ಉ.ಕ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಸೂರು!


Team Udayavani, Aug 21, 2018, 6:00 AM IST

20-bgk-3b.jpg

ಹುನಗುಂದ: ವರುಣನ ಆರ್ಭಟಕ್ಕೆ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಸಾವು, ನೋವಿಗೆ ರಾಜ್ಯದ ಜನ ಮಿಡಿದ ಪರಿ ಶ್ಲಾಘನಾರ್ಹ. ನೊಂದ ಜೀವಗಳಿಗೆ ಸರ್ಕಾರ ಅಭಯ ನೀಡಿ ಧೈರ್ಯ ತುಂಬಿದೆ. ಅಂತಹದ್ದೇ ಸ್ಥಿತಿ 2009ರಲ್ಲಿ ಉತ್ತರ ಕರ್ನಾಟಕದಲ್ಲೂ ಎದುರಾಗಿತ್ತು. ಬದುಕು ಛಿದ್ರವಾಗಿ ಜನ ಕಂಗಾಲಾಗಿದ್ದರು. ಅಂದು ನೀರಿನಲ್ಲಿ ಮುಳುಗಿದ ಊರುಗಳ ಜನರು ಈಗಲೂ ತಾತ್ಕಾಲಿಕ ಶೆಡ್‌ನ‌ಲ್ಲಿ ವಾಸವಾಗಿದ್ದಾರೆ!

2009ರಲ್ಲಿ ಮಹಾಮಳೆಗೆ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿದಿದ್ದವು. ನದಿಗಳ ರಭಸದ ಹರಿವಿನ ಜತೆಗೆ 2 ತಿಂಗಳ ಕಾಲ ಎಡಬಿಡದೆ ಸುರಿದ ಮಳೆಗೆ ಬಾಗಲಕೋಟೆ, ಗದಗ, ವಿಜಯಪುರ, ಬೆಳಗಾವಿ, ಯಾದಗಿರಿ, ರಾಯಚೂರು ಜಿಲ್ಲೆಗಳು ನಲುಗಿದ್ದವು. ನಾರಾಯಣಪುರ ಹಿನ್ನೀರಿನಿಂದ ಹುನಗುಂದ ತಾಲೂಕಿನ ಕೆಂಗಲಕಡಪಟ್ಟಿ-236, ಬಿಸನಾಳ-121, ಬಿಸನಾಳಕೊಪ್ಪ-183, ಕಮದತ್ತ-121, ಎಮ್ಮೆಟ್ಟಿ-259, ಖಜಗಲ್‌-126, ವರಗೋಡದಿನ್ನಿ-313, ಅಡಿಹಾಳ-407, ಅನಪಕಟ್ಟಿ-384, ಕೆಸರಪೆಂಟಿ-114, ಇದ್ದಲಗಿ-1136 ಸೇರಿ ಒಟ್ಟು 3,432 ಮನೆಗಳು ಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡಿದ್ದವು. ಈ ಎಲ್ಲ ಮನೆಗಳ ಸಂತ್ರಸ್ತರಿಗೆ ಆಯಾ ಗ್ರಾಮಗಳ ಪಕ್ಕದಲ್ಲೇ ಜಿಲ್ಲಾಡಳಿತ ತಾತ್ಕಾಲಿಕ ಶೆಡ್‌ ನಿರ್ಮಿಸಿ ಆಶ್ರಯ ಒದಗಿಸಿತ್ತು. ಆದರೆ, ಸರ್ಕಾರದ ಗೊಂದಲದ ನೀತಿಯಿಂದ ಇಂದಿಗೂ ವಾಸಿಸಲು ಶಾಶ್ವತ ಮನೆ ಕಲ್ಪಿಸಿಲ್ಲ. ತಾತ್ಕಾಲಿಕ ಶೆಡ್‌ನ‌ಲ್ಲಿ ಕಾಯಂ ವಾಸವಾಗಿದ್ದಾರೆ.

ಭೂಸ್ವಾಧೀನದಲ್ಲೇ ಕಾಲ ಕಳೆದರು:
ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕೈಗೊಳ್ಳಲು ಕಂದಾಯ ಇಲಾಖೆಗೆ ಸೂಚಿಸಿತ್ತು. 2009ರಿಂದ 2013ರವರೆಗೆ ಕಂದಾಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಾತ್ಕಾಲಿಕ ಶೆಡ್‌ ನಿರ್ಮಿಸಿದ ಜಾಗೆಯಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ಭೂಸ್ವಾಧೀನ ಪ್ರಕ್ರಿಯೆಯಲ್ಲೇ ಕಾಲ ಕಳೆದಿತ್ತು.

ಹಲವು ಹೋರಾಟ, ಸಂತ್ರಸ್ತರ ಒತ್ತಾಯದ ಬಳಿಕ ಸರ್ಕಾರ ಈ ಗ್ರಾಮಗಳ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವ ಹೊಣೆಯನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಹಾಗೂ ಪುನರ್‌ ನಿರ್ಮಾಣ ಕಚೇರಿಗೆ ವಹಿಸಿತು. ಆಗ ಈ ಇಲಾಖೆಯಿಂದ ಮತ್ತೆ ಮೊದಲಿನಿಂದ ಕೆಲಸ ಆರಂಭಿಸಿತು. ಹೀಗಾಗಿ 8 ವರ್ಷ ಕಳೆದರೂ ಅವರೆಲ್ಲ ಸರ್ಕಾರದ ಸೂರು ಕಾಣದೇ ಶೆಡ್‌ನ‌ಲ್ಲಿ ವಾಸಿಸುವ ಪರಿಸ್ಥಿತಿ ಬಂದೋದಗಿದೆ. ಸದ್ಯ ಕೊಡಗು ಜಿಲ್ಲೆಯಲ್ಲಿನ ಸ್ಥಿತಿ ಕಂಡು 8 ವರ್ಷಗಳ ಹಿಂದಿನ ಕಹಿ ಅನುಭವ ನೆನಪಿಗೆ ಬರುತ್ತಿದೆ. ಸೂರು ಕಲ್ಪಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಶೆಡ್‌ನ‌ಲ್ಲೇ ಬಿಟ್ಟಿದ್ದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಗೆ ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರಿಂದ ತಡವಾಗಿದೆ. ಸದ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ನಿವೇಶನ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ.
– ಪಿ.ಎ. ಮೇಘಣ್ಣವರ, ಆಯುಕ್ತರು, ಯುಕೆಪಿ

– ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.