ಪ್ರಕೃತಿ ವಿಕೋಪ: ಪ್ರತ್ಯೇಕ ಯೋಜನೆಗೆ ಚಿಂತನೆ


Team Udayavani, Aug 24, 2018, 6:05 AM IST

rv.jpg

ಬಾಗಲಕೋಟೆ: ಕೊಡಗು ಜಿಲ್ಲೆಯಲ್ಲಿ ಮಹಾ ಮಳೆಯಿಂದ ಹಲವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಕೊಡುವ ಜತೆಗೆ ಪುನರ್‌ ವಸತಿ ಕಲ್ಪಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರದ ನಿಯಮಾವಳಿ ಪ್ರಕಾರ, ಪ್ರಕೃತಿ ವಿಕೋಪ ಸಂಭವಿಸಿದಾಗ ಕೇವಲ ಪರಿಹಾರಧನ ಕೊಡಲು ಮಾತ್ರ ಅವಕಾಶವಿದೆ. ಹೀಗಾಗಿ ರೈತ ಆತ್ಮಹತ್ಯೆ ಪ್ರಕರಣದಲ್ಲಿ ನೀಡುವ ಪರಿಹಾರ ಮಾದರಿಯಲ್ಲೇ ವಿಪತ್ತು ಸಂಭವಿಸಿದಾಗ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಒದಗಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಕಂದಾಯ ಇಲಾಖೆ ಅಧೀನದಲ್ಲಿ ಇರುವ ವಿಪತ್ತು ನಿರ್ವಹಣೆ ಕೋಶದಡಿ ಸದ್ಯ ಮಹಾ ಮಳೆ, ಸಿಡಿಲು ಬಡಿದು ಅಥವಾ ಇನ್ಯಾವುದೇ ರೀತಿಯ ಪ್ರಕೃತಿ ವಿಕೋಪದಿಂದ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಮಾತ್ರ ಅವಕಾಶವಿದೆ. ಈ ಪರಿಹಾರ ಧನ ಬಿಟ್ಟರೆ ಬೇರ್ಯಾವ ಸೌಲಭ್ಯಗಳನ್ನೂ ಸರ್ಕಾರದಿಂದ ನೀಡಲು ಅವಕಾಶವಿಲ್ಲ. ಹೀಗಾಗಿ ವಿಪತ್ತು ನಿರ್ವಹಣೆ ಕೋಶದ ನಿಯಮಗಳ ಬದಲಾವಣೆ ಅಥವಾ ಪ್ರತ್ಯೇಕ ಯೋಜನೆ ರೂಪಿಸಲು ಸರ್ಕಾರ ಮುಂದಾಗಿದೆ.

ಹೊಸ ನಿಯಮ ಏನು?: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ, ಆ ಕುಟುಂಬ ಸ್ವಂತ ಮನೆ ಹೊಂದಿರದಿದ್ದರೆ ಮನೆ, ಮಾಸಿಕ 2 ಸಾವಿರ ಮಾಸಾಶನ, ಸುವರ್ಣ ಆರೋಗ್ಯ ಟ್ರಸ್ಟ್‌ನಿಂದ ಉಚಿತ ಆರೋಗ್ಯ ಸೇವೆಗೆ ಗುರುತಿನ ಚೀಟಿ, ಅವರ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಕೊಡುವ ಕುರಿತು ನಿಯಮಾವಳಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ.

ಯೋಚನೆ ಹುಟ್ಟಿದ್ದು ಬಾಗಲಕೋಟೆಯಲ್ಲಿ
ಈ ಹೊಸ ಯೋಜನೆ ಹೊಳೆದದ್ದು ಬಾಗಲಕೋಟೆಯಲ್ಲಿ. ಸ್ವತಃ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರು, ಬರ ಪರಿಹಾರ ಹಾಗೂ ಹಾನಿ ಕುರಿತ ಸಭೆ ನಡೆಸುತ್ತಿದ್ದ ವೇಳೆ ಹೊಸದಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಏನಾದರೂ ಸಲಹೆಗಳಿದ್ದರೆ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದರು. ಈ ವೇಳೆ ಬಾಗಲಕೋಟೆಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಈ ಪ್ರಸ್ತಾಪವನ್ನಿಟ್ಟರು. ಇದೊಂದು ಅತ್ಯುತ್ತಮ ವಿಚಾರ, ಕೂಡಲೇ ರಾಜ್ಯಾದ್ಯಂತ ಜಾರಿಗೊಳಿಸುವ ಕುರಿತು ಗಂಭೀರವಾಗಿ ಪರಿಗಣಿಸಲಾಗುತ್ತದೆ. ತಕ್ಷಣ ಅದಕ್ಕೊಂದು ಪ್ರಸ್ತಾವನೆ ಸಿದ್ಧಪಡಿಸಿ ಕಳುಹಿಸಿ ಎಂದು ಸಚಿವರು ತಿಳಿಸಿದ್ದರು. ಹೀಗಾಗಿ ಅಧಿಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ರಾಜ್ಯ ವಿಪತ್ತು ನಿರ್ವಹಣೆ ಕೋಶಕ್ಕೆ ಕಳುಹಿಸಿದ್ದಾರೆ.

ಬಾಗಲಕೋಟೆಯ ಸಭೆಯಲ್ಲಿ ಅಧಿಕಾರಿಯೊಬ್ಬರು ಉತ್ತಮ ಸಲಹೆ ಕೊಟ್ಟಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಕೋಶದ ಅಧ್ಯಕ್ಷ ನಾನೇ ಇರುವುದರಿಂದ ಈ ಕುರಿತು ಸಿಎಂ ಜತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಆರ್‌.ವಿ. ದೇಶಪಾಂಡೆ, ಕಂದಾಯ ಸಚಿವ

ರೈತ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ನೀಡುವ ಪರಿಹಾರ ಧನ ಮಾದರಿಯಲ್ಲಿ ಪ್ರಕೃತಿ ವಿಕೋಪದಿಂದ ಮೃತಪಟ್ಟ ಕುಟುಂಬಕ್ಕೂ ಪರಿಹಾರ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕಂದಾಯ ಸಚಿವರಿಗೆ ನೀಡಿದ್ದೇನೆ. ಅದಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಿ ವಿಪತ್ತು ನಿರ್ವಹಣೆ ಕೋಶಕ್ಕೆ ಕಳುಹಿಸಲು ತಿಳಿಸಿದ್ದಾರೆ. ಕೂಡಲೇ ಪ್ರಸ್ತಾವನೆ ಸಲ್ಲಿಸಲಾಗುವುದು.
– ಅಶೋಕ ದುಡಗುಂಟಿ, ಅಪರ ಜಿಲ್ಲಾಧಿಕಾರಿ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.