ಬೆಂಗಳೂರಲ್ಲಿ ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವ


Team Udayavani, Aug 20, 2018, 4:48 PM IST

20-agust-18.jpg

ದಾವಣಗೆರೆ: ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಸೆ. 16 ರಿಂದ 19ರ ವರೆಗೆ ಡಾ| ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವ-2018 ನಡೆಯಲಿದೆ ಎಂದು ಉತ್ತರ ಕರ್ನಾಟಕ ಡಾ| ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಕೊಟ್ರೇಶ್‌ ಬಾರ್ಕಿ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡದ ಖ್ಯಾತ ನಟರಾಗಿದ್ದ ಡಾ| ವಿಷ್ಣುವರ್ಧನ್‌ ನಟನೆಯ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿದ್ದವರು. ಅನೇಕ ಪಾತ್ರಗಳ ಮೂಲಕ ನಾಡಿನ ಜನರಿಗೆ ಜೀವನ ಸಂದೇಶ ನೀಡಿದವರು. ಅಂತಹ ಮಹಾನ್‌ ನಾಯಕ ನಟನ ಹೆಸರಿನಲ್ಲಿ ರಾಷ್ಟ್ರೀಯ ಉತ್ಸವ ನಡೆಸಲಾಗುತ್ತಿದೆ. ಕಳೆದ ವರ್ಷ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಸಲಾಗಿತ್ತು. ಈ ವರ್ಷ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸೆ. 16 ರಂದು ಉತ್ಸವದ ಮೊದಲ ದಿನ ಡಾ| ವಿಷ್ಣುವರ್ಧನ್‌ ಭಾವಚಿತ್ರದ ಭವ್ಯ ಮೆರವಣಿಗೆ ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಇಲ್ಲವೇ ನಾಡಿನ ಖ್ಯಾತ ಸ್ವಾಮೀಜಿ ಮೆರವಣಿಗೆ ಉದ್ಘಾಟಿಸುವರು. ಅಂದು ಸಂಜೆ 4.30ಕ್ಕೆ ಕುವೆಂಪು ಕಲಾಕ್ಷೇತ್ರದಲ್ಲಿ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ರಮ, ನಂತರ ಡಾ| ವಿಷ್ಣುವರ್ಧನ್‌ ಯುಗಳಗೀತೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

17 ರಂದು ಕನ್ನಡ ಚಿತ್ರಕೂಟವನ್ನು ಮಾಜಿ ಸಚಿವ ಬಿ.ಎಲ್‌. ಶಂಕರ್‌ ಇತರರು ಉದ್ಘಾಟಿಸುವರು. ಆ ನಂತರ ಡಾ| ವಿಷ್ಣುವರ್ಧನ್‌ ಅವರೊಂದಿಗೆ ನಟಿಸಿರುವ ಲಕ್ಷ್ಮಿ, ಸುಹಾಸಿನಿ, ಅಂಬಿಕಾ. ಭವ್ಯ ಇತರರೊಡಗೂಡಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಕನ್ನಡ ಕಿರು ಚಿತ್ರೋತ್ಸವ, ಸಂಜೆ 6ಕ್ಕೆ ಆಪ್ತಮಿತ್ರನ ಆಪ್ತಕೂಟ ನಡೆಯಲಿದೆ. ಡಾ| ವಿಷ್ಣುವರ್ಧನ್‌ ಅವರ ಆಪ್ತರು ತಮ್ಮ ಅಭಿಪ್ರಾಯ, ಅನಿಸಿಕೆ ಹಂಚಿಕೊಳ್ಳುವರು ಎಂದು ತಿಳಿಸಿದರು.

ರಾಷ್ಟ್ರೀಯ ಉತ್ಸವದ ಕೊನೆಯ ದಿನ ಬೆಳಗ್ಗೆ ಕರ್ನಾಟಕ ವಾಣಿಜ್ಯ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಕನ್ನಡ ಚಿತ್ರರಂಗದ ಯುವ ನಟ-ನಟಿಯರ ಕಾರ್ಯಕ್ರಮ, ಸಂಜೆ 6ಕ್ಕೆ ಸಂಗೀತ ನಿರ್ದೇಶಕರ ಸಾರಥ್ಯದಲ್ಲಿ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು. ಡಾ| ವಿಷ್ಣುವರ್ಧನ್‌ರವರ ಜನ್ಮದಿನ ಸೆ. 18 ನ್ನು ವಿಶ್ವ ಆದರ್ಶ ದಿನವನ್ನಾಗಿ ಆಚರಿಸಬೇಕು ಎಂದು ಕೋರಿ ಡಾ| ವಿಷ್ಣು ಸೇನಾ ಸಮಿತಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸುತ್ತದೆ. ಸಾಂಸ್ಕೃತಿಕ ರಾಯಭಾರಿ ಆಗಿರುವ ಡಾ| ವಿಷ್ಣುವರ್ಧನ್‌ರವರು ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ನುಡಿದಂತೆ ನಡೆದ ಆದರ್ಶ ನಟ. ಹಾಗಾಗಿ ಅವರ ಜನ್ಮದಿನವನ್ನು ಆದರ್ಶ ದಿನವನ್ನಾಗಿ ಆಚರಣೆ ಮಾಡಬೇಕು ಎಂಬುದು ನಮ್ಮ ಒತ್ತಾಯ ಎಂದು ತಿಳಿಸಿದರು. ಡಾ| ವಿಷ್ಣುವರ್ಧನ್‌ ಸೇನಾ ಸಮಿತಿ ಜಿಲ್ಲಾ ಅಧ್ಯಕ್ಷ ಪ್ರವೀಣ್‌ಕುಮಾರ್‌, ಅಜಯ್‌, ಹಾಲೇಕಲ್‌ ಸುರೇಶ್‌, ರಮೇಶ್‌, ಪರಮೇಶ್‌, ರವಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.