ಸೋರಿಕೆ ತಡೆಯುವುದೇ ಸವಾಲು?


Team Udayavani, Aug 25, 2018, 6:00 AM IST

23-spt-1.jpg

ಮಡಿಕೇರಿ : ಜಲ ಪ್ರಳಯಕ್ಕೆ ತುತ್ತಾಗಿ ನಿರಾಶ್ರಿತರಾಗಿರುವ ಕೊಡಗಿನ ಜನತೆಗೆ ರಾಜ್ಯದ ವಿವಿಧೆಡೆಯಿಂದ ಸಾಕಷ್ಟು ಪ್ರಮಾಣದಲ್ಲಿ ಬಟ್ಟೆ  ಹಾಗೂ ಆಹಾರ ಸಾಮಗ್ರಿ ಸಂಗ್ರಹವಾಗುತ್ತಿದ್ದು  ದುರುಪಯೋಗವೂ ಹೆಚ್ಚಾಗುತ್ತಿದೆ.

ಹೊದಿಕೆ, ಹಾಸಿಗೆ ಸೇರಿದಂತೆ ವಿವಿಧ ಬಗೆಯ ಬಟ್ಟೆಗಳು, ಅಕ್ಕಿ, ಹಾಲು ಮತ್ತು ಸಕ್ಕರೆ ಮೊದಲಾದ ಆಹಾರ ಸಾಮಗ್ರಿಗಳು ಅಗತ್ಯಕ್ಕಿಂತಲೂ ಹೆಚ್ಚು ಸಂಗ್ರಹವಾಗುತ್ತಿದೆ. ಆದರೆ, ಸಂತ್ರಸ್ತರ ಹೆಸರಿನಲ್ಲಿ ಸಂಗ್ರಹ ಮಾಡುತ್ತಿರುವ ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬರುತ್ತಿವೆ.

ಕೊಡಗಿನ ನಿರಾಶ್ರಿತರಿಗೆ ನೀಡಲು ಟ್ರಕ್‌, ಟೆಂಪೋ, ಕಾರು ಮೊದಲಾದ ವಾಹನದಲ್ಲಿ ತರುವ ಸಾಮಗ್ರಿಗಳನ್ನು ಕಡ್ಡಾಯವಾಗಿ ಜಿಲ್ಲಾಡಳಿತ ಕಚೇರಿಯಲ್ಲಿ ನೋಂದಣಿ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಕೆಲವು ಸಂಘಟನೆಗಳು ನೋಂದಣಿ ಮಾಡಿಕೊಂಡಿಲ್ಲ. ಆದರೆ, ಸಾರ್ವಜನಿಕರಿಂದ ಅಗತ್ಯ ಸಾಮಗ್ರಿ ಹಾಗೂ ಹಣ ಸಂಗ್ರಹ ಮಾಡುತ್ತಿವೆ.

ಮತ್ತೂಂದೆಡೆ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಆದರೆ, ಕೆಲವರು ನೇರವಾಗಿ ನಿರಾಶ್ರಿತರ ಶಿಬಿರಕ್ಕೆ ಹೋಗಿ ಹಂಚುತ್ತಿದ್ದಾರೆ. ಹೆಸರಿಗೆ ಕೆಲವು ವಸ್ತುಗಳನ್ನು ಹಂಚಿಕೆ ಮಾಡಿ ಉಳಿದದ್ದನ್ನು ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಲಾಗಿದೆ.

ಜಿಲ್ಲೆಯ 51 ನಿರಾಶ್ರಿತರ ಕೇಂದ್ರದಲ್ಲಿ ಎಲ್ಲ ಬಗೆಯ ವಸ್ತುಗಳ ಸಂಗ್ರಹ ಇದೆ. ಆರು ತಿಂಗಳು ಸಂಗ್ರಹಿ ಇಡಬಲ್ಲ ವಸ್ತುಗಳನ್ನು ಜಿಲ್ಲಾಡಳಿತದ ಕಚೇರಿ ಮತ್ತು ತಾಹಸೀಲ್ದಾರ್‌ ಕಚೇರಿಯಲ್ಲಿ ಇಡಲಾಗಿದೆ. ಬಟ್ಟೆ, ಆಹಾರ ಪದಾರ್ಥ ಮೊದಲಾದ ಸೌಲಭ್ಯ ಪಡೆಯುವುದಕ್ಕಾಗಿಯೇ ಅನೇಕರು ನಿರಾಶ್ರಿತರ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ನಿರಾಶ್ರಿತರ ಕೇಂದ್ರದಲ್ಲಿ ನೀಡುವ ವಸ್ತುಗಳನ್ನು ಪಡೆದು ನೇರವಾಗಿ ಮನೆಗೆ ಹೋಗುವವರೂ ಇದ್ದಾರೆ. ಹೊದಿಕೆ ಮತ್ತು ಹಾಸಿಗೆ ಸೇರಿದಂತೆ ವಿವಿಧ ಬಟ್ಟೆಗಳನ್ನು ಕೆಲವರು ಮೇಲಿಂದ ಮೇಲೆ ಕೇಳಿ ಪಡೆದು ಮನೆಯಲ್ಲಿ ಸಂಗ್ರಹಿಸಿ ಇಡುತ್ತಿದ್ದಾರೆ .

ಹೊಸ ನೋಂದಣಿ ಇಲ್ಲ:
ಬಟ್ಟೆ ಹಾಗೂ ಆಹಾರ ಸಾಮಗ್ರಿ ದುರುಪಯೋಗ ತಡೆಯುವ ನಿಟ್ಟಿನಲ್ಲಿ ಬಹುತೇಕ ನಿರಾಶ್ರಿತರ ಕೇಂದ್ರದಲ್ಲಿ ಹೊಸದಾಗಿ ನೋಂದಣಿ ಮಾಡಿಕೊಳ್ಳುವುದನ್ನು ನಿಲ್ಲಿಸಿದ್ದಾರೆ. ಈಗಾಗಲೇ ನೋಂದಣಿಯಾಗಿರುವವರಿಗೆ ಮಾತ್ರ ಸಾಮಗ್ರಿಗಳನ್ನು ನೀಡಲು ನಿರ್ಧರಿಸಿದ್ದಾರೆ. ಪೊಲೀಸ್‌ ಅಧಿಕಾರಿಗಳು, ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಂತರಷ್ಟೇ ಹೊಸ ನೋಂದಣಿ ಮಾಡಿಕೊಳ್ಳಲಾಗುತ್ತದೆ ಮೈತ್ರಿ ಸಭಾಂಗಣದ ನಿರಾಶ್ರಿತರ ಕೇಂದ್ರ ಉಸ್ತುವಾರಿ ವಿಶ್ವನಾಥ್‌ ಮಾಹಿತಿ ನೀಡಿದರು.

ಶಿಬಿರದಲ್ಲಿ ಸಂಖ್ಯೆ ಇಳಿಮುಖ
ಜಿಲ್ಲೆಯ 51 ಶಿಬಿರದಲ್ಲೂ ನಿರಾಶ್ರಿತರ ಸಂಖ್ಯೆ ಇಳಿಮುಖವಾಗಿದೆ. ಬೆರಳೆಣಿಕೆಯಷ್ಟು ಸಂಖ್ಯೆಯ ನಿರಾಶ್ರಿತರು ತಮ್ಮ ಮನೆಗೆ ವಾಪಾಸ್‌ ಹೋಗಿದ್ದಾರೆ. ಅನೇಕರು ಮಡಿಕೇರಿ ನಗರ, ಮೈಸೂರು, ಚಾಮರಾಜಪೇಟೆ, ಮಂಗಳೂರು, ಸುಳ್ಯ, ಬೆಂಗಳೂರು ಮೊದಲಾದ ಭಾಗದಲ್ಲಿ ಇರುವ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದಾರೆ. ಮನೆ ಹಾನಿ ಮತ್ತು ಜಮೀನು ಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಿ ಸಂಬಂಧಿಕರ ಮನೆ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ.  ಮೈತ್ರಿ ಸಭಾಂಗಣದಲ್ಲಿ  ಮೊದಲ ದಿನ 900ಕ್ಕೂ ಅಧಿಕ ನಿರಾಶ್ರಿತರು ನೋಂದಣಿ ಮಾಡಿಕೊಂಡಿದ್ದರು. ಶುಕ್ರವಾರ ನಿರಾಶ್ರಿತರ ಸಂಖ್ಯೆ 375ಕ್ಕೆ ಇಳಿಕೆಯಾಗಿದೆ. ಇದೆ ಸ್ಥಿತಿ ಎಲ್ಲ ನಿರಾಶ್ರಿತರ ಕೇಂದ್ರದಲ್ಲೂ ಇದೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.