ಉ.ಕ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಸೂರು!


Team Udayavani, Aug 21, 2018, 6:00 AM IST

20-bgk-3b.jpg

ಹುನಗುಂದ: ವರುಣನ ಆರ್ಭಟಕ್ಕೆ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಸಾವು, ನೋವಿಗೆ ರಾಜ್ಯದ ಜನ ಮಿಡಿದ ಪರಿ ಶ್ಲಾಘನಾರ್ಹ. ನೊಂದ ಜೀವಗಳಿಗೆ ಸರ್ಕಾರ ಅಭಯ ನೀಡಿ ಧೈರ್ಯ ತುಂಬಿದೆ. ಅಂತಹದ್ದೇ ಸ್ಥಿತಿ 2009ರಲ್ಲಿ ಉತ್ತರ ಕರ್ನಾಟಕದಲ್ಲೂ ಎದುರಾಗಿತ್ತು. ಬದುಕು ಛಿದ್ರವಾಗಿ ಜನ ಕಂಗಾಲಾಗಿದ್ದರು. ಅಂದು ನೀರಿನಲ್ಲಿ ಮುಳುಗಿದ ಊರುಗಳ ಜನರು ಈಗಲೂ ತಾತ್ಕಾಲಿಕ ಶೆಡ್‌ನ‌ಲ್ಲಿ ವಾಸವಾಗಿದ್ದಾರೆ!

2009ರಲ್ಲಿ ಮಹಾಮಳೆಗೆ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿದಿದ್ದವು. ನದಿಗಳ ರಭಸದ ಹರಿವಿನ ಜತೆಗೆ 2 ತಿಂಗಳ ಕಾಲ ಎಡಬಿಡದೆ ಸುರಿದ ಮಳೆಗೆ ಬಾಗಲಕೋಟೆ, ಗದಗ, ವಿಜಯಪುರ, ಬೆಳಗಾವಿ, ಯಾದಗಿರಿ, ರಾಯಚೂರು ಜಿಲ್ಲೆಗಳು ನಲುಗಿದ್ದವು. ನಾರಾಯಣಪುರ ಹಿನ್ನೀರಿನಿಂದ ಹುನಗುಂದ ತಾಲೂಕಿನ ಕೆಂಗಲಕಡಪಟ್ಟಿ-236, ಬಿಸನಾಳ-121, ಬಿಸನಾಳಕೊಪ್ಪ-183, ಕಮದತ್ತ-121, ಎಮ್ಮೆಟ್ಟಿ-259, ಖಜಗಲ್‌-126, ವರಗೋಡದಿನ್ನಿ-313, ಅಡಿಹಾಳ-407, ಅನಪಕಟ್ಟಿ-384, ಕೆಸರಪೆಂಟಿ-114, ಇದ್ದಲಗಿ-1136 ಸೇರಿ ಒಟ್ಟು 3,432 ಮನೆಗಳು ಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡಿದ್ದವು. ಈ ಎಲ್ಲ ಮನೆಗಳ ಸಂತ್ರಸ್ತರಿಗೆ ಆಯಾ ಗ್ರಾಮಗಳ ಪಕ್ಕದಲ್ಲೇ ಜಿಲ್ಲಾಡಳಿತ ತಾತ್ಕಾಲಿಕ ಶೆಡ್‌ ನಿರ್ಮಿಸಿ ಆಶ್ರಯ ಒದಗಿಸಿತ್ತು. ಆದರೆ, ಸರ್ಕಾರದ ಗೊಂದಲದ ನೀತಿಯಿಂದ ಇಂದಿಗೂ ವಾಸಿಸಲು ಶಾಶ್ವತ ಮನೆ ಕಲ್ಪಿಸಿಲ್ಲ. ತಾತ್ಕಾಲಿಕ ಶೆಡ್‌ನ‌ಲ್ಲಿ ಕಾಯಂ ವಾಸವಾಗಿದ್ದಾರೆ.

ಭೂಸ್ವಾಧೀನದಲ್ಲೇ ಕಾಲ ಕಳೆದರು:
ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕೈಗೊಳ್ಳಲು ಕಂದಾಯ ಇಲಾಖೆಗೆ ಸೂಚಿಸಿತ್ತು. 2009ರಿಂದ 2013ರವರೆಗೆ ಕಂದಾಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಾತ್ಕಾಲಿಕ ಶೆಡ್‌ ನಿರ್ಮಿಸಿದ ಜಾಗೆಯಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ಭೂಸ್ವಾಧೀನ ಪ್ರಕ್ರಿಯೆಯಲ್ಲೇ ಕಾಲ ಕಳೆದಿತ್ತು.

ಹಲವು ಹೋರಾಟ, ಸಂತ್ರಸ್ತರ ಒತ್ತಾಯದ ಬಳಿಕ ಸರ್ಕಾರ ಈ ಗ್ರಾಮಗಳ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವ ಹೊಣೆಯನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಹಾಗೂ ಪುನರ್‌ ನಿರ್ಮಾಣ ಕಚೇರಿಗೆ ವಹಿಸಿತು. ಆಗ ಈ ಇಲಾಖೆಯಿಂದ ಮತ್ತೆ ಮೊದಲಿನಿಂದ ಕೆಲಸ ಆರಂಭಿಸಿತು. ಹೀಗಾಗಿ 8 ವರ್ಷ ಕಳೆದರೂ ಅವರೆಲ್ಲ ಸರ್ಕಾರದ ಸೂರು ಕಾಣದೇ ಶೆಡ್‌ನ‌ಲ್ಲಿ ವಾಸಿಸುವ ಪರಿಸ್ಥಿತಿ ಬಂದೋದಗಿದೆ. ಸದ್ಯ ಕೊಡಗು ಜಿಲ್ಲೆಯಲ್ಲಿನ ಸ್ಥಿತಿ ಕಂಡು 8 ವರ್ಷಗಳ ಹಿಂದಿನ ಕಹಿ ಅನುಭವ ನೆನಪಿಗೆ ಬರುತ್ತಿದೆ. ಸೂರು ಕಲ್ಪಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಶೆಡ್‌ನ‌ಲ್ಲೇ ಬಿಟ್ಟಿದ್ದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಗೆ ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರಿಂದ ತಡವಾಗಿದೆ. ಸದ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ನಿವೇಶನ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ.
– ಪಿ.ಎ. ಮೇಘಣ್ಣವರ, ಆಯುಕ್ತರು, ಯುಕೆಪಿ

– ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.