ಸಿಗದ ಟಿಕೆಟ್: ಕಾಂಗ್ರೆಸ್ ಕಚೇರಿಗೆ ಕಲ್ಲು
Team Udayavani, Aug 20, 2018, 7:15 AM IST
ಶಿವಮೊಗ್ಗ: ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ- ಫಾರಂ ಕೊಡಲಾಗಿದ್ದು ಅವಕಾಶ ವಂಚಿತರು ಕಾಂಗ್ರೆಸ್ ಕಚೇರಿ ಮುಂದೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. ಟಿಕೆಟ್ ದೊರಕದ್ದರಿಂದ ಯೂಥ್ ಕಾಂಗ್ರೆಸ್ನ ಗುಂಪೊಂದು ಕಿಟಕಿ ಗಾಜು ಪುಡಿ ಮಾಡಿದ ಘಟನೆಯೂ ನಡೆಯಿತು.
ನಾಮಪತ್ರ ಸಲ್ಲಿಕೆಗೆ ಒಂದೇ ದಿನ ಅವಕಾಶವಿದ್ದು ಕಾಂಗ್ರೆಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ವಂಚಿತರು ಪಕ್ಷದ ವಿರುದಟಛಿವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮುಖಂಡ ವಿಶ್ವನಾಥ ಕಾಶಿ ಬೆಂಬಲಿಗರು ಸಂಜೆ 4 ಗಂಟೆ ಸಮಯದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಯುವ ಕಾರ್ಯಕರ್ತರಿಗೆ ಐದರಿಂದ ಹತ್ತು ಟಿಕೆಟ್ ನೀಡಬೇಕೆಂದು ಕೆಪಿಸಿಸಿ ಸೂಚಿಸಿದ್ದರೂ ಕೇವಲ ಒಬ್ಬರಿಗೆ ಅವಕಾಶ ನೀಡಿದೆ ಎಂದು ಮುಖಂಡ ರಂಗನಾಥ್ ಖಂಡಿಸಿದರು. ಪ್ರತಿಭಟನೆ ವೇಳೆ ಯುವಕನೊಬ್ಬ ಕಚೇರಿ ಗಾಜಿಗೆ ಕಲ್ಲು ತೂರಿ ಪುಡಿಪುಡಿ ಮಾಡಿದ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಇನ್ನೊಬ್ಬ ಮುಖಂಡ ಬಾಬಣ್ಣ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಕಿಟಕಿ ಗಾಜು ಒಡೆದ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂ ಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ