ಕೊಡಗು; ಮಹಾಮಳೆಗೆ ಕೊಚ್ಚಿ ಹೋಯ್ತು ಯುವತಿಯರಿಬ್ಬರ ಮದುವೆ ಕನಸು!
Team Udayavani, Aug 22, 2018, 6:42 PM IST
ಕೊಡಗು: ಮಹಾಮಳೆಗೆ ದಕ್ಷಿಣದ ಕಾಶ್ಮೀರ ಎನಿಸಿಕೊಂಡಿದ್ದ ಕೊಡಗಿನ ಜನರ ಬದುಕು ಕೊಚ್ಚಿ ಹೋಗಿದ್ದರೆ, ಮತ್ತೊಂದೆಡೆ ಒಬ್ಬೊಬ್ಬರದ್ದು ಕರುಣಾಜನಕ ಕಥೆಯಾಗಿದೆ. ಬದುಕಿನಲ್ಲಿ ಹಲವಾರು ನಿರೀಕ್ಷೆ, ಆಸೆಗಳನ್ನು ಇಟ್ಟುಕೊಂಡಿದ್ದ ಇಬ್ಬರು ಯುವತಿಯರ ಸಪ್ತಪದಿ ತುಳಿಯುವ ಕನಸು ಕೊಚ್ಚಿ ಹೋಗಿದೆ.
ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದ ಮಂಜುಳಾಗೆ ಆಗಸ್ಟ್ 26ರಂದು ಹಾಗು ರಂಜಿತಾಗೆ ಸೆಪ್ಟೆಂಬರ್ 12ರಂದು ಮದುವೆ ನಿಶ್ಚಯವಾಗಿತ್ತು. ಅಷ್ಟೇ ಅಲ್ಲ ಸುಮಾರು 500ಕ್ಕೂ ಅಧಿಕ ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದರು.
ಆದರೆ ಏಕಾಏಕಿ ಸುರಿದ ವರುಣನ ಅಬ್ಬರಕ್ಕೆ ಮದುವೆಗಾಗಿ ತೆಗೆದಿಟ್ಟಿದ್ದ ಸೀರೆ, ಬಟ್ಟೆ, ಹಣ, ಚಿನ್ನವೆಲ್ಲಾ ಮನೆಯ ಜೊತೆಯೇ ಕೊಚ್ಚಿ ಹೋಗಿದೆ. ಇದೀಗ ಇಡೀ ಕುಟುಂಬ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದೆ. ಇಬ್ಬರಿಗೂ ಕೇರಳದ ಯುವಕರ ಜೊತೆ ಮದುವೆ ನಿಶ್ಚಯವಾಗಿತ್ತು.
ಮಳೆ, ಪ್ರವಾಹಕ್ಕೆ ಕೇರಳ ಕೂಡಾ ನಲುಗಿ ಹೋಗಿದೆ. ಏತನ್ಮಧ್ಯೆ ವರನ ಕಡೆಯವರು ಆಡಂಬರವಿಲ್ಲದೆ ಮದುವೆಯಾಗಲು ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಮನೆಯ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಹೋದರಿಯರ ಅಣ್ಣ ಮಾಧ್ಯಮದ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್