ಬ್ಯಾಂಕ್‌ ಠೇವಣಿ ಇದ್ದರೆ ಸಾಲಮನ್ನಾ ಇಲ್ಲ!


Team Udayavani, Aug 25, 2018, 6:00 AM IST

bank-dep.jpg

ಬೆಂಗಳೂರು: ಸಹಕಾರ ಸಂಘಗಳಲ್ಲಿ ರೈತರ ಸಾಲಮನ್ನಾ ವಿಚಾರದಲ್ಲಿ ಇನ್ನೂ ಗೊಂದಲಕ್ಕೆ ಬ್ರೇಕ್‌ ಬಿದ್ದಿಲ್ಲ. ಸರ್ಕಾರದ ಘೋಷಣೆಯಿಂದ ಸಂಪೂರ್ಣ ರೈತರ ಸಾಲ ಮನ್ನಾ ಅನುಮಾನವಾಗಿದೆ.

ಜುಲೈ 10, 2018ಕ್ಕೆ ಸಾಲಮನ್ನಾ ವ್ಯಾಪ್ತಿಗೆ ಒಳ ಪಡುವ ರೈತರು ರಾಜ್ಯದ ಡಿಸಿಸಿ, ವಾಣಿಜ್ಯ ಬ್ಯಾಂಕ್‌ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ಪ್ಯಾಕ್ಸ್‌)ಗಳಲ್ಲಿ ನಿಶ್ಚಿತ ಠೇವಣಿ (ಮುದ್ದತ್ತು ಠೇವಣಿ) ಇಟ್ಟಿದ್ದರೆ, ಅವರ ಠೇವಣಿ ಹಣವನ್ನು ಸಾಲಮನ್ನಾದಲ್ಲಿ ಕಡಿತಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಹೀಗಾಗಿ, ರೈತರು 1ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಯಾವುದೇ ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ರೈತರಿಗೆ ಸಾಲಮನ್ನಾ ಪ್ರಯೋಜನ ದೊರೆಯುವುದಿಲ್ಲ. ಸುಮಾರು 10ಲಕ್ಷ ರೈತರು ಐದು ಸಾವಿರ ಕೋಟಿ ರೂ.ವರೆಗೆ ಜಿಲ್ಲಾ ಸಹಕಾರ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿದ್ದು, ಅಂತಹ ರೈತರಿಗೆ ಸಾಲಮನ್ನಾ ಪೂರ್ಣ ಆಗುವುದಿಲ್ಲ.

ಸಹಕಾರಿ ಬ್ಯಾಂಕ್‌ಗಳ ಸಾಲಮನ್ನಾ ಮಾಡುವ ಕುರಿತಂತೆ ಆಗಸ್ಟ್‌ 14 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಈ ರೀತಿಯ ನಿಬಂìಧ ಹೇರುವ ಮೂಲಕ ಲಕ್ಷಾಂತರ ರೈತರನ್ನು ಯೋಜನೆ ಫ‌ಲಾನುಭವಿಯಾಗುವುದರಿಂದ ಹೊರಗಿಡುವ ಪ್ರಯತ್ನ  ಮಾಡಲಾಗಿದೆ.

ಸಾಲಮನ್ನಾ ಸೌಲಭ್ಯದ ಲಾಭ ಪಡೆಯಲು 11 ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳಲ್ಲಿ ಪ್ರಮುಖವಾಗಿ ಏಳನೇ ಅಂಶದಲ್ಲಿ ಯಾವ ವರ್ಗದ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ.
ಬೆಳೆ ಸಾಲ ಪಡೆದ ರೈತರು ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಮಾಡುತ್ತಿದ್ದು, ಕನಿಷ್ಠ 20 ಸಾವಿರ ಸಂಬಳ ಅಥವಾ ಪಿಂಚಣಿ ಪಡೆಯುತ್ತಿರುವ ರೈತರು. ಕಳೆದ ಮೂರು ವರ್ಷಗಳಲ್ಲಿ ಯಾವುದಾದರೂ ಒಂದು ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದ್ದರೆ, ಚಿನ್ನಾಭರಣ ಸಾಲ, ವಾಹನ ಖರೀದಿ, ಪಶು ಭಾಗ್ಯ ಹಾಗೂ ಸ್ವಸಹಾಯ ಗುಂಪುಗಳಿಗೆ ಸಾಲಮನ್ನಾ ಅನ್ವಯ ಆಗುವುದಿಲ್ಲ ಎಂದು ಈ ಮೊದಲೇ ಘೋಷಣೆ ಮಾಡಲಾಗಿತ್ತು.

ಆದರೆ, ಈಗ ಅದರ ಜೊತೆಗೆ ಮತ್ತೂಂದು ಷರತ್ತು ವಿಧಿಸಲಾಗಿದ್ದು, ಬೇರೆ ಆದಾಯದ ಮೂಲ ಇಲ್ಲದೇ ಕೇವಲ ಕೃಷಿಯನ್ನೇ ನಂಬಿರುವ ರೈತರಿಗೂ ಈ ಯೋಜನೆಯ ಪ್ರಯೋಜನ ದೊರೆಯದಂತೆ ತಪ್ಪಿಸುವ ಪ್ರಯತ್ನವನ್ನು ಸರ್ಕಾರ ನಡೆಸಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ರೈತರ ಠೇವಣಿಯೇ ಹೆಚ್ಚು:
ರಾಜ್ಯದ ಸಹಾಕಾರಿ ಪತ್ತಿನ ಸಂಘಗಳು ಹಾಗೂ ಡಿಸಿಸಿ ಬ್ಯಾಂಕ್‌ಗಳಲ್ಲಿ ಕನಿಷ್ಠ 5 ಸಾವಿರ ಕೋಟಿ ರೂಪಾಯಿ ಠೇವಣಿ ಇಡಲಾಗಿದೆ. ಸಹಕಾರಿ ಬ್ಯಾಂಕ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರೇ ಠೇವಣಿ ಇಟ್ಟಿರುವುದರಿಂದ ಅಂತಹ ರೈತರಿಗೆ ಸಾಲಮನ್ನಾ ಯೋಜನೆ ಲಾಭ ದೊರೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಸರ್ಕಾರದ ಈ ನಿರ್ಬಂಧ ರೈತರಿಗಷ್ಟೇ ಅಲ್ಲ. ಭವಿಷ್ಯದಲ್ಲಿ ಸಹಕಾರಿ ಬ್ಯಾಂಕ್‌ಗಳಿಗೂ ದೊಡ್ಡ ನಷ್ಟವುಂಟು ಮಾಡುವ ಸಾಧ್ಯತೆ ಇದೆ.

ಸಹಕಾರಿ ಬ್ಯಾಂಕ್‌ಗಳಿಗೆ ಆತಂಕ:
ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವುದನ್ನು ನಿಲ್ಲಿಸುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಒಂದೊಮ್ಮೆ ಹಿಂದೇಟು ಹಾಕಿದರೆ, ಗ್ರಾಮೀಣ ಪ್ರದೇಶ ಸಹಕಾರಿ ಸಂಘಗಳು ನಷ್ಟ ಅನುಭವಿಸಲಿವೆ. ಇದರಿಂದ ಸಹಕಾರಿ ವ್ಯವಸ್ಥೆೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚು. ಈಗಾಗಲೇ ಹಿಂದಿನ ಸರ್ಕಾರ ಮಾಡಿರುವ ಸಾಲ ಮನ್ನಾದ 4 ಸಾವಿರ ಕೋಟಿ ಹಣ ಬಿಡುಗಡೆ ಮಾಡದಿರುವುದರಿಂದ ಸಂಕಷ್ಟ ಅನುಭವಿಸುತ್ತಿದ್ದು, ರೈತರಿಗೆ ಹೊಸ ಸಾಲ ಕೊಡುವುದೂ ಕಷ್ಟವಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಸಹಕಾರಿ ಬ್ಯಾಂಕ್‌ ಅಧಿಕಾರಿಗಳು ಹೇಳುತ್ತಾರೆ. 

ರೈತರ ಠೇವಣಿ ದುಡ್ಡನ್ನು ಸಾಲ ಮನ್ನಾದಲ್ಲಿ ವಜಾ ಮಾಡಲು ಹೇಗೆ ಸಾಧ್ಯ ? ಈ ರೀತಿಯ ಷರತ್ತು ವಿಧಿಸಲು ಹೇಗೆ ಸಾಧ್ಯ.  ಠೇವಣಿ ದುಡ್ಡಿಗೂ ಸಾಲ ಮನ್ನಾಕ್ಕೂ ಏನು ಸಂಬಂಧ ? ಸರ್ಕಾರದ ಈ ನಿರ್ಧಾರವನ್ನು ಸಹಕಾರಿ ರಂಗದಲ್ಲಿರುವವರೆಲ್ಲರೂ ವಿರೋಧಿಸುತ್ತೇವೆ.
– ಡಾ. ರಾಜೇಂದ್ರಕುಮಾರ್‌, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ.

ಬ್ಯಾಂಕ್‌ನಲ್ಲಿ ಠೇವಣಿ ಇಟ್ಟವರಿಗೆ ಸಾಲ ಮನ್ನಾ ಅನ್ವಯ ಆಗುವುದಿಲ್ಲ ಅಂತ ಸರ್ಕಾರದ ಆದೇಶದಲ್ಲಿ  ಸ್ಪಷ್ಟವಾಗಿ ಹೇಳಲಾಗಿದೆ. ಠೇವಣಿ ಇಟ್ಟವರಿಗೆ ಮನ್ನಾ ಅನ್ವಯ ಆಗುವುದಿಲ್ಲ ಎಂದಿರುವುದು ಸಹಕಾರಿ ಕ್ಷೇತ್ರದಲ್ಲಿ  ಸಾಲ ಪಡೆದ ಶೇ. 50 ರಷ್ಟು ರೈತರು ಸಾಲ ಮನ್ನಾ ವ್ಯಾಪ್ತಿಯಿಂದ ಹೊರಗುಳಿಯುತ್ತಾರೆ.
– ಲಕ್ಷ್ಮಣ ಸವದಿ, ಮಾಜಿ ಸಹಕಾರ ಸಚಿವ

– ಶಂಕರ ಪಾಗೋಜಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.