ಯಕ್ಷಗಾನ ವಿದ್ಯಾರ್ಥಿಗಳಿಗೂ ಶಿಷ್ಯವೇತನ ; ಇತಿಹಾಸದಲ್ಲೇ ಹೊಸ ನಡೆ


Team Udayavani, Aug 22, 2018, 7:52 PM IST

yakshagana-600.jpg

ಶಿರಸಿ: ಯಕ್ಷಗಾನ ಕಲೆ ಉಳಿಸಬೇಕು, ಬೆಳಸಬೇಕು ಎಂಬ ಮಾತು ವೇದಿಕೆಗಳಲ್ಲಿ ರಾರಾಜಿಸುತ್ತವೆ. ಆದರೆ, ಅನುಷ್ಠಾನಕೆ ಬಂದಲ್ಲಿ ಮಾರು ದೂರ ಎಂಬ ಆರೋಪಗಳೂ ಇವೆ. ಯಕ್ಷಗಾನ ಕಲಿಕೆಗೆ ಆಸಕ್ತರಾಗುವ ಅದರಲ್ಲೂ, ವೃತ್ತಿಯಾಗಿ ಪಡೆದುಕೊಳ್ಳಲು ಗುರುಕುಲ ಮಾದರಿಯಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಈವರೆಗೆ ಯಾವ ಯೋಜನೆ ಕೂಡ ಇರಲಿಲ್ಲ. ಗುರುಕುಲ ವಿದ್ಯಾರ್ಥಿಗಳಿಗಾಗಿ, ಭವಿಷ್ಯದ ಕಲಾವಿದರ ಸಿದ್ಧತೆಗಾಗಿ ಶಿಷ್ಯ ವೇತನ ನೀಡಲು ಅಕಾಡೆಮಿ ಮುಂದಾಗಿದೆ. ಐದು ಲಕ್ಷ ರೂ. ನಿಗದಿಗೊಳಿಸಿ ತನ್ನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಹೊಸ ಹೆಜ್ಜೆಯಿರಿಸಿದೆ.

ಹೊಸ ಪ್ರಯೋಗ?
ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಿದ್ವಾಂಸ ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌ ರ ನೇತೃತ್ವದ ತಂಡ ಯಕ್ಷಗಾನ ಕಲಿಕಾರ್ಥಿಗಳಿಗಾಗಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಗುರುಕುಲ ಮಾದರಿಯ ಯಕ್ಷಗಾನ ತರಬೇತಿ ಕೇಂದ್ರಗಳಲ್ಲಿ ನಿರಂತರವಾಗಿ ಕಲಿಕೆ ಮಾಡುವ ವಿದ್ಯಾರ್ಥಿಗಳಿಗೆ, ಅದನ್ನೇ ವೃತ್ತಿಯಾಗಿ ಪಡೆಯುವ ಆಸಕ್ತಿ ಇರುವವರಿಗೆ ಯಕ್ಷಗಾನ ಅಕಾಡೆಮಿ ಮಾಸಿಕ ಎರಡು ಸಾವಿರ ರೂ. ನೀಡಲಿದೆ. ಉಡುಪಿ, ಹಂಗಾರಕಟ್ಟೆ, ಕೆರೆಮನೆಯ ಗುರುಕುಲ ಮಾದರಿಯ ಕೇಂದ್ರದಲ್ಲಿ ಯಕ್ಷಗಾನ ತರಬೇತಿ ಪಡೆಯುವ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣವನ್ನು ಅಕಾಡೆಮಿ ವರ್ಗಾವಣೆ ಮಾಡಲಿದೆ. ಮಕ್ಕಳನ್ನು ಇರಿಸಿಕೊಂಡು ಹಗಲಿನಲ್ಲಿ ಶಾಲಾ ಶಿಕ್ಷಣ ಕೊಡಿಸಿ, ಸಂಜೆ ಯಕ್ಷಗಾನ ಕಲಿಸುವ ಕೇಂದ್ರದ ವಿದ್ಯಾರ್ಥಿಗಳಿಗೆ ಮಾಸಿಕ ಐನೂರು ಕೊಡುತ್ತಿದೆ.

ಇಂಥ ಪ್ರೋತ್ಸಾಹ ಏಕೆ?
ಯಕ್ಷಗಾನ ಕಲಿಯುವ ಆಸಕ್ತರ ಕೊರತೆ ಆಗದೇ ಇದ್ದರೂ ಗುರುಕುಲ ಮಾದರಿಯಲ್ಲಿ ಅಲ್ಲೇ ಇದ್ದು ಕಲಿಯುವವರ ಸಂಖ್ಯೆ ಏರಿಲ್ಲ. ಅದನ್ನೇ ವೃತ್ತಿಯಲ್ಲಿ ಮುಂದುವರಿಯುವವರಿಗೆ ಸಿಗಬೇಕಾದ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಎಷ್ಟೋ ಮಂದಿ ಶಿಕ್ಷಣದ ಬಳಿಕ ಯಕ್ಷಗಾನ ಕಲಿಕೆಗೆ ಮುಂದಾದರೆ ಮನೆಯಲ್ಲಿನ ಕಷ್ಟಕ್ಕೆ ಸ್ಪಂದಿಸುವುದೂ ಕಷ್ಟವಾಗುತ್ತಿತ್ತು. ಈ ಕಾರಣದಿಂದ ಬೇರೆ ಉದ್ಯೋಗ ನೋಡಿ ಯಕ್ಷಗಾನ ಆಸಕ್ತಿ ಇದ್ದರೂ ಕಲಿಕೆಗೆ ಮುಂದೆ ಬರುತ್ತಿರಲಿಲ್ಲ.ಇಂಥ ಸಂದಿಗ್ಧ ವೇಳೆ ಇದೇ ಪ್ರಥಮ ಬಾರಿಗೆ ಅಕಾಡೆಮಿ ಕಲಿಯುವ ಹಾಗೂ ಅದನ್ನೇ ಮುಂದೆ ವೃತ್ತಿಯಾಗಿಸಿಕೊಳ್ಳಲು ಗುರುಕುಲ ಮಾದರಿಯಲ್ಲಿ ತರಬೇತಿ ಪಡೆಯುವವರಿಗೆ ಈ ಯೋಜನೆ ಮಾಡಲು ಮುಂದಡಿ ಇಟ್ಟಿದೆ. ಅಕಾಡೆಮಿಗಳು, ಸರಕಾರ, ಇಲಾಖೆಗಳು ಗುರುಕುಲ ಮಾದರಿ ಕೇಂದ್ರಗಳನ್ನು ಬಲಿಷ್ಠಗೊಳಿಸುವ ಕೆಲಸ ಮಾಡಬೇಕು ಎನ್ನುತ್ತಾರೆ ಶ್ರೀಮಯ ಕೇಂದ್ರದ ಮುಖ್ಯಸ್ಥ ಶಿವಾನಂದ ಹೆಗಡೆ ಕೆರೆಮನೆ.

ತರಬೇತಿಗೂ ಸಹಾಯ ಧನ
ಯಕ್ಷಗಾನ ಕಲಿಸುವ ತರಬೇತಿ ಶಿಬಿರಗಳ ಶಿಕ್ಷಕರಿಗೂ ಪ್ರೋತ್ಸಾಹಿಸಲು ಅಕಾಡೆಮಿ ಯೋಜಿಸಿತ್ತು. ಈಗಾಗಲೇ ಶಿಬಿರದ ಮುಖ್ಯ ಶಿಕ್ಷಕರಿಗೆ 10ಸಾವಿರ, ಸಹ ಶಿಕ್ಷಕರಿಗೆ 5 ಸಾವಿರ ರೂ. ಕೊಡುತ್ತಿದೆ. ಇದಕ್ಕಾಗಿ 20 ಲಕ್ಷ ರೂ. ನಿಗದಿಮಾಡಲಾಗಿದ್ದು, ಇಡೀ ರಾಜ್ಯದ ಸುಮಾರು 64 ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಮೂಡಲಪಾಯದಲ್ಲಿ ವಿನಾಶಕ್ಕೆ ಸರಿದ ಮುಖವೀಣೆ ನುಡಿಸುವುದನ್ನು ಕಲಿಯುವವರಿಗೂ ಮಾಸಿಕ 2 ಸಾವಿರ ರೂ. ನೀಡಲಾಗುತ್ತದೆ.

ಯಕ್ಷಗಾನ ಮುಂದುವರಿಕೆಗೆ ಭದ್ರವಾದ ಬುನಾದಿ ಹಾಕಬೇಕು ಎಂದೇ ಈ ಯೋಜನೆ ರೂಪಿಸಾಗಿದೆ.
– ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌, ಅಧ್ಯಕ್ಷರು ಯಕ್ಷಗಾನ ಅಕಾಡೆಮಿ

ಇದೇ ಪ್ರಥಮಬಾರಿಗೆ ಅಕಾಡೆಮಿ ಗುರುಕುಲದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸ್ಪಂದಿಸಿದ್ದು ಅಭಿನಂದನೀಯ. ಶಿಷ್ಯ ವೇತನದ ಮಾದರಿಯಲ್ಲೇ ಇಲ್ಲಿ ಕಲಿಸುವ ಗುರುಗಳಿಗೂ ನೆರವಾಗಬೇಕಿದೆ. ಗುರುಕುಲ ಇನ್ನಷ್ಟು ಬಲಿಷ್ಠಗೊಳಿಸಬೇಕಿದೆ. ಇಲ್ಲವಾದಲ್ಲಿ ಕೇಂದ್ರಗಳೇ ಮರೆಯಾಗುವ ಆತಂಕವೂ ಇದೆ.
– ಶಿವಾನಂದ ಹೆಗಡೆ ಕೆರೆಮನೆ, ಮುಖ್ಯಸ್ಥರು, ಶ್ರೀಮಯ ಕಲಾಕೇಂದ್ರ

— ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.