ಪ್ರಕೃತಿ ವಿಕೋಪ: ಪ್ರತ್ಯೇಕ ಯೋಜನೆಗೆ ಚಿಂತನೆ


Team Udayavani, Aug 24, 2018, 6:05 AM IST

rv.jpg

ಬಾಗಲಕೋಟೆ: ಕೊಡಗು ಜಿಲ್ಲೆಯಲ್ಲಿ ಮಹಾ ಮಳೆಯಿಂದ ಹಲವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಕೊಡುವ ಜತೆಗೆ ಪುನರ್‌ ವಸತಿ ಕಲ್ಪಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರದ ನಿಯಮಾವಳಿ ಪ್ರಕಾರ, ಪ್ರಕೃತಿ ವಿಕೋಪ ಸಂಭವಿಸಿದಾಗ ಕೇವಲ ಪರಿಹಾರಧನ ಕೊಡಲು ಮಾತ್ರ ಅವಕಾಶವಿದೆ. ಹೀಗಾಗಿ ರೈತ ಆತ್ಮಹತ್ಯೆ ಪ್ರಕರಣದಲ್ಲಿ ನೀಡುವ ಪರಿಹಾರ ಮಾದರಿಯಲ್ಲೇ ವಿಪತ್ತು ಸಂಭವಿಸಿದಾಗ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಒದಗಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಕಂದಾಯ ಇಲಾಖೆ ಅಧೀನದಲ್ಲಿ ಇರುವ ವಿಪತ್ತು ನಿರ್ವಹಣೆ ಕೋಶದಡಿ ಸದ್ಯ ಮಹಾ ಮಳೆ, ಸಿಡಿಲು ಬಡಿದು ಅಥವಾ ಇನ್ಯಾವುದೇ ರೀತಿಯ ಪ್ರಕೃತಿ ವಿಕೋಪದಿಂದ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಮಾತ್ರ ಅವಕಾಶವಿದೆ. ಈ ಪರಿಹಾರ ಧನ ಬಿಟ್ಟರೆ ಬೇರ್ಯಾವ ಸೌಲಭ್ಯಗಳನ್ನೂ ಸರ್ಕಾರದಿಂದ ನೀಡಲು ಅವಕಾಶವಿಲ್ಲ. ಹೀಗಾಗಿ ವಿಪತ್ತು ನಿರ್ವಹಣೆ ಕೋಶದ ನಿಯಮಗಳ ಬದಲಾವಣೆ ಅಥವಾ ಪ್ರತ್ಯೇಕ ಯೋಜನೆ ರೂಪಿಸಲು ಸರ್ಕಾರ ಮುಂದಾಗಿದೆ.

ಹೊಸ ನಿಯಮ ಏನು?: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ, ಆ ಕುಟುಂಬ ಸ್ವಂತ ಮನೆ ಹೊಂದಿರದಿದ್ದರೆ ಮನೆ, ಮಾಸಿಕ 2 ಸಾವಿರ ಮಾಸಾಶನ, ಸುವರ್ಣ ಆರೋಗ್ಯ ಟ್ರಸ್ಟ್‌ನಿಂದ ಉಚಿತ ಆರೋಗ್ಯ ಸೇವೆಗೆ ಗುರುತಿನ ಚೀಟಿ, ಅವರ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಕೊಡುವ ಕುರಿತು ನಿಯಮಾವಳಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ.

ಯೋಚನೆ ಹುಟ್ಟಿದ್ದು ಬಾಗಲಕೋಟೆಯಲ್ಲಿ
ಈ ಹೊಸ ಯೋಜನೆ ಹೊಳೆದದ್ದು ಬಾಗಲಕೋಟೆಯಲ್ಲಿ. ಸ್ವತಃ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರು, ಬರ ಪರಿಹಾರ ಹಾಗೂ ಹಾನಿ ಕುರಿತ ಸಭೆ ನಡೆಸುತ್ತಿದ್ದ ವೇಳೆ ಹೊಸದಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಏನಾದರೂ ಸಲಹೆಗಳಿದ್ದರೆ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದರು. ಈ ವೇಳೆ ಬಾಗಲಕೋಟೆಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಈ ಪ್ರಸ್ತಾಪವನ್ನಿಟ್ಟರು. ಇದೊಂದು ಅತ್ಯುತ್ತಮ ವಿಚಾರ, ಕೂಡಲೇ ರಾಜ್ಯಾದ್ಯಂತ ಜಾರಿಗೊಳಿಸುವ ಕುರಿತು ಗಂಭೀರವಾಗಿ ಪರಿಗಣಿಸಲಾಗುತ್ತದೆ. ತಕ್ಷಣ ಅದಕ್ಕೊಂದು ಪ್ರಸ್ತಾವನೆ ಸಿದ್ಧಪಡಿಸಿ ಕಳುಹಿಸಿ ಎಂದು ಸಚಿವರು ತಿಳಿಸಿದ್ದರು. ಹೀಗಾಗಿ ಅಧಿಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ರಾಜ್ಯ ವಿಪತ್ತು ನಿರ್ವಹಣೆ ಕೋಶಕ್ಕೆ ಕಳುಹಿಸಿದ್ದಾರೆ.

ಬಾಗಲಕೋಟೆಯ ಸಭೆಯಲ್ಲಿ ಅಧಿಕಾರಿಯೊಬ್ಬರು ಉತ್ತಮ ಸಲಹೆ ಕೊಟ್ಟಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಕೋಶದ ಅಧ್ಯಕ್ಷ ನಾನೇ ಇರುವುದರಿಂದ ಈ ಕುರಿತು ಸಿಎಂ ಜತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಆರ್‌.ವಿ. ದೇಶಪಾಂಡೆ, ಕಂದಾಯ ಸಚಿವ

ರೈತ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ನೀಡುವ ಪರಿಹಾರ ಧನ ಮಾದರಿಯಲ್ಲಿ ಪ್ರಕೃತಿ ವಿಕೋಪದಿಂದ ಮೃತಪಟ್ಟ ಕುಟುಂಬಕ್ಕೂ ಪರಿಹಾರ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕಂದಾಯ ಸಚಿವರಿಗೆ ನೀಡಿದ್ದೇನೆ. ಅದಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಿ ವಿಪತ್ತು ನಿರ್ವಹಣೆ ಕೋಶಕ್ಕೆ ಕಳುಹಿಸಲು ತಿಳಿಸಿದ್ದಾರೆ. ಕೂಡಲೇ ಪ್ರಸ್ತಾವನೆ ಸಲ್ಲಿಸಲಾಗುವುದು.
– ಅಶೋಕ ದುಡಗುಂಟಿ, ಅಪರ ಜಿಲ್ಲಾಧಿಕಾರಿ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.