ಸಿಗದ ಟಿಕೆಟ್: ಕಾಂಗ್ರೆಸ್ ಕಚೇರಿಗೆ ಕಲ್ಲು
Team Udayavani, Aug 20, 2018, 7:15 AM IST
ಶಿವಮೊಗ್ಗ: ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ- ಫಾರಂ ಕೊಡಲಾಗಿದ್ದು ಅವಕಾಶ ವಂಚಿತರು ಕಾಂಗ್ರೆಸ್ ಕಚೇರಿ ಮುಂದೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. ಟಿಕೆಟ್ ದೊರಕದ್ದರಿಂದ ಯೂಥ್ ಕಾಂಗ್ರೆಸ್ನ ಗುಂಪೊಂದು ಕಿಟಕಿ ಗಾಜು ಪುಡಿ ಮಾಡಿದ ಘಟನೆಯೂ ನಡೆಯಿತು.
ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಅವಕಾಶವಿದ್ದು ಕಾಂಗ್ರೆಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ವಂಚಿತರು ಪಕ್ಷದ ವಿರುದಟಛಿವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮುಖಂಡ ವಿಶ್ವನಾಥ ಕಾಶಿ ಬೆಂಬಲಿಗರು ಸಂಜೆ 4 ಗಂಟೆ ಸಮಯದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಯುವ ಕಾರ್ಯಕರ್ತರಿಗೆ ಐದರಿಂದ ಹತ್ತು ಟಿಕೆಟ್ ನೀಡಬೇಕೆಂದು ಕೆಪಿಸಿಸಿ ಸೂಚಿಸಿದ್ದರೂ ಕೇವಲ ಒಬ್ಬರಿಗೆ ಅವಕಾಶ ನೀಡಿದೆ ಎಂದು ಮುಖಂಡ ರಂಗನಾಥ್ ಖಂಡಿಸಿದರು. ಪ್ರತಿಭಟನೆ ವೇಳೆ ಯುವಕನೊಬ್ಬ ಕಚೇರಿ ಗಾಜಿಗೆ ಕಲ್ಲು ತೂರಿ ಪುಡಿಪುಡಿ ಮಾಡಿದ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಇನ್ನೊಬ್ಬ ಮುಖಂಡ ಬಾಬಣ್ಣ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಕಿಟಕಿ ಗಾಜು ಒಡೆದ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂ ಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ