ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ
Team Udayavani, Aug 19, 2018, 6:55 AM IST
ಬೆಂಗಳೂರು: ಕೊಡಗು, ಕೇರಳದ ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ ನೀಡಲು ರಾಮನಗರ ಡೀಸಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೊಡಗು, ಕೇರಳದಿಂದ ನೆರೆ ಸಂತ್ರಸ್ತರಿಗೆ ಸಹಾಯಬೇಕು ಎಂದು ಕೋರಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಡೀಸಿ ಕಚೇರಿಯಲ್ಲಿ ವಿಶೇಷ ಕೇಂದ್ರ ತೆರೆಯಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಂಖ್ಯೆ 080-27273777 ಮತ್ತು ನೋಡಲ್ ಅಧಿಕಾರಿ 9845970510 ಹಾಗೂ ನೀರಾವರಿಗೆ ಸಂಬಂಧಿಸಿದ ಹೆಚ್ಚಿನ ಸಂಪರ್ಕಕ್ಕಾಗಿ ಸಚಿವ ಆಪ್ತ ಸಹಾಯಕ 9606006699 ಸಂಪರ್ಕಿಸಬಹುದು ಎಂದರು.