ಭೂಕಂಪನ? ಬೆಂಗಳೂರು ಜನ ಹೆದರುವ ಅಗತ್ಯವಿಲ್ಲ; ಭೂಗರ್ಭ ವಿಜ್ಞಾನಿ
Team Udayavani, Aug 16, 2018, 4:39 PM IST
ಬೆಂಗಳೂರು: ರಾಜರಾಜೇಶ್ವರಿ ನಗರ, ಕುಮಾರಸ್ವಾಮಿ ಲೇಔಟ್, ಜ್ಞಾನಭಾರತಿ, ವಿಜಯನಗರ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ. ಆದರೆ ಇದು ಭೂಕಂಪ ಅಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟಪಡಿಸಿದೆ.
ಇದು ಭೂಕಂಪನ ಅಲ್ಲ ಭಾರೀ ದೊಡ್ಡ ಶಬ್ದ ಕೇಳಿ ಬಂದಿತ್ತು. ಬಹುಶಃ ಎಲ್ಲಿಯೋ ಏನೋ ಸ್ಫೋಟಗೊಂಡಿದೆ ಎಂದು ಕೆಲವು ಸಾರ್ವಜನಿಕರು ಪ್ರತಿಕ್ರಿಯೆ ನೀಡಿದ್ದಾರೆ.
ಭಾರೀ ಸದ್ದು ಕೇಳಿ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿರುವುದಾಗಿ ಸಾರ್ವಜನಿಕರು ಮಾಧ್ಯಮಗಳ ಜೊತೆ ಮಾತನಾಡುತ್ತ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಭೂಗರ್ಭ ವಿಜ್ಞಾನಿ ಎಚ್.ಎಸ್.ಎಂ ಪ್ರಕಾಶ್ ಅವರು ಮಾತನಾಡಿ, ಬೆಂಗಳೂರಿನಲ್ಲಿ ಯಾವುದೇ ಭೂಕಂಪನ ಆಗಿಲ್ಲ. ಗಾಳಿಯ ಸ್ಥಾನಪಲ್ಲಟದಿಂದ ಕೇಳಿ ಬಂದಿರುವ ಶಬ್ದ ಇದಾಗಿರಬಹುದು. ನಮಗೆ ಯಾರಿಗೂ ಭೂಮಿ ಕಂಪಿಸಿದ ಅನುಭವ ಆಗಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಭೂಗರ್ಭದ ಒಳಗೆ ಆಗಿರುವ ಕಂಪನ ಇದಲ್ಲ. ಮೋಡಗಳ ಏರುಪೇರಿನಿಂದ ಗಾಳಿ ಸ್ಥಾನಪಲ್ಲಟದ ಸದ್ದು ಇದು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬೆಂಗಳೂರು ಜನ ಯಾವುದೇ ರೀತಿ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?