ತೆವಳುತ್ತಿದೆ ಜಾನಪದ ವಿವಿ ಗ್ರಾಮ ಚರಿತ್ರೆ ಕೋಶ ಕಾರ್ಯ


Team Udayavani, Aug 21, 2018, 6:55 AM IST

20hvr4-janapada-vv.jpg

ಹಾವೇರಿ: ದೇಶದ ಪ್ರಥಮ ಜಾನಪದ ವಿಶ್ವವಿದ್ಯಾಲಯದ ಮಹತ್ವಾಕಾಂಕ್ಷಿ “ಗ್ರಾಮ ಚರಿತ್ರೆ ಕೋಶ’ ರಚನೆ ಕಾರ್ಯ ಆಮೆಗತಿಯಲ್ಲಿ ಸಾಗಿದ್ದು ನಿರೀಕ್ಷಿತ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿದೆ.

“ಗ್ರಾಮ ಚರಿತ್ರೆ ಕೋಶ’ ಯೋಜನೆಯು ಕರ್ನಾಟಕ ಜಾನಪದ ವಿವಿ ಆರಂಭಗೊಂಡಾಗ ಹಾಕಿಕೊಂಡ ಮೊದಲ ಸಂಶೋಧನಾ ಕಾರ್ಯ. 2013-14ರಲ್ಲಿಯೇ ಆರಂಭವಾಗಿದ್ದು, 2015-16ರ ಶೈಕ್ಷಣಿಕ ಸಾಲಿನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅವ ಧಿ ಮುಗಿದು ಎರಡು ವರ್ಷಗಳಾದರೂ ಈವರೆಗೆ ಯೋಜನೆ ಅರ್ಧವೂ ಪೂರ್ಣಗೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆಯ ಕ್ಷೇತ್ರ ಮಾಹಿತಿ ಸಂಗ್ರಹ ಕಾರ್ಯ ನಡೆದಿಲ್ಲ. ಇದಕ್ಕಾಗಿ ಇನ್ನೂ ಒಂದು ವರ್ಷ ಸಮಯ  ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಬಳಿ ಕೇಳಿಕೊಂಡಿದ್ದ ವಿವಿ, 2017ರ ಮಾರ್ಚ್‌ ಒಳಗೆ ಎಲ್ಲ ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಪಡಿಸುವುದಾಗಿ ಹೇಳಿತ್ತು. ಆದರೆ ಸಮಯ ಮೀರಿ ಒಂದೂವರೆ ವರ್ಷವಾದರೂ ಯೋಜನೆ ಪೂರ್ಣಗೊಂಡಿಲ್ಲ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಜಾನಪದ ವಿವಿ ಕೇವಲ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪ್ರಕಟಿಸಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಗೆಳ ಗ್ರಾಮ ಚರಿತ್ರೆ ಕೋಶ ಮುದ್ರಣ ಹಂತದಲ್ಲಿದ್ದು ಇನ್ನುಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಗೊಳ್ಳಬೇಕಾಗಿದೆ. ಬಾಕಿ ಉಳಿದಿರುವ ಕೆಲವು ಜಿಲ್ಲೆಗಳಲ್ಲಿ ಕ್ಷೇತ್ರ ಸಮೀûಾ ಕಾರ್ಯವೂ ಪೂರ್ಣಗೊಂಡಿಲ್ಲ. ವಿವಿಯ ಮುಖ್ಯಸ್ಥರು ತಿಳಿಸುವಂತೆ ವಿಜಯಪುರದ ಕ್ಷೇತ್ರ ಸಮೀಕ್ಷೆ ಹೊಸದಾಗಿ ಆರಂಭವಾಗಬೇಕಿದೆ.

ಏನಿದು ಗ್ರಾಮ ಚರಿತ್ರೆ ಕೋಶ?: ನಾಡಿನ ದೇಸಿ ಪರಿಸರವನ್ನು ಅದರ ಮೂಲ ಆಕರಗಳೊಂದಿಗೆ ಸಂಗ್ರಹಿಸಿ, ದಾಖಲಿಸಿ ಸಂರಕ್ಷಿಸುವ ಉದ್ದೇಶದಿಂದ ರಚಿಸಿದ್ದೇ “ಗ್ರಾಮ ಚರಿತ್ರೆ ಕೋಶ’ ಯೋಜನೆ. ಸಾಂಸ್ಕೃತಿಕ ಕಣಜಗಳಾಗಿರುವ ರಾಜ್ಯದ ಎಲ್ಲ ಗ್ರಾಮಗಳಲ್ಲಿನ ಜೀವಸಂಕುಲ, ಭಾಷಾ ಬಳಕೆ ಮತ್ತು ಅಭಿವೃದ್ಧಿಯ ವಿಶಿಷ್ಟ ರೂಪಗಳು, ಜನವಸತಿ, ಶಾಲಾ-ಕಾಲೇಜು, ನೀರಿನ ವ್ಯವಸ್ಥೆ ಹೀಗೆ ಎಲ್ಲವನ್ನು ಸಂಗ್ರಹಿಸಿ, ದಾಖಲಿಸಿ ಪುಸ್ತಕ ರೂಪದಲ್ಲಿ ಹೊರತರುವ ಗುರಿ ಈ ಯೋಜನೆಯದ್ದಾಗಿದೆ.

ಎಷ್ಟು ಖರ್ಚು?: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅನುದಾನದಲ್ಲಿ ಕೈಗೊಂಡಿರುವ ಈ ಯೋಜನೆಯನ್ನು 10 ಕೋಟಿ ರೂ.ಗಳಲ್ಲಿ ರೂಪಿಸಿದ್ದು ಈಗಾಗಲೇ 8.60 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಉಳಿದ 1.40 ಕೋಟಿ ರೂ. ಬಿಡುಗಡೆ ಮಾಡಲು ಇಲಾಖೆ ಸಿದ್ಧವಾಗಿದೆಯಾದರೂ ಬಿಡುಗಡೆಯಾಗಿರುವ ಅನುದಾನಕ್ಕೆ ತಕ್ಕಂತೆ ಕೆಲಸ ಆಗದೆ ಇರುವುದರಿಂದ ವಿವಿಯೇ ಇನ್ನೂ ಬಾಕಿ ಅನುದಾನ ಪಡೆದುಕೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆ 2016ಕ್ಕೆ ಪೂರ್ಣಗೊಳ್ಳಬೇಕಿತ್ತು. ರಾಜ್ಯದ 59000 ಗ್ರಾಮಗಳ ತಳಮಟ್ಟದ ಸಮೀಕ್ಷೆ ಇದಾಗಿರುವುದರಿಂದ ನಿಖರ ಮಾಹಿತಿ ಸಂಗ್ರಹಕ್ಕಾಗಿಯೇ ಹೆಚ್ಚು ಸಮಯ ಬೇಕಾಗಿದೆ. ಈಗಾಗಲೇ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪೂರ್ಣಗೊಂಡಿದೆ. ಮೂರು ಜಿಲ್ಲೆಗಳ ಕೋಶ ಕೊನೆ ಹಂತದಲ್ಲಿದ್ದು ಉಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶವನ್ನು ಈ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸಲಾಗುವುದು.
– ಪ್ರೊ.ಡಿ.ಬಿ. ನಾಯಕ, ಕುಲಪತಿ, ಜಾನಪದ ವಿವಿ

 – ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.