪತ್ತೆ
Team Udayavani, Aug 16, 2018, 7:50 AM IST
ಬಳ್ಳಾರಿ: ಜೀವಾವಧಿ ಶಿಕ್ಷೆಗೆ ಒಳಗಾಗಿ ನಗರದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ರಕ್ತ ಪರೀಕ್ಷೆಗೆಂದು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದ ವೇಳೆ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮಂಗಳವಾರ ರಾತ್ರಿ ಪರಾರಿಯಾಗಿದ್ದಾನೆ.
ಮೈಸೂರು ಜಿಲ್ಲೆ ಮೂಲದ ಸಂಜಯ ಅಲಿಯಾಸ್ ಕೃಷ್ಣನಾಯ್ಕ (32) ಪರಾರಿಯಾದ ಕೈದಿ. ಕೊಲೆ ಪ್ರಕರಣವೊಂದರಲ್ಲಿ 2004ರಲ್ಲಿ ಈತ ಬಂ ಧಿತನಾಗಿದ್ದ. ಜೀವಾವ ಧಿ ಶಿಕ್ಷೆ ವಿ ಧಿಸಿದ ಬಳಿಕ ಬೆಂಗಳೂರು ಜೈಲಿನಲ್ಲಿದ್ದ ಈತನನ್ನು 2016ರಲ್ಲಿ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು.
ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಮಂಗಳವಾರ ಸಂಜೆ 4.15ರ ಸುಮಾರಿಗೆ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಅಲ್ಲಿ ವೈದ್ಯರ ಸಲಹೆ ಮೇರೆಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ನಂತರ ಕೈದಿಯನ್ನು ಕೊಠಡಿಯೊಂದರಲ್ಲಿ ಕೂಡಿಸಿ ಒಬ್ಬರು ರಕ್ತಪರೀಕ್ಷೆ ವರದಿ ಪಡೆಯಲು, ಮತ್ತೂಬ್ಬ ಸಿಬ್ಬಂದಿ ವೈದ್ಯಕೀಯ ವರದಿ ಪಡೆಯಲು ತೆರಳಿದ್ದಾರೆ. ವಾಪಸ್ ಬಂದು ನೋಡಿದಾಗ, ಸ್ಥಳದಲ್ಲಿ ಕೈದಿ ಇರಲಿಲ್ಲ. ತಕ್ಷಣ ಕಾರಾಗೃಹದ ಅ ಧೀಕ್ಷಕ ಡಾ| ಪಿ.ರಂಗನಾಥ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ