ಮಲೆನಾಡು ಭಾಗದ ಮನೆಗಳಲ್ಲಿ ಬಿರುಕು
Team Udayavani, Aug 25, 2018, 6:10 AM IST
ಚಿಕ್ಕಮಗಳೂರು: ಮಳೆ ಪ್ರಮಾಣ ಇಳಿಮುಖವಾಗಿದ್ದರೂ ಜಿಲ್ಲೆಯಲ್ಲಿ ಅನಾಹುತಗಳು ಮಾತ್ರ ಸಂಭವಿಸುತ್ತಲೇ ಇವೆ. ನಿರಂತರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಆರಂಭವಾದ ಗುಡ್ಡ ಕುಸಿತ, ರಸ್ತೆ ಬಿರುಕು ಬಿಡೋದು ಇಂದಿಗೂ ಮುಂದುವರಿದಿದೆ.
ಇದರೊಂದಿಗೆ ಈಗ ಮಲೆನಾಡು ಪ್ರದೇಶದ ಹಲವು ಮನೆಗಳಲ್ಲಿ ಬಿರುಕು ಉಂಟಾಗುತ್ತಿದ್ದು,ಜನ ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕುಗಳ ಕೆಲವೆಡೆ ಮನೆಗಳಲ್ಲಿ ಬಿರುಕು ಮೂಡುತ್ತಿ
ರುವ ಪ್ರಮಾಣ ಹೆಚ್ಚಾಗಿದೆ. ಕೊಪ್ಪ ತಾಲೂಕಿನ ಸೋಮೇಶ್ವರ ಖಾನ್, ಬಸ್ರಿಕಟ್ಟೆ, ಮೇಗುಂದ ಗ್ರಾಮಗಳ ಹಲವು ಮನೆಗಳ
ಗೋಡೆಗಳು ಹಾಗೂ ನೆಲ ಬಿರುಕು ಬಿಡುತ್ತಿವೆ. ಹಲವು ಮನೆಗಳಲ್ಲಿ ದೊಡ್ಡದಾಗಿಯೇ ನೆಲ ಬಾಯ್ಬಿಡುತ್ತಿದ್ದು, ಮನೆಯವರು ಆ ಕೊಠಡಿಗಳಲ್ಲಿನ ಸಾಮಾನು ಸರಂಜಾಮುಗಳನ್ನು ಹೊರಗಡೆ ಇಡಲು ಆರಂಭಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬೊಗಸೆ ಗ್ರಾಮದಲ್ಲಿ ಕೃಷ್ಣಯ್ಯ ಎನ್ನುವವರಿಗೆ ಸೇರಿದ ಮನೆಯ ಗೋಡೆ, ನೆಲ ಹಾಗೂ ಮುಂಭಾಗದಲ್ಲಿ ಬಿರುಕು ಬಿಟ್ಟಿದೆ. ಶೃಂಗೇರಿ ತಾಲೂಕಿನ ಹೆಗ್ಗಾರು, ಅಡಿಗೆಬೈಲು, ಹಿರೇಗದ್ದೆ ಗ್ರಾಮಗಳಲ್ಲಿಯೂ ಮನೆಗಳು ಬಿರುಕು ಬಿಟ್ಟಿರುವ ವರದಿಯಾಗಿದೆ.
ಕಳಸ-ಮಂಗಳೂರು ಸಂಚಾರ ಬಂದ್: ಕುದುರೆಮುಖ ಘಾಟ್ನ ತಿರುವೊಂದರಲ್ಲಿ ಲಾರಿ ಸಿಕ್ಕಿ ಹಾಕಿಕೊಂಡ ಪರಿಣಾಮ ಕಳಸ-ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಲಾರಿ ಸಿಕ್ಕಿಕೊಂಡಿದ್ದು, ಬೇರೆ ವಾಹನಗಳು ಸಂಚರಿಸಲು ಸ್ಥಳವೇ ಇಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ