ಕೊಡಗು; ಮಹಾಮಳೆಗೆ ಕೊಚ್ಚಿ ಹೋಯ್ತು ಯುವತಿಯರಿಬ್ಬರ ಮದುವೆ ಕನಸು!
Team Udayavani, Aug 22, 2018, 6:42 PM IST
ಕೊಡಗು: ಮಹಾಮಳೆಗೆ ದಕ್ಷಿಣದ ಕಾಶ್ಮೀರ ಎನಿಸಿಕೊಂಡಿದ್ದ ಕೊಡಗಿನ ಜನರ ಬದುಕು ಕೊಚ್ಚಿ ಹೋಗಿದ್ದರೆ, ಮತ್ತೊಂದೆಡೆ ಒಬ್ಬೊಬ್ಬರದ್ದು ಕರುಣಾಜನಕ ಕಥೆಯಾಗಿದೆ. ಬದುಕಿನಲ್ಲಿ ಹಲವಾರು ನಿರೀಕ್ಷೆ, ಆಸೆಗಳನ್ನು ಇಟ್ಟುಕೊಂಡಿದ್ದ ಇಬ್ಬರು ಯುವತಿಯರ ಸಪ್ತಪದಿ ತುಳಿಯುವ ಕನಸು ಕೊಚ್ಚಿ ಹೋಗಿದೆ.
ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದ ಮಂಜುಳಾಗೆ ಆಗಸ್ಟ್ 26ರಂದು ಹಾಗು ರಂಜಿತಾಗೆ ಸೆಪ್ಟೆಂಬರ್ 12ರಂದು ಮದುವೆ ನಿಶ್ಚಯವಾಗಿತ್ತು. ಅಷ್ಟೇ ಅಲ್ಲ ಸುಮಾರು 500ಕ್ಕೂ ಅಧಿಕ ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದರು.
ಆದರೆ ಏಕಾಏಕಿ ಸುರಿದ ವರುಣನ ಅಬ್ಬರಕ್ಕೆ ಮದುವೆಗಾಗಿ ತೆಗೆದಿಟ್ಟಿದ್ದ ಸೀರೆ, ಬಟ್ಟೆ, ಹಣ, ಚಿನ್ನವೆಲ್ಲಾ ಮನೆಯ ಜೊತೆಯೇ ಕೊಚ್ಚಿ ಹೋಗಿದೆ. ಇದೀಗ ಇಡೀ ಕುಟುಂಬ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದೆ. ಇಬ್ಬರಿಗೂ ಕೇರಳದ ಯುವಕರ ಜೊತೆ ಮದುವೆ ನಿಶ್ಚಯವಾಗಿತ್ತು.
ಮಳೆ, ಪ್ರವಾಹಕ್ಕೆ ಕೇರಳ ಕೂಡಾ ನಲುಗಿ ಹೋಗಿದೆ. ಏತನ್ಮಧ್ಯೆ ವರನ ಕಡೆಯವರು ಆಡಂಬರವಿಲ್ಲದೆ ಮದುವೆಯಾಗಲು ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಮನೆಯ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಹೋದರಿಯರ ಅಣ್ಣ ಮಾಧ್ಯಮದ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ