ಮಲೆನಾಡು ಭಾಗದ ಮನೆಗಳಲ್ಲಿ ಬಿರುಕು
Team Udayavani, Aug 25, 2018, 6:10 AM IST
ಚಿಕ್ಕಮಗಳೂರು: ಮಳೆ ಪ್ರಮಾಣ ಇಳಿಮುಖವಾಗಿದ್ದರೂ ಜಿಲ್ಲೆಯಲ್ಲಿ ಅನಾಹುತಗಳು ಮಾತ್ರ ಸಂಭವಿಸುತ್ತಲೇ ಇವೆ. ನಿರಂತರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಆರಂಭವಾದ ಗುಡ್ಡ ಕುಸಿತ, ರಸ್ತೆ ಬಿರುಕು ಬಿಡೋದು ಇಂದಿಗೂ ಮುಂದುವರಿದಿದೆ.
ಇದರೊಂದಿಗೆ ಈಗ ಮಲೆನಾಡು ಪ್ರದೇಶದ ಹಲವು ಮನೆಗಳಲ್ಲಿ ಬಿರುಕು ಉಂಟಾಗುತ್ತಿದ್ದು,ಜನ ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕುಗಳ ಕೆಲವೆಡೆ ಮನೆಗಳಲ್ಲಿ ಬಿರುಕು ಮೂಡುತ್ತಿ
ರುವ ಪ್ರಮಾಣ ಹೆಚ್ಚಾಗಿದೆ. ಕೊಪ್ಪ ತಾಲೂಕಿನ ಸೋಮೇಶ್ವರ ಖಾನ್, ಬಸ್ರಿಕಟ್ಟೆ, ಮೇಗುಂದ ಗ್ರಾಮಗಳ ಹಲವು ಮನೆಗಳ
ಗೋಡೆಗಳು ಹಾಗೂ ನೆಲ ಬಿರುಕು ಬಿಡುತ್ತಿವೆ. ಹಲವು ಮನೆಗಳಲ್ಲಿ ದೊಡ್ಡದಾಗಿಯೇ ನೆಲ ಬಾಯ್ಬಿಡುತ್ತಿದ್ದು, ಮನೆಯವರು ಆ ಕೊಠಡಿಗಳಲ್ಲಿನ ಸಾಮಾನು ಸರಂಜಾಮುಗಳನ್ನು ಹೊರಗಡೆ ಇಡಲು ಆರಂಭಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬೊಗಸೆ ಗ್ರಾಮದಲ್ಲಿ ಕೃಷ್ಣಯ್ಯ ಎನ್ನುವವರಿಗೆ ಸೇರಿದ ಮನೆಯ ಗೋಡೆ, ನೆಲ ಹಾಗೂ ಮುಂಭಾಗದಲ್ಲಿ ಬಿರುಕು ಬಿಟ್ಟಿದೆ. ಶೃಂಗೇರಿ ತಾಲೂಕಿನ ಹೆಗ್ಗಾರು, ಅಡಿಗೆಬೈಲು, ಹಿರೇಗದ್ದೆ ಗ್ರಾಮಗಳಲ್ಲಿಯೂ ಮನೆಗಳು ಬಿರುಕು ಬಿಟ್ಟಿರುವ ವರದಿಯಾಗಿದೆ.
ಕಳಸ-ಮಂಗಳೂರು ಸಂಚಾರ ಬಂದ್: ಕುದುರೆಮುಖ ಘಾಟ್ನ ತಿರುವೊಂದರಲ್ಲಿ ಲಾರಿ ಸಿಕ್ಕಿ ಹಾಕಿಕೊಂಡ ಪರಿಣಾಮ ಕಳಸ-ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಲಾರಿ ಸಿಕ್ಕಿಕೊಂಡಿದ್ದು, ಬೇರೆ ವಾಹನಗಳು ಸಂಚರಿಸಲು ಸ್ಥಳವೇ ಇಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ