61 ಶಾಲೆ ಬಿಟ್ಟು ಉಳಿದ ಶಾಲೆ ಪುನಾರಂಭ
Team Udayavani, Aug 23, 2018, 6:00 AM IST
ಬೆಂಗಳೂರು: ಕೊಡಗಿನಲ್ಲಿ ತೀವ್ರ ಹಾನಿಗೊಳಗಾಗಿರುವ 61 ಶಾಲೆಗಳನ್ನು ಹೊರತುಪಡಿಸಿ ಉಳಿದ ಶಾಲೆಗಳನ್ನು ಗುರುವಾರದಿಂದ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಜತೆಗೆ 5,000 ಶಾಲಾ ಪುಸ್ತಕ ವಿತರಣೆಗೂ ಕ್ರಮ ಕೈಗೊಂಡಿದ್ದು, ಪರಿಹಾರ ಕೇಂದ್ರಗಳಲ್ಲೇ ಮಕ್ಕಳಿಗೆ ಶಾಲಾ ಪಠ್ಯ ಚಟುವಟಿಕೆ ಆರಂಭಿಸಲು ಸೂಚಿಸಿದೆ.
ಭಾರೀ ಮಳೆಯಿಂದ ತೀವ್ರ ಹಾನಿಗೆ ಒಳಗಾಗಿರುವ ಕೊಡಗು ಜಿಲ್ಲೆಯಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಹಾಗೂ ಪುನರ್ನಿರ್ಮಾಣ ಕಾರ್ಯದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರಿಂದ ಮಾಹಿತಿ ಪಡೆದರು. ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರ ಹೀಗಿದೆ.
ಬಿಸಿನೀರು ವ್ಯವಸ್ಥೆ: ಪ್ರಮುಖವಾಗಿ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಬಿಸಿನೀರಿನ ವ್ಯವಸ್ಥೆ ಕಲ್ಪಿಸಲು ಗ್ಯಾಸ್ ಗೀಜರ್, ಅಡುಗೆ ಅನಿಲ ಪೂರೈಕೆಗೆ ಕ್ರಮ ಕೈಗೊಂಡಿದೆ. ಜಿಲ್ಲೆಯ 5 ದಾಸ್ತಾನು ಕೇಂದ್ರಗಳ ಮೂಲಕ 100ಕ್ಕೂ ಹೆಚ್ಚು ವಾಹನಗಳಲ್ಲಿ ಗ್ರಾಮ ಪಂಚಾಯ್ತಿ ಹಾಗೂ ಇತರೆ ಪಟ್ಟಣ ಪ್ರದೇಶಗಳ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಸಾಮಗ್ರಿ ವಿತರಣೆಗೆ ಕ್ರಮ, ಇನ್ನಷ್ಟು ಟಾರ್ಪಾಲ್, ಪ್ಲಾಸ್ಟಿಕ್ ಬ್ಯಾಗ್ಗಳ ಅಗತ್ಯವಿರುವುದನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಬಗೆಯ ಪರಿಹಾರ ಸಾಮಗ್ರಿ ದಾಸ್ತಾನು ಕೇಂದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿರುವುದನ್ನು ಖಾತರಿಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅಡುಗೆ ಅನಿಲ, ಗ್ಯಾಸ್ ಗೀಜರ್, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಆಹಾರ ಇಲಾಖೆ ನಿರ್ದೇಶಕರು ನಿಗಾ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಜತೆಗೆ 50,000 ಆಹಾರ ಕಿಟ್ಗಳ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಿದೆ.
ಬೆಳೆನಷ್ಟ ಸಮೀಕ್ಷೆ: ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸರ್ಕಾರಿ ಭೂಮಿ ಗುರುತಿಸುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಪ್ರಕೃತಿ ವಿಕೋಪದಿಂದಾಗಿ ಮನೆ ಹಾನಿ, ಕೃಷಿ ಹಾಗೂ ತೋಟಗಾರಿಕೆ ಬೆಳೆ ನಷ್ಟದ ಸಮೀಕ್ಷಾ ವರದಿ ಪಡೆದು ಸಂಬಂಧಪಟ್ಟವರಿಗೆ ತಕ್ಷಣ ಆರ್ಥಿಕ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಆಸ್ತಿಪಾಸ್ತಿಯ ದಾಖಲೆ ಕಳೆದುಕೊಂಡವರಿಗೆ ದಾಖಲೆಗಳನ್ನು ಮತ್ತೆ ಸೃಷ್ಟಿಸಿ ಹಂಚಿಕೆ ಮಾಡುವ ಕಾರ್ಯ ತ್ವರಿತವಾಗಿ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಪಂಚಾಯತ್ರಾಜ್ ಇಲಾಖೆ ಸಹಯೋಗದಲ್ಲಿ ಅಗತ್ಯಕ್ಕನುಗುಣವಾಗಿ ಡ್ರೋಣ್ ಕ್ಯಾಮೆರಾ ಬಳಸಿ ಸಮೀಕ್ಷೆ ನಡೆಸುವಂತೆಯೂ ಸೂಚಿಸಿದೆ.
ಭೂಕುಸಿತ ತಡೆಗೆ ಮರಳು ಮೂಟೆ ಬಳಕೆ
ಜಿಲ್ಲೆಯಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯ ಪುನರ್ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ಎಂಜಿನಿಯರಿಂಗ್ ವಿಭಾಗ ತ್ವರಿತವಾಗಿ ಕೈಗೊಳ್ಳಬೇಕು. ಮುಂದೆ ಅನಾಹುತ ತಡೆಗೆ ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವ ಸಲುವಾಗಿ ಭೂಕುಸಿತ ತಡೆಗೆ ರಕ್ಷಣಾ ತಡೆಗೋಡೆ ನಿರ್ಮಾಣಕ್ಕಾಗಿ ಮರಳು ಮೂಟೆಗಳನ್ನು ಬಳಸುವಂತೆಯೂ ಸರ್ಕಾರ ಸೂಚಿಸಿದೆ.
ಜಿಲ್ಲೆಯಲ್ಲಿ ಬಸ್ ಸಂಚಾರ ಹಾಗೂ ಸಾರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆಗಾಗಿ ಕೆಎಸ್ಆರ್ಟಿಸಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಮುಂದೆ ಪ್ರಕೃತಿ ವಿಕೋಪ ತಡೆಗೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಯೋಜಿತ ರೀತಿಯಲ್ಲಿ ಚರಂಡಿ ನಿರ್ಮಾಣಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ