ಸಂಕಷ್ಟಕ್ಕೆ ಸ್ಪಂದಿಸಿದ ಸ್ವಯಂಸೇವಕರು


Team Udayavani, Aug 26, 2018, 6:15 AM IST

ban26081810medn.jpg

ಮಡಿಕೇರಿ: ನಿರಂತರ ಮಳೆಯಿಂದ ಆಗಿರುವ ಅನಾಹುತದ ಪರಿಹಾರ ಕಾರ್ಯಕ್ಕೆ ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡ ಧಾವಿಸುವ ಮೊದಲೇ ಸ್ಥಳೀಯ ಯುವಕರು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಾಕಷ್ಟು ಜನರನ್ನು ರಕ್ಷಿಸಿದ್ದರು. ಅಷ್ಟೇ ಅಲ್ಲ,ಸೇವಾ ಭಾರತಿ ವತಿಯಿಂದ ಹಲವು ನಿರಾಶ್ರಿತರ ಶಿಬಿರಗಳನ್ನೂ ನಡೆಸಲಾಗುತ್ತಿದೆ.

ಕೊಡಗು ಜಿಲ್ಲೆಯ ಹಾಲೇರಿ, ಮುಕ್ಕೊಡ್ಲು, ಮಕ್ಕಂದೂರು, ತಂತಿಪಾಲ್‌ ಮೊದಲಾದ ಭಾಗದಲ್ಲಿ ಸೈನಿಕರು ಮತ್ತು ಎನ್‌ಡಿಆರ್‌ಎಫ್ ತಂಡ ಧಾವಿಸುವ ಮೊದಲೇ ಸ್ಥಳೀಯ ಯುವಕರು ಆರ್‌ಎಸ್‌ಎಸ್‌ ಕಾರ್ಯಕರ್ತರ ಜತೆ ಸೇರಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ ಎಂಬುದನ್ನು ಸ್ಥಳೀಯರೇ ಹೇಳುತ್ತಿದ್ದಾರೆ.

ಮಳೆಯಿಂದಾಗಿ ಭೀಕರ ಅನಾಹುತ ಆಗುತ್ತಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಆರ್‌ಎಸ್‌ಎಸ್‌ನ ಜಿಲ್ಲಾ ಪ್ರಚಾರ ಪ್ರಮುಖ್‌ ಚಂದ್ರ ಅವರು ಸಂಘದ ಹಿರಿಯರಿಗೆ ಮಾಹಿತಿ ನೀಡಿದರು. ಆ. 16ರ ಬೆಳಗ್ಗೆ ಮಡಿಕೇರಿಯ ಸಂಘದ ಕಾರ್ಯಾಲಯದಲ್ಲಿ 10 ನಿಮಿಷ ಕಾರ್ಯಕರ್ತರು ಸಭೆ ನಡೆಸಿದರು. ಬಳಿಕ ಹಿರಿಯ ಸೂಚನೆಯಂತೆ 30 ಸ್ವಯಂಸೇವಕರ ತಂಡ ಮಕ್ಕಂದೂರು ಭಾಗಕ್ಕೆ ರಕ್ಷಣೆಗೆ ಧಾವಿಸಿದ್ದರು. ಮಧ್ಯಾಹ್ನದ ವೇಳೆಗೆ ಸುಮಾರು 50ರಿಂದ 60 ಜನರನ್ನು ರಕ್ಷಿಸಿ,ನಿರಾಶ್ರಿತರ ಶಿಬಿರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಜಿಲ್ಲೆಯ ಬೇರೆ ಭಾಗದಲ್ಲಿ ಮಳೆ ಹಾನಿಯ ಸುದ್ದಿ ತಿಳಿಯುತ್ತಿದ್ದಂತೆ ಮತ್ತಷ್ಟು ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು. ಸಂಜೆ ವೇಳೆಗೆ 300ರಿಂದ 350 ಕಾರ್ಯಕರ್ತರು ವಿವಿಧ ಭಾಗದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದರು ಎಂದು ಸೇವಾ ಭಾರತಿಯ ಕಾರ್ಯದರ್ಶಿ ಮಹೇಶ್‌ ಕುಮಾರ್‌ ವಿವರಿಸುತ್ತಾರೆ.

ಸೇನೆ ಅಥವಾ ಎನ್‌ಡಿಆರ್‌ಎಫ್ ತಂಡದಲ್ಲಿರುವಂತೆ ಯಾವುದೇ ರಕ್ಷಣಾ ಪರಿಕರ ನಮ್ಮಲ್ಲಿ ಇರಲಿಲ್ಲ. ಆದರೂ ಸಾವಿರಕ್ಕೂ ಅಧಿಕ ಮಂದಿಯನ್ನು ನಮ್ಮಕಾರ್ಯಕರ್ತರು ರಕ್ಷಿಸಿದ್ದಾರೆ. ನಂತರ ಸೈನಿಕರು ಹಾಗೂ ಎನ್‌ಡಿಆರ್‌ಎಫ್ ತಂಡದೊಂದಿಗೂ ನಮ್ಮ ಕಾರ್ಯಕರ್ತರು ಸೇರಿಕೊಂಡು ರಕ್ಷಣಾ ಕಾರ್ಯ ನಡೆಸಿದ್ದಾರೆ. ಆರಂಭದಲ್ಲಿ ಒಂದು ಸ್ಟೌ ಹಾಗೂ ಒಂದು ಸಿಲಿಂಡರ್‌ ಬಿಟ್ಟರೆ ಬೇರೇನೂ ಇರಲಿಲ್ಲ. ಅದರಲ್ಲೇ ಗಂಜಿ ಮತ್ತು ಚಟ್ನಿ ಮಾಡಿ ಮೊದಲ ದಿನ ಮಧ್ಯಾಹ್ನದ ಊಟ ಬಡಿಸಿದ್ದೆವು. ನಂತರ ಎಲ್ಲ ವ್ಯವಸ್ಥೆಯೂ ತಾನಾಗಿಯೇ ಆಯಿತು ಎಂದು ಅವರು ಮಾಹಿತಿ ನೀಡಿದರು.

ಸಂತ್ರಸ್ತರ ನೆರವಿಗೆ ಧಾವಿಸುವಂತೆ ಕಾರ್ಯಕರ್ತರಿಗೆ ಸಂದೇಶ ರವಾನಿಸಿದೆವು.ಎಲ್ಲಿ ಸಾಧ್ಯವೋ ಅಲ್ಲೆಲ್ಲ ನಿರಾಶ್ರಿತರ ಕೇಂದ್ರ
ಆರಂಭಿಸಿ, ಸಂಪರ್ಕಕ್ಕೆಂದು ನಾಲ್ಕು ಮೊಬೈಲ್‌ ಸಂಖ್ಯೆಗಳನ್ನು ನೀಡಿದೆವು. ಸಾಮಾಜಿಕ ಜಾಲತಾಣದಲ್ಲಿ ಮೊಬೈಲ್‌ ಸಂಖ್ಯೆ ಶೇರ್‌ ಆಗಿ ದೇಶ, ವಿದೇಶದಿಂದಲೂ ಕರೆಗಳು ಬರಲು ಆರಂಭವಾದವು. ಇದರ ಜತೆಗೆ ರಾಜ್ಯದ ಎಲ್ಲ ಭಾಗದಿಂದಲೂ ಪರಿಹಾರ ಸಾಮಗ್ರಿ ನಿರೀಕ್ಷೆಗೂ ಮೀರಿ ಬಂದಿದೆ. ಸರ್ಕಾರದ ಮುಂದಿನ ಕ್ರಮದಂತೆ ನಿರಾಶ್ರಿತರಿಗೆ ವ್ಯವಸ್ಥೆಯಾಗಿದೆ. ಸೇವಾ ಭಾರತಿಯಿಂದ ಮಾಡಬಹುದಾದ ಎಲ್ಲ ರೀತಿಯ ಸಹಾಯ ಮಾಡುತ್ತೇವೆ. ನಮ್ಮ ಶಿಬಿರಗಳಲ್ಲಿ ಇರುವ ಎಲ್ಲರ ವಿಳಾಸತೆಗೆದುಕೊಂಡಿದ್ದೇವೆಂದು ವಿವರಿಸಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.