ವಿಚಾರವಾದಿಗಳ ಹತ್ಯೆ: ಮುಂದಿನ ಟಾರ್ಗೆಟ್‌ ನಾನೇ!


Team Udayavani, Aug 20, 2018, 6:00 AM IST

19bgv-11a.jpg

ಬೆಳಗಾವಿ: “ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಡಾ.ನರೇಂದ್ರ ದಾಬೋಲಕರ, ಗೋವಿಂದ ಪನ್ಸಾರೆ, ಗೌರಿ ಲಂಕೇಶ, ಡಾ| ಎಂ.ಎಂ.ಕಲಬುರ್ಗಿ ಹತ್ಯೆಗೆ ಬಳಸಲಾದ ಅಸ್ತ್ರಗಳು ಒಂದೇ ಮಾದರಿಯದ್ದು, ಹತ್ಯೆಯ ಸಾಮ್ಯತೆ ಹಾಗೂ ಕೊಂದವರು ಒಂದೇ ಗುಂಪಿನ ಮನಸ್ಥಿತಿಯವರಾ ಎಂಬ ಅನುಮಾನ ಮೂಡುತ್ತಿದೆ’.

-ಹೀಗೆ ಅನುಮಾನ ವ್ಯಕ್ತಪಡಿಸಿದವರು ಗೋವಿಂದ ಪನ್ಸಾರೆ ಅವರ ಮೊಮ್ಮಗಳು, ಕೊಲ್ಲಾಪುರದ ಡಾ.ಮೇಘಾ ಪನ್ಸಾರೆ.

ಮಹಾರಾಷ್ಟ್ರದಲ್ಲಿ ನರೇಂದ್ರ ದಾಬೋಲಕರ ಹತ್ಯೆಯಾಗಿ ಆ.20ಕ್ಕೆ ಐದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ “ಉದಯವಾಣಿ’ ಅವರನ್ನು ಸಂಪರ್ಕಿಸಿದಾಗ ಹಲವು ಪ್ರಶ್ನೆಗಳನ್ನು ಅವರು ಎತ್ತಿದರು. ಹತ್ಯೆಯ ಸಾಮ್ಯತೆ ಒಂದೆಯಾದರೂ ಆರೋಪಿಗಳ ಪತ್ತೆ ಏಕಾಗುತ್ತಿಲ್ಲ? ಎರಡೂ ರಾಜ್ಯದ ಸರ್ಕಾರಗಳು ಬೇರೆ, ಬೇರೆ ಇವೆ ಎಂಬ ಕಾರಣಕ್ಕೋ ಅಥವಾ ಇಚ್ಛಾಶಕ್ತಿ ಕೊರತೆಯೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ಎಸ್‌ಐಟಿಗೆ ಹೋಲಿಸಿದರೆ ಮಹಾರಾಷ್ಟ್ರದ ಎಸ್‌ಐಟಿ ತನಿಖೆಯ ಕಾರ್ಯಕ್ಷಮತೆ ತೃಪ್ತಿಕರವಾಗಿಲ್ಲ. ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕದ ವಿಶೇಷ ತನಿಖಾ ದಳ ಈಗಾಗಲೇ 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಾಹಿತಿ ಸಂಗ್ರಹಿಸಿದೆ. ವಿಚಾರಣೆ ಸಂದರ್ಭದಲ್ಲಿಯೇ ದೊರೆತ ದಿನಚರಿ ಪುಸ್ತಕದ ಮಾಹಿತಿ ನನ್ನನ್ನೂ ಸೇರಿ ಮುಕ್ತಾ ಹಾಗೂ ಹಮೀದ್‌ ದಾಬೋಲಕರ ಮೇಲೆ ದುಷ್ಕರ್ಮಿಗಳ ಕಣ್ಣು ಇರುವುದನ್ನು ಖಚಿತಪಡಿಸಿವೆ. ಇದೇ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಶೇಷ ತನಿಖಾ ದಳ ನನಗೂ ಹಾಗೂ ಮುಕ್ತಾ, ಹಮೀದ್‌ ದಾಬೋಲಕರಗೆ ಎಕ್ಸ್‌ ಭದ್ರತೆ ಒದಗಿಸಿದೆ.

ಆದರೆ, ನಮ್ಮ ತಂದೆ ಹಾಗೂ ನರೇಂದ್ರ ದಾಬೋಲಕರ ಹತ್ಯೆಗೆ ಸಂಬಂಧಿಸಿದಂತೆ ಈಗಷ್ಟೇ ಮೂವರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಎಸ್‌ಐಟಿ ತಿಳಿಸಿದೆ. ನಮ್ಮ ತಂದೆ ಹತ್ಯೆಯಾಗಿ 3 ವರ್ಷ,  ದಾಬೋಲಕರ ಹತ್ಯೆಯಾಗಿ 5 ವರ್ಷ ಕಳೆದಿದೆ. ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ವಿಶೇಷ ತನಿಖಾ ದಳಗಳ ನಡುವಿನ ಕಾರ್ಯಕ್ಷಮತೆಯನ್ನು ತೆರೆದಿಡುತ್ತದೆ. ಹೀಗಿದ್ದೂ ಡಾ.ಎಂ.ಎಂ.ಕಲಬುರ್ಗಿ ಮತ್ತು  ಗೌರಿ ಲಂಕೇಶ ಹತ್ಯೆಯ ತನಿಖೆಯಲ್ಲಿ ಹೋಲಿಕೆಯಾಗುತ್ತಿದೆ. ಅದಕ್ಕೆ ಕಾರಣಗಳು ಏನಿವೆ ಎಂಬುದು ತಿಳಿಯದು ಎಂದರು.

ಈಗಾಗಲೇ ಪನ್ಸಾರೆ ಹಾಗೂ ದಾಬೋಲಕರ ಕುಟುಂಬ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಿಂಗಳಿಗೊಮ್ಮೆ ವಿಚಾರಣೆಗೆ ಹೋಗುತ್ತಿದೆ. ಅಲ್ಲಿ ಎಸ್‌ಐಟಿಯವರನ್ನು ಕರೆಯಿಸಿ ಹೈಕೋರ್ಟ್‌ ಛೀಮಾರಿ ಹಾಕುತ್ತಿದೆ. ಈವರೆಗೂ ತನಿಖೆಗೆ ಸಂಬಂಧಿಸಿದ ಅಪ್‌ಡೆಟ್‌ ಯಾಕಿಲ್ಲ ಎಂದು ಕೇಳಿದರೆ ಎಸ್‌ಐಟಿ ಬಳಿ ಉತ್ತರವೇ ಇಲ್ಲದಂತಾಗಿದೆ. 5 ವರ್ಷ  ಬಳಿಕ ಡಾ.ನರೇಂದ್ರ ದಾಬೋಲಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಂಗಬಾದ್‌ನ ರೋಜಾ ಬಾಜಾರ್‌ ಪ್ರದೇಶದ ನಿವಾಸಿ ಸಚಿನ ಅಂಧುರೆಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಎರಡು ದಿನಗಳ ಮುನ್ನವೇ ಔರಂಗಾಬಾದ್‌ದಿಂದ ಸಚಿನ ಅಂಧುರೆಯನ್ನು ಸಿಬಿಐ ಮಹಾರಾಷ್ಟ್ರಕ್ಕೆ ಕರೆ ತಂದಿದೆ. ಸಿಬಿಐ, ಇನ್ನು ಮುಂದೆ ಪನ್ಸಾರೆ ಹಂತಕರನ್ನೂ ಪತ್ತೆ ಮಾಡುವ ಬಗ್ಗೆ ವಿಶ್ವಾಸ ಮೂಡಿದೆ ಎನ್ನುತ್ತಾರೆ ಡಾ| ಮೇಘಾ ಪಾನ್ಸರೆ.

ಬೆಳಗಾವಿಯಲ್ಲಿ ಪ್ಲಾನ್‌
ಗೌರಿ ಹತ್ಯೆ ಬೆಂಗಳೂರಿನಲ್ಲಿ ನಡೆದರೂ ಇದರ ಸ್ಕೆಚ್‌ ತಯಾರಾಗಿದ್ದು ಬೆಳಗಾವಿಯಲ್ಲಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹತ್ಯೆ ಪ್ರಕರಣದಲ್ಲಿ ಈಗಾಗಲೇ ಬಂಧಿಯಾಗಿರುವ ಢಾಬಾ ಮಾಲೀಕ ಭರತ ಕುರಣೆಯ ತೀವ್ರ ವಿಚಾರಣೆ ನಡೆಯುತ್ತಿದೆ. ಖಾನಾಪುರದ ಜಾಂಬೋಟಿ ಬಳಿ ಪಿಸ್ತೂಲು ತರಬೇತಿ ನಡೆದಿದ್ದು, ಬೆಳಗಾವಿ ನಗರದ ಸುತ್ತಲೂ ಹತ್ಯೆಯ ಪ್ಲಾನ್‌ ರೆಡಿ ಮಾಡಿದ್ದು ನೋಡಿದರೆ ಬೆಳಗಾವಿಯ ಲಿಂಕ್‌ ಇದೆ ಎಂಬುದು ಗೊತ್ತಾಗುತ್ತಿದೆ. ಮಹಾರಾಷ್ಟ್ರದ ಅಮೋಲ ಕಾಳೆ, ವಿಜಯಪುರದ ಪರಶುರಾಮ ವಾಘೊ¾àರೆ ಬೆಳಗಾವಿಯ ಕೆಲ ಯುವಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

– ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.