ತೆವಳುತ್ತಿದೆ ಜಾನಪದ ವಿವಿ ಗ್ರಾಮ ಚರಿತ್ರೆ ಕೋಶ ಕಾರ್ಯ


Team Udayavani, Aug 21, 2018, 6:55 AM IST

20hvr4-janapada-vv.jpg

ಹಾವೇರಿ: ದೇಶದ ಪ್ರಥಮ ಜಾನಪದ ವಿಶ್ವವಿದ್ಯಾಲಯದ ಮಹತ್ವಾಕಾಂಕ್ಷಿ “ಗ್ರಾಮ ಚರಿತ್ರೆ ಕೋಶ’ ರಚನೆ ಕಾರ್ಯ ಆಮೆಗತಿಯಲ್ಲಿ ಸಾಗಿದ್ದು ನಿರೀಕ್ಷಿತ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿದೆ.

“ಗ್ರಾಮ ಚರಿತ್ರೆ ಕೋಶ’ ಯೋಜನೆಯು ಕರ್ನಾಟಕ ಜಾನಪದ ವಿವಿ ಆರಂಭಗೊಂಡಾಗ ಹಾಕಿಕೊಂಡ ಮೊದಲ ಸಂಶೋಧನಾ ಕಾರ್ಯ. 2013-14ರಲ್ಲಿಯೇ ಆರಂಭವಾಗಿದ್ದು, 2015-16ರ ಶೈಕ್ಷಣಿಕ ಸಾಲಿನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅವ ಧಿ ಮುಗಿದು ಎರಡು ವರ್ಷಗಳಾದರೂ ಈವರೆಗೆ ಯೋಜನೆ ಅರ್ಧವೂ ಪೂರ್ಣಗೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆಯ ಕ್ಷೇತ್ರ ಮಾಹಿತಿ ಸಂಗ್ರಹ ಕಾರ್ಯ ನಡೆದಿಲ್ಲ. ಇದಕ್ಕಾಗಿ ಇನ್ನೂ ಒಂದು ವರ್ಷ ಸಮಯ  ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಬಳಿ ಕೇಳಿಕೊಂಡಿದ್ದ ವಿವಿ, 2017ರ ಮಾರ್ಚ್‌ ಒಳಗೆ ಎಲ್ಲ ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಪಡಿಸುವುದಾಗಿ ಹೇಳಿತ್ತು. ಆದರೆ ಸಮಯ ಮೀರಿ ಒಂದೂವರೆ ವರ್ಷವಾದರೂ ಯೋಜನೆ ಪೂರ್ಣಗೊಂಡಿಲ್ಲ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಜಾನಪದ ವಿವಿ ಕೇವಲ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪ್ರಕಟಿಸಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಗೆಳ ಗ್ರಾಮ ಚರಿತ್ರೆ ಕೋಶ ಮುದ್ರಣ ಹಂತದಲ್ಲಿದ್ದು ಇನ್ನುಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಗೊಳ್ಳಬೇಕಾಗಿದೆ. ಬಾಕಿ ಉಳಿದಿರುವ ಕೆಲವು ಜಿಲ್ಲೆಗಳಲ್ಲಿ ಕ್ಷೇತ್ರ ಸಮೀûಾ ಕಾರ್ಯವೂ ಪೂರ್ಣಗೊಂಡಿಲ್ಲ. ವಿವಿಯ ಮುಖ್ಯಸ್ಥರು ತಿಳಿಸುವಂತೆ ವಿಜಯಪುರದ ಕ್ಷೇತ್ರ ಸಮೀಕ್ಷೆ ಹೊಸದಾಗಿ ಆರಂಭವಾಗಬೇಕಿದೆ.

ಏನಿದು ಗ್ರಾಮ ಚರಿತ್ರೆ ಕೋಶ?: ನಾಡಿನ ದೇಸಿ ಪರಿಸರವನ್ನು ಅದರ ಮೂಲ ಆಕರಗಳೊಂದಿಗೆ ಸಂಗ್ರಹಿಸಿ, ದಾಖಲಿಸಿ ಸಂರಕ್ಷಿಸುವ ಉದ್ದೇಶದಿಂದ ರಚಿಸಿದ್ದೇ “ಗ್ರಾಮ ಚರಿತ್ರೆ ಕೋಶ’ ಯೋಜನೆ. ಸಾಂಸ್ಕೃತಿಕ ಕಣಜಗಳಾಗಿರುವ ರಾಜ್ಯದ ಎಲ್ಲ ಗ್ರಾಮಗಳಲ್ಲಿನ ಜೀವಸಂಕುಲ, ಭಾಷಾ ಬಳಕೆ ಮತ್ತು ಅಭಿವೃದ್ಧಿಯ ವಿಶಿಷ್ಟ ರೂಪಗಳು, ಜನವಸತಿ, ಶಾಲಾ-ಕಾಲೇಜು, ನೀರಿನ ವ್ಯವಸ್ಥೆ ಹೀಗೆ ಎಲ್ಲವನ್ನು ಸಂಗ್ರಹಿಸಿ, ದಾಖಲಿಸಿ ಪುಸ್ತಕ ರೂಪದಲ್ಲಿ ಹೊರತರುವ ಗುರಿ ಈ ಯೋಜನೆಯದ್ದಾಗಿದೆ.

ಎಷ್ಟು ಖರ್ಚು?: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅನುದಾನದಲ್ಲಿ ಕೈಗೊಂಡಿರುವ ಈ ಯೋಜನೆಯನ್ನು 10 ಕೋಟಿ ರೂ.ಗಳಲ್ಲಿ ರೂಪಿಸಿದ್ದು ಈಗಾಗಲೇ 8.60 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಉಳಿದ 1.40 ಕೋಟಿ ರೂ. ಬಿಡುಗಡೆ ಮಾಡಲು ಇಲಾಖೆ ಸಿದ್ಧವಾಗಿದೆಯಾದರೂ ಬಿಡುಗಡೆಯಾಗಿರುವ ಅನುದಾನಕ್ಕೆ ತಕ್ಕಂತೆ ಕೆಲಸ ಆಗದೆ ಇರುವುದರಿಂದ ವಿವಿಯೇ ಇನ್ನೂ ಬಾಕಿ ಅನುದಾನ ಪಡೆದುಕೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆ 2016ಕ್ಕೆ ಪೂರ್ಣಗೊಳ್ಳಬೇಕಿತ್ತು. ರಾಜ್ಯದ 59000 ಗ್ರಾಮಗಳ ತಳಮಟ್ಟದ ಸಮೀಕ್ಷೆ ಇದಾಗಿರುವುದರಿಂದ ನಿಖರ ಮಾಹಿತಿ ಸಂಗ್ರಹಕ್ಕಾಗಿಯೇ ಹೆಚ್ಚು ಸಮಯ ಬೇಕಾಗಿದೆ. ಈಗಾಗಲೇ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪೂರ್ಣಗೊಂಡಿದೆ. ಮೂರು ಜಿಲ್ಲೆಗಳ ಕೋಶ ಕೊನೆ ಹಂತದಲ್ಲಿದ್ದು ಉಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶವನ್ನು ಈ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸಲಾಗುವುದು.
– ಪ್ರೊ.ಡಿ.ಬಿ. ನಾಯಕ, ಕುಲಪತಿ, ಜಾನಪದ ವಿವಿ

 – ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.