ಮಲೆನಾಡಲ್ಲಿ ಹೆಚ್ಚುತ್ತಿದೆ ಭೂ ಕುಸಿತ
Team Udayavani, Aug 23, 2018, 6:00 AM IST
ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆ ಪ್ರಮಾಣ ತಗ್ಗಿದರೂ ಗುಡ್ಡ, ರಸ್ತೆಗಳು ಕುಸಿಯುತ್ತಲೇ ಇವೆ. ಬುಧವಾರ ಸಹ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಬಳಿಯ ಬಿದರೆ ಗ್ರಾಮದ ಸತೀಶ್ ಭಟ್ ಎನ್ನುವವರಿಗೆ ಸೇರಿದ ಅಡಿಕೆ ತೋಟದಲ್ಲಿ ಭೂಮಿ ಕುಸಿದು ನಷ್ಟವಾಗಿದೆ. ಸುಮಾರು 20 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಒಂದು ಎಕರೆ ಪ್ರದೇಶದಲ್ಲಿದ್ದ ಅಡಿಕೆ, ಕಾಫಿ ಮತ್ತು ಕಾಳುಮೆಣಸು ನಾಶವಾಗಿದೆ. ತಾಲೂಕಿನ ಬೊಗಸೆ ವಡ್ಡಿ ಎಂಬಲ್ಲಿ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದು ಸಂಚಾರ ಸ್ಥಗಿತಗೊಂಡಿದೆ. ರಸ್ತೆಯ ಒಂದು ಬದಿ ಸಂಪೂರ್ಣ ಕುಸಿದ್ದಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಎನ್.ಆರ್.ಪುರ ತಾಲೂಕಿನ ಮೇಲ್ಪಾಲ್ ಎಂಬಲ್ಲಿ ಗುಡ್ಡ ಕುಸಿದು, ಹಳಸೆ ಶಿವಣ್ಣ ಎನ್ನುವವರ ಕಾಫಿತೋಟಕ್ಕೆ ಹಾನಿಯಾಗಿದೆ. ಗುಡ್ಡ ಕುಸಿತದ ಮಣ್ಣು ಬಿದ್ದು ಸುಮಾರು 1 ಎಕರೆ ಪ್ರದೇಶದ ಕಾಫಿ, ಕಾಳುಮೆಣಸು ಬೆಳೆ ನಾಶವಾಗಿದೆ.
ಮಳೆಗಾಲವಿಡೀ ಕುಸಿತ:
ಈ ವರ್ಷ ಮಳೆಗಾಲದ ಆರಂಭದಿಂದಲೂ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿಯುತ್ತಲೇ ಇದ್ದು, ಪ್ರಮಾಣ ಹೆಚ್ಚಿದೆ. ಅಲ್ಲದೆ, ಜಿಲ್ಲೆಯ ಹಲವೆಡೆ ರಸ್ತೆಗಳು ಬಿರುಕು ಬಿಟ್ಟಿವೆ. ಭಾರೀ ಮಳೆಯಿಂದ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿ ರಸ್ತೆಯ ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅದೇ ರೀತಿ ಕಳಸ-ಮಂಗಳೂರು ರಸ್ತೆಯಲ್ಲಿಯೂ ಗುಡ್ಡ ಕುಸಿದಿತ್ತು.
ಕೊಪ್ಪದಲ್ಲಿ ಜಾಸ್ತಿ:
ಭೂಕುಸಿತ ಪ್ರಕರಣಗಳು ಕೊಪ್ಪ ತಾಲೂಕಿನಲ್ಲಿ ಹೆಚ್ಚಾಗಿದ್ದು, ಮುಂದುವರಿದಿದೆ. ತಾಲೂಕಿನ ಹೇರೂರು ಸಮೀಪ ಗುಡ್ಡ ಕುಸಿದಿತ್ತು. ಮೇಗುಂದ ಸಮೀಪದ ಗುಡ್ಡೆತೋಟದ ರಸ್ತೆಯಲ್ಲಿ ಬಿರುಕು ಬಿಟ್ಟಿತ್ತಲ್ಲದೆ ಭೂ ಕುಸಿತವುಂಟಾಗಿತ್ತು. ಶಾನುವಳ್ಳಿ ಗ್ರಾಮದಲ್ಲಿ ಭೂ ಕುಸಿತವುಂಟಾಗಿ ಬಾವಿಯೊಂದು 30 ಅಡಿ ಆಳಕ್ಕೆ ಕುಸಿದು ಸುರಂಗ ಉಂಟಾಗಿತ್ತು. ಹೇರೂರು ಗ್ರಾಮದ ಬಳಿ ಭೂ ಕುಸಿತವುಂಟಾಗಿತ್ತು. ಹಾಲುಗರಡಿ, ಬೈರದೇವರು, ಸಂವಾನೆ ಗ್ರಾಮಗಳಲ್ಲಿ ಗುಡ್ಡ ಕುಸಿದಿತ್ತು. ಬಂಡಿಗಡಿ ಸಮೀಪ ಭೂ ಕುಸಿತದಿಂದ ವಿದ್ಯುತ್ ಪರಿವರ್ತಕ ಹಾಗೂ 4 ವಿದ್ಯುತ್ ಕಂಬಗಳು ನೆಲಕ್ಕುರುಳಿ 4 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಬೂತನಕಾಡು ಬಳಿ ಭೂ ಕುಸಿತವುಂಟಾಗಿ ಕಾಫಿ, ಅಡಕೆ ತೋಟಗಳಿಗೆ ಮಣ್ಣು ನುಗ್ಗಿ ಬೆಳೆಹಾನಿಯಾಗಿತ್ತು.
ಇದಲ್ಲದೆ ನರಸಿಂಹರಾಜಪುರ ತಾಲೂಕಿನ ಮೇಲ್ಪಾಲ್ ಗ್ರಾಮದ ಬಳಿ ಹಲವು ಬಾರಿ ಭೂಕುಸಿತವುಂಟಾಗಿತ್ತು. ಶೃಂಗೇರಿ ತಾಲೂಕಿನಲ್ಲೂ ಸಹ ಹಲವೆಡೆ ಗುಡ್ಡ ಕುಸಿದಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಹಲವು ಬಾರಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಆರಂಭದಿಂದಲೂ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಗಾಳಿ ಮಳೆಯೊಂದಿಗೆ ಆಗಾಗ ಗುಡ್ಡ ಕುಸಿಯುತ್ತಲೇ ಇದೆ. ಭಾರೀ ಮಳೆಗೆ ಗುಡ್ಡ ಕುಸಿದು ಕೊಡಗು ಕೊಚ್ಚಿಹೋಗಿರುವುದು ಕಣ್ಣೆದುರಿಗಿದ್ದು, ಜಿಲ್ಲೆಯ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್