ವಿಚಾರವಾದಿಗಳ ಹತ್ಯೆ: ಮುಂದಿನ ಟಾರ್ಗೆಟ್‌ ನಾನೇ!


Team Udayavani, Aug 20, 2018, 6:00 AM IST

19bgv-11a.jpg

ಬೆಳಗಾವಿ: “ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಡಾ.ನರೇಂದ್ರ ದಾಬೋಲಕರ, ಗೋವಿಂದ ಪನ್ಸಾರೆ, ಗೌರಿ ಲಂಕೇಶ, ಡಾ| ಎಂ.ಎಂ.ಕಲಬುರ್ಗಿ ಹತ್ಯೆಗೆ ಬಳಸಲಾದ ಅಸ್ತ್ರಗಳು ಒಂದೇ ಮಾದರಿಯದ್ದು, ಹತ್ಯೆಯ ಸಾಮ್ಯತೆ ಹಾಗೂ ಕೊಂದವರು ಒಂದೇ ಗುಂಪಿನ ಮನಸ್ಥಿತಿಯವರಾ ಎಂಬ ಅನುಮಾನ ಮೂಡುತ್ತಿದೆ’.

-ಹೀಗೆ ಅನುಮಾನ ವ್ಯಕ್ತಪಡಿಸಿದವರು ಗೋವಿಂದ ಪನ್ಸಾರೆ ಅವರ ಮೊಮ್ಮಗಳು, ಕೊಲ್ಲಾಪುರದ ಡಾ.ಮೇಘಾ ಪನ್ಸಾರೆ.

ಮಹಾರಾಷ್ಟ್ರದಲ್ಲಿ ನರೇಂದ್ರ ದಾಬೋಲಕರ ಹತ್ಯೆಯಾಗಿ ಆ.20ಕ್ಕೆ ಐದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ “ಉದಯವಾಣಿ’ ಅವರನ್ನು ಸಂಪರ್ಕಿಸಿದಾಗ ಹಲವು ಪ್ರಶ್ನೆಗಳನ್ನು ಅವರು ಎತ್ತಿದರು. ಹತ್ಯೆಯ ಸಾಮ್ಯತೆ ಒಂದೆಯಾದರೂ ಆರೋಪಿಗಳ ಪತ್ತೆ ಏಕಾಗುತ್ತಿಲ್ಲ? ಎರಡೂ ರಾಜ್ಯದ ಸರ್ಕಾರಗಳು ಬೇರೆ, ಬೇರೆ ಇವೆ ಎಂಬ ಕಾರಣಕ್ಕೋ ಅಥವಾ ಇಚ್ಛಾಶಕ್ತಿ ಕೊರತೆಯೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ಎಸ್‌ಐಟಿಗೆ ಹೋಲಿಸಿದರೆ ಮಹಾರಾಷ್ಟ್ರದ ಎಸ್‌ಐಟಿ ತನಿಖೆಯ ಕಾರ್ಯಕ್ಷಮತೆ ತೃಪ್ತಿಕರವಾಗಿಲ್ಲ. ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿದಂತೆ ಕರ್ನಾಟಕದ ವಿಶೇಷ ತನಿಖಾ ದಳ ಈಗಾಗಲೇ 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಾಹಿತಿ ಸಂಗ್ರಹಿಸಿದೆ. ವಿಚಾರಣೆ ಸಂದರ್ಭದಲ್ಲಿಯೇ ದೊರೆತ ದಿನಚರಿ ಪುಸ್ತಕದ ಮಾಹಿತಿ ನನ್ನನ್ನೂ ಸೇರಿ ಮುಕ್ತಾ ಹಾಗೂ ಹಮೀದ್‌ ದಾಬೋಲಕರ ಮೇಲೆ ದುಷ್ಕರ್ಮಿಗಳ ಕಣ್ಣು ಇರುವುದನ್ನು ಖಚಿತಪಡಿಸಿವೆ. ಇದೇ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಶೇಷ ತನಿಖಾ ದಳ ನನಗೂ ಹಾಗೂ ಮುಕ್ತಾ, ಹಮೀದ್‌ ದಾಬೋಲಕರಗೆ ಎಕ್ಸ್‌ ಭದ್ರತೆ ಒದಗಿಸಿದೆ.

ಆದರೆ, ನಮ್ಮ ತಂದೆ ಹಾಗೂ ನರೇಂದ್ರ ದಾಬೋಲಕರ ಹತ್ಯೆಗೆ ಸಂಬಂಧಿಸಿದಂತೆ ಈಗಷ್ಟೇ ಮೂವರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಎಸ್‌ಐಟಿ ತಿಳಿಸಿದೆ. ನಮ್ಮ ತಂದೆ ಹತ್ಯೆಯಾಗಿ 3 ವರ್ಷ,  ದಾಬೋಲಕರ ಹತ್ಯೆಯಾಗಿ 5 ವರ್ಷ ಕಳೆದಿದೆ. ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ವಿಶೇಷ ತನಿಖಾ ದಳಗಳ ನಡುವಿನ ಕಾರ್ಯಕ್ಷಮತೆಯನ್ನು ತೆರೆದಿಡುತ್ತದೆ. ಹೀಗಿದ್ದೂ ಡಾ.ಎಂ.ಎಂ.ಕಲಬುರ್ಗಿ ಮತ್ತು  ಗೌರಿ ಲಂಕೇಶ ಹತ್ಯೆಯ ತನಿಖೆಯಲ್ಲಿ ಹೋಲಿಕೆಯಾಗುತ್ತಿದೆ. ಅದಕ್ಕೆ ಕಾರಣಗಳು ಏನಿವೆ ಎಂಬುದು ತಿಳಿಯದು ಎಂದರು.

ಈಗಾಗಲೇ ಪನ್ಸಾರೆ ಹಾಗೂ ದಾಬೋಲಕರ ಕುಟುಂಬ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಿಂಗಳಿಗೊಮ್ಮೆ ವಿಚಾರಣೆಗೆ ಹೋಗುತ್ತಿದೆ. ಅಲ್ಲಿ ಎಸ್‌ಐಟಿಯವರನ್ನು ಕರೆಯಿಸಿ ಹೈಕೋರ್ಟ್‌ ಛೀಮಾರಿ ಹಾಕುತ್ತಿದೆ. ಈವರೆಗೂ ತನಿಖೆಗೆ ಸಂಬಂಧಿಸಿದ ಅಪ್‌ಡೆಟ್‌ ಯಾಕಿಲ್ಲ ಎಂದು ಕೇಳಿದರೆ ಎಸ್‌ಐಟಿ ಬಳಿ ಉತ್ತರವೇ ಇಲ್ಲದಂತಾಗಿದೆ. 5 ವರ್ಷ  ಬಳಿಕ ಡಾ.ನರೇಂದ್ರ ದಾಬೋಲಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಂಗಬಾದ್‌ನ ರೋಜಾ ಬಾಜಾರ್‌ ಪ್ರದೇಶದ ನಿವಾಸಿ ಸಚಿನ ಅಂಧುರೆಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಎರಡು ದಿನಗಳ ಮುನ್ನವೇ ಔರಂಗಾಬಾದ್‌ದಿಂದ ಸಚಿನ ಅಂಧುರೆಯನ್ನು ಸಿಬಿಐ ಮಹಾರಾಷ್ಟ್ರಕ್ಕೆ ಕರೆ ತಂದಿದೆ. ಸಿಬಿಐ, ಇನ್ನು ಮುಂದೆ ಪನ್ಸಾರೆ ಹಂತಕರನ್ನೂ ಪತ್ತೆ ಮಾಡುವ ಬಗ್ಗೆ ವಿಶ್ವಾಸ ಮೂಡಿದೆ ಎನ್ನುತ್ತಾರೆ ಡಾ| ಮೇಘಾ ಪಾನ್ಸರೆ.

ಬೆಳಗಾವಿಯಲ್ಲಿ ಪ್ಲಾನ್‌
ಗೌರಿ ಹತ್ಯೆ ಬೆಂಗಳೂರಿನಲ್ಲಿ ನಡೆದರೂ ಇದರ ಸ್ಕೆಚ್‌ ತಯಾರಾಗಿದ್ದು ಬೆಳಗಾವಿಯಲ್ಲಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹತ್ಯೆ ಪ್ರಕರಣದಲ್ಲಿ ಈಗಾಗಲೇ ಬಂಧಿಯಾಗಿರುವ ಢಾಬಾ ಮಾಲೀಕ ಭರತ ಕುರಣೆಯ ತೀವ್ರ ವಿಚಾರಣೆ ನಡೆಯುತ್ತಿದೆ. ಖಾನಾಪುರದ ಜಾಂಬೋಟಿ ಬಳಿ ಪಿಸ್ತೂಲು ತರಬೇತಿ ನಡೆದಿದ್ದು, ಬೆಳಗಾವಿ ನಗರದ ಸುತ್ತಲೂ ಹತ್ಯೆಯ ಪ್ಲಾನ್‌ ರೆಡಿ ಮಾಡಿದ್ದು ನೋಡಿದರೆ ಬೆಳಗಾವಿಯ ಲಿಂಕ್‌ ಇದೆ ಎಂಬುದು ಗೊತ್ತಾಗುತ್ತಿದೆ. ಮಹಾರಾಷ್ಟ್ರದ ಅಮೋಲ ಕಾಳೆ, ವಿಜಯಪುರದ ಪರಶುರಾಮ ವಾಘೊ¾àರೆ ಬೆಳಗಾವಿಯ ಕೆಲ ಯುವಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

– ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.