ಕೊಡಗು;ಕೊಚ್ಚಿ ಹೋದ ಬದುಕು,ಮತ್ತೊಂದೆಡೆ ನೆರೆ ಪ್ರದೇಶದಲ್ಲಿ ಕಳ್ಳರ ಕಾಟ
Team Udayavani, Aug 20, 2018, 4:31 PM IST
ಕೊಡಗು/ಮಡಿಕೇರಿ: ಕಂಡು ಕೇಳರಿಯದ ರೀತಿಯಲ್ಲಿ ಕೊಡಗು ಮಹಾಮಳೆಗೆ ತತ್ತರಿಸಿ ಹೋಗಿದ್ದರೆ, ಮತ್ತೊಂದೆಡೆ ನೆರೆ ಪೀಡಿತ ಪ್ರದೇಶಗಳಲ್ಲಿ ಕಳ್ಳರ ಹಾವಳಿಗೆ ಜನ ಬೆಚ್ಚಿ ಬಿದ್ದಿದ್ದಾರೆ. ಮಡಿಕೇರಿಯ ಜೋಡುಪಾಲದ ಸುತ್ತಮುತ್ತಲಿನಲ್ಲಿ ಸುಮಾರು 30 ಮನೆಗಳಿಗೆ ಕನ್ನ ಹಾಕಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ನೆರೆ ಪೀಡಿತ ಪ್ರದೇಶಗಳಲ್ಲಿ ಗುಂಪು, ಗುಂಪಾಗಿ ಬರುವ ತಂಡ ಮನೆಯ ಹೆಂಚುಗಳನ್ನು ಇಳಿಸಿ ಚಿನ್ನಾಭರಣ, ಹಣ, ವಾಹನಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಮಳೆಯ ಅಬ್ಬರದಿಂದ ಜೀವ ಉಳಿಸಿಕೊಳ್ಳಲು ಜನರು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಯನ್ನೇ ಬಳಸಿಕೊಂಡ ಖದೀಮರು ಊರಿನೊಳಗೆ ಹೋಗಿ ಕಳ್ಳತನಕ್ಕೆ ಇಳಿದಿದ್ದಾರೆ.
ಈ ಬಗ್ಗೆ ಅಲರ್ಟ್ ಆಗಿರುವ ಪೊಲೀಸ್ ಇಲಾಖೆ ಇದೀಗ ದಕ್ಷಿಣ ಕನ್ನಡ, ಕೊಡಗು ಗಡಿಯಲ್ಲಿ ಸಂಪಾಜೆ ಬಳಿ ಚೆಕ್ ಪೋಸ್ಟ್ ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ