ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್‌ ಜಾಮ್‌: ಕಿ.ಮೀ.ಗಟ್ಟಲೆ ವಾಹನಗಳ ಸಾಲು


Team Udayavani, Aug 19, 2018, 9:53 AM IST

charmadi-2.jpg

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಉಂಟಾದ ಟ್ರಾಫಿಕ್‌ ಜಾಮ್‌ ಸಮಸ್ಯೆ ಶನಿವಾರ ಬೆಳಗ್ಗಿನವರೆಗೂ ಮುಂದುವರಿದು ಪ್ರಯಾಣಿಕರು ಪರದಾಡಿದರು. ಶುಕ್ರವಾರ ಕಂಟೈನರ್‌ ಲಾರಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕೆಟ್ಟುನಿಂತು ಉಂಟಾದ ಟ್ರಾಫಿಕ್‌ ಜಾಮ್‌ ಶನಿವಾರ 11 ಗಂಟೆಯವರೆಗೂ ಮುಂದು ವರಿದು, 5 ಕಿ.ಮೀ. ವರೆಗೆ ವಾಹನಗಳು ಸಾಲುಗಟ್ಟಿದ್ದವು. 

ತಿರುವಿನಲ್ಲಿ ಲಾರಿ ಕೆಟ್ಟು ನಿಂತಿದ್ದರೂ ಒಂದು ಬದಿಯಲ್ಲಿ ಸಂಚಾರಕ್ಕೆ ಅವಕಾಶವಿತ್ತು. ಆದರೆ ಘಾಟಿ ರಸ್ತೆಯ ಎರಡೂ ಬದಿಗಳಲ್ಲೂ ವಾಹನ ಸಾಲುಗಟ್ಟಿ ದ್ದವು. ಬಳಿಕ ಪೊಲೀಸರು, ಸ್ಥಳೀಯರು ಸೇರಿ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿ ಕೊಂಡರು. ಲಾರಿ ತಿರುವಿನ ಅಪಾಯಕಾರಿ ಜಾಗದಲ್ಲಿ ನಿಂತ ಪರಿಣಾಮ ತೆರವುಗೊಳಿಸಲು ಪರದಾಡಬೇಕಾಯಿತು. ತೆರವು ಕಾರ್ಯ ತಡ ರಾತ್ರಿಯ ವರೆಗೆ ಮುಂದುವರಿದಿತ್ತು.

ಘನ ವಾಹನಗಳ ಗೊಂದಲ
ಜಿಲ್ಲಾಧಿಕಾರಿ ಘನ ವಾಹನ ಸಂಚಾರವನ್ನು ಶುಕ್ರವಾರ ತಡರಾತ್ರಿಯೇ ನಿಷೇಧಿಸಿದ್ದರೂ ಸಾಕಷ್ಟು ಘನ ವಾಹನಗಳು ಬಂದು ನಿಂತಿದ್ದವು. ಜತೆಗೆ ಹಲವು ಘನ ವಾಹನಗಳು ಮಾಹಿತಿ ಇಲ್ಲದೆ ಆಗಮಿಸಿದ್ದರಿಂದ ಪೊಲೀಸರು ಅನಿವಾರ್ಯವಾಗಿ ಅವನ್ನು ಬಿಡಬೇಕಾಯಿತು. ಶನಿವಾರ ಬೆಳಗ್ಗಿನ ಬಳಿಕ ಘನ ವಾಹನಗಳನ್ನು ಘಾಟಿ ರಸ್ತೆಯಲ್ಲಿ ಬಿಟ್ಟಿಲ್ಲ ಎಂದು ಬೆಳ್ತಂಗಡಿ ಸಂಚಾರ ಪೊಲೀಸ್‌ ಎಸ್‌ಐ ಓಡಿಯಪ್ಪ ಗೌಡ ತಿಳಿಸಿದ್ದಾರೆ. ತಿರುವುಗಳು ಕಿರಿದಾಗಿರುವುದರಿಂದ ಘನ ವಾಹನಗಳ ಸಂಚಾರ ನಿಷೇಧಿಸುವಂತೆ ಆಗ್ರಹಿಸುತ್ತಲೇ ಬಂದಿದ್ದೇವೆ ಎಂದು ಹಸನಬ್ಬ ಚಾರ್ಮಾಡಿ ತಿಳಿಸಿದ್ದಾರೆ.

ಮಧ್ಯಾಹ್ನ ತಲುಪಿದ ಬಸ್‌ಗಳು
ಟ್ರಾಫಿಕ್‌ ಜಾಮ್‌ನಿಂದ ದೂರದೂರಿಗೆ ಪ್ರಯಾಣಿ ಸುತ್ತಿದ್ದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಮಂಗಳೂರಿಗೆ ಬೆಳಗ್ಗೆ ತಲುಪಬೇಕಿದ್ದ ಬಸ್‌ಗಳು, ತಲುಪುವ ವೇಳೆಗೆ ಮಧ್ಯಾಹ್ನವಾಗಿತ್ತು. ಮಂಗಳೂರಿನಿಂದ ತೆರಳಿದ ಬಸ್‌ಗಳೂ ಗುರಿ ಸೇರುವಾಗ ವಿಳಂಬವಾಗಿತ್ತು.

ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌
ಪುತ್ತೂರು;
ಸಂಪಾಜೆ ಘಾಟಿ ರಸ್ತೆ ಕುಸಿದಿರುವ ಹಿನ್ನೆಲೆಯಲ್ಲಿ ಪುತ್ತೂರು- ಮಂಗಳೂರು, ಸುಳ್ಯ- ಮಂಗಳೂರು ನಡುವೆ ಕೆಎಸ್‌ಆರ್‌ಟಿಸಿ ಘಟಕ ವತಿಯಿಂದ ಹೆಚ್ಚುವರಿ ಬಸ್‌ಗಳನ್ನು ಹಾಕಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಕೊನೆಯ ಬಸ್‌ 8.45ರ ಬದಲು 9.30ಕ್ಕೆ ಹೊರಡಲಿದೆ. ಹೆಚ್ಚುವರಿ ಬಸ್‌ಗಳು ಪುತ್ತೂರು- ಮಂಗಳೂರು ನಡುವೆ 6 ಟ್ರಿಪ್‌ ಹಾಗೂ ಸುಳ್ಯ- ಮಂಗಳೂರು ನಡುವೆ ನಾಲ್ಕು ಬಾರಿ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.