ಯಕ್ಷಗಾನ ವಿದ್ಯಾರ್ಥಿಗಳಿಗೂ ಶಿಷ್ಯವೇತನ ; ಇತಿಹಾಸದಲ್ಲೇ ಹೊಸ ನಡೆ


Team Udayavani, Aug 22, 2018, 7:52 PM IST

yakshagana-600.jpg

ಶಿರಸಿ: ಯಕ್ಷಗಾನ ಕಲೆ ಉಳಿಸಬೇಕು, ಬೆಳಸಬೇಕು ಎಂಬ ಮಾತು ವೇದಿಕೆಗಳಲ್ಲಿ ರಾರಾಜಿಸುತ್ತವೆ. ಆದರೆ, ಅನುಷ್ಠಾನಕೆ ಬಂದಲ್ಲಿ ಮಾರು ದೂರ ಎಂಬ ಆರೋಪಗಳೂ ಇವೆ. ಯಕ್ಷಗಾನ ಕಲಿಕೆಗೆ ಆಸಕ್ತರಾಗುವ ಅದರಲ್ಲೂ, ವೃತ್ತಿಯಾಗಿ ಪಡೆದುಕೊಳ್ಳಲು ಗುರುಕುಲ ಮಾದರಿಯಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಈವರೆಗೆ ಯಾವ ಯೋಜನೆ ಕೂಡ ಇರಲಿಲ್ಲ. ಗುರುಕುಲ ವಿದ್ಯಾರ್ಥಿಗಳಿಗಾಗಿ, ಭವಿಷ್ಯದ ಕಲಾವಿದರ ಸಿದ್ಧತೆಗಾಗಿ ಶಿಷ್ಯ ವೇತನ ನೀಡಲು ಅಕಾಡೆಮಿ ಮುಂದಾಗಿದೆ. ಐದು ಲಕ್ಷ ರೂ. ನಿಗದಿಗೊಳಿಸಿ ತನ್ನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಹೊಸ ಹೆಜ್ಜೆಯಿರಿಸಿದೆ.

ಹೊಸ ಪ್ರಯೋಗ?
ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಿದ್ವಾಂಸ ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌ ರ ನೇತೃತ್ವದ ತಂಡ ಯಕ್ಷಗಾನ ಕಲಿಕಾರ್ಥಿಗಳಿಗಾಗಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಗುರುಕುಲ ಮಾದರಿಯ ಯಕ್ಷಗಾನ ತರಬೇತಿ ಕೇಂದ್ರಗಳಲ್ಲಿ ನಿರಂತರವಾಗಿ ಕಲಿಕೆ ಮಾಡುವ ವಿದ್ಯಾರ್ಥಿಗಳಿಗೆ, ಅದನ್ನೇ ವೃತ್ತಿಯಾಗಿ ಪಡೆಯುವ ಆಸಕ್ತಿ ಇರುವವರಿಗೆ ಯಕ್ಷಗಾನ ಅಕಾಡೆಮಿ ಮಾಸಿಕ ಎರಡು ಸಾವಿರ ರೂ. ನೀಡಲಿದೆ. ಉಡುಪಿ, ಹಂಗಾರಕಟ್ಟೆ, ಕೆರೆಮನೆಯ ಗುರುಕುಲ ಮಾದರಿಯ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಪಡೆಯುವ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣವನ್ನು ಅಕಾಡೆಮಿ ವರ್ಗಾವಣೆ ಮಾಡಲಿದೆ. ಮಕ್ಕಳನ್ನು ಇರಿಸಿಕೊಂಡು ಹಗಲಿನಲ್ಲಿ ಶಾಲಾ ಶಿಕ್ಷಣ ಕೊಡಿಸಿ, ಸಂಜೆ ಯಕ್ಷಗಾನ ಕಲಿಸುವ ಕೇಂದ್ರದ ವಿದ್ಯಾರ್ಥಿಗಳಿಗೆ ಮಾಸಿಕ ಐನೂರು ಕೊಡುತ್ತಿದೆ.

ಇಂಥ ಪ್ರೋತ್ಸಾಹ ಏಕೆ?
ಯಕ್ಷಗಾನ ಕಲಿಯುವ ಆಸಕ್ತರ ಕೊರತೆ ಆಗದೇ ಇದ್ದರೂ ಗುರುಕುಲ ಮಾದರಿಯಲ್ಲಿ ಅಲ್ಲೇ ಇದ್ದು ಕಲಿಯುವವರ ಸಂಖ್ಯೆ ಏರಿಲ್ಲ. ಅದನ್ನೇ ವೃತ್ತಿಯಲ್ಲಿ ಮುಂದುವರಿಯುವವರಿಗೆ ಸಿಗಬೇಕಾದ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಎಷ್ಟೋ ಮಂದಿ ಶಿಕ್ಷಣದ ಬಳಿಕ ಯಕ್ಷಗಾನ ಕಲಿಕೆಗೆ ಮುಂದಾದರೆ ಮನೆಯಲ್ಲಿನ ಕಷ್ಟಕ್ಕೆ ಸ್ಪಂದಿಸುವುದೂ ಕಷ್ಟವಾಗುತ್ತಿತ್ತು. ಈ ಕಾರಣದಿಂದ ಬೇರೆ ಉದ್ಯೋಗ ನೋಡಿ ಯಕ್ಷಗಾನ ಆಸಕ್ತಿ ಇದ್ದರೂ ಕಲಿಕೆಗೆ ಮುಂದೆ ಬರುತ್ತಿರಲಿಲ್ಲ.ಇಂಥ ಸಂದಿಗ್ಧ ವೇಳೆ ಇದೇ ಪ್ರಥಮ ಬಾರಿಗೆ ಅಕಾಡೆಮಿ ಕಲಿಯುವ ಹಾಗೂ ಅದನ್ನೇ ಮುಂದೆ ವೃತ್ತಿಯಾಗಿಸಿಕೊಳ್ಳಲು ಗುರುಕುಲ ಮಾದರಿಯಲ್ಲಿ ತರಬೇತಿ ಪಡೆಯುವವರಿಗೆ ಈ ಯೋಜನೆ ಮಾಡಲು ಮುಂದಡಿ ಇಟ್ಟಿದೆ. ಅಕಾಡೆಮಿಗಳು, ಸರಕಾರ, ಇಲಾಖೆಗಳು ಗುರುಕುಲ ಮಾದರಿ ಕೇಂದ್ರಗಳನ್ನು ಬಲಿಷ್ಠಗೊಳಿಸುವ ಕೆಲಸ ಮಾಡಬೇಕು ಎನ್ನುತ್ತಾರೆ ಶ್ರೀಮಯ ಕೇಂದ್ರದ ಮುಖ್ಯಸ್ಥ ಶಿವಾನಂದ ಹೆಗಡೆ ಕೆರೆಮನೆ.

ತರಬೇತಿಗೂ ಸಹಾಯ ಧನ
ಯಕ್ಷಗಾನ ಕಲಿಸುವ ತರಬೇತಿ ಶಿಬಿರಗಳ ಶಿಕ್ಷಕರಿಗೂ ಪ್ರೋತ್ಸಾಹಿಸಲು ಅಕಾಡೆಮಿ ಯೋಜಿಸಿತ್ತು. ಈಗಾಗಲೇ ಶಿಬಿರದ ಮುಖ್ಯ ಶಿಕ್ಷಕರಿಗೆ 10ಸಾವಿರ, ಸಹ ಶಿಕ್ಷಕರಿಗೆ 5 ಸಾವಿರ ರೂ. ಕೊಡುತ್ತಿದೆ. ಇದಕ್ಕಾಗಿ 20 ಲಕ್ಷ ರೂ. ನಿಗದಿಮಾಡಲಾಗಿದ್ದು, ಇಡೀ ರಾಜ್ಯದ ಸುಮಾರು 64 ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಮೂಡಲಪಾಯದಲ್ಲಿ ವಿನಾಶಕ್ಕೆ ಸರಿದ ಮುಖವೀಣೆ ನುಡಿಸುವುದನ್ನು ಕಲಿಯುವವರಿಗೂ ಮಾಸಿಕ 2 ಸಾವಿರ ರೂ. ನೀಡಲಾಗುತ್ತದೆ.

ಯಕ್ಷಗಾನ ಮುಂದುವರಿಕೆಗೆ ಭದ್ರವಾದ ಬುನಾದಿ ಹಾಕಬೇಕು ಎಂದೇ ಈ ಯೋಜನೆ ರೂಪಿಸಾಗಿದೆ.
– ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌, ಅಧ್ಯಕ್ಷರು ಯಕ್ಷಗಾನ ಅಕಾಡೆಮಿ

ಇದೇ ಪ್ರಥಮಬಾರಿಗೆ ಅಕಾಡೆಮಿ ಗುರುಕುಲದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸ್ಪಂದಿಸಿದ್ದು ಅಭಿನಂದನೀಯ. ಶಿಷ್ಯ ವೇತನದ ಮಾದರಿಯಲ್ಲೇ ಇಲ್ಲಿ ಕಲಿಸುವ ಗುರುಗಳಿಗೂ ನೆರವಾಗಬೇಕಿದೆ. ಗುರುಕುಲ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ. ಇಲ್ಲವಾದಲ್ಲಿ ಕೇಂದ್ರಗಳೇ ಮರೆಯಾಗುವ ಆತಂಕವೂ ಇದೆ.
– ಶಿವಾನಂದ ಹೆಗಡೆ ಕೆರೆಮನೆ, ಮುಖ್ಯಸ್ಥರು, ಶ್ರೀಮಯ ಕಲಾಕೇಂದ್ರ

— ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.