ಕೊಡಗಿನಲ್ಲಿ ಉದ್ಯೋಗ ಸೃಷ್ಟಿಗೆ ಕ್ರಿಯಾಯೋಜನೆ​​​​​​​


Team Udayavani, Aug 26, 2018, 6:00 AM IST

kodagu-2525666.jpg

ಮಡಿಕೇರಿ: ಮಳೆ ಹಾನಿ ಮತ್ತು ಗುಡ್ಡ ಕುಸಿತ, ಹೊಲ-ಗದ್ದೆಗಳ ನಾಶದಿಂದ ಉದ್ಯೋಗ ಕಳೆದುಕೊಂಡಿರುವ ಕುಟುಂಬ
ಗಳಿಗೆ ಶೀಘ್ರ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಕ್ರಿಯಾ ಯೋಜನೆ
ಸಿದ್ಧಪಡಿಸಿದೆ.

ಮಕ್ಕಂದೂರು, ಹಟ್ಟಿಹೊಳೆ, ಜೋಡುಪಾಲ, ಹಾಲೇರಿ, ಹೆಬ್ಬೇಟುಗೇರಿ, ಉದಯ ಗಿರಿ, ಮಾದಾಪುರ, ಸುರ್ಲಬಿ, ತಂತಿಪಾಲ,ರಾಟಿ ಮನೆ ಕಾಲೋನಿ, ಮುಕ್ಕೊಡ್ಲು, ಕಾಟಗೇರಿ ಸೇರಿ ಜಿಲ್ಲೆಯ ಅನೇಕ ಪ್ರದೇಶದಲ್ಲಿ ಮಳೆ ಹಾನಿಗೆ ಮನೆ, ಜಮೀನು ಸರ್ವ ನಾಶವಾಗಿದೆ. 51 ನಿರಾಶ್ರಿತರ ಶಿಬಿರದಲ್ಲಿ 6,692 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಬಹುಪಾಲು ನಿರಾಶ್ರಿತರು ಕೂಲಿ ಕೆಲಸ ಮಾಡುವವರಾಗಿದ್ದಾರೆ ಎಂಬ ಮಾಹಿತಿ ಜಿಲ್ಲಾಡಳಿತಕ್ಕೆ ಲಭ್ಯವಾಗಿದೆ. ಗುಡ್ಡ ಕುಸಿತದಿಂದ ಸಾವಿರಾರು ಎಕರೆ ಪ್ರದೇಶಕ್ಕೆ ಹಾನಿಯಾಗಿರುವುದರಿಂದ ಕಾಫಿ ಎಸ್ಟೇಟ್‌ ಸೇರಿ ವಿವಿಧ ತೋಟಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದವರು ಈಗ ನಿರುದ್ಯೋಗಿಗಳಾಗಿ ನಿರಾಶ್ರಿತರ ಕೇಂದ್ರದಲ್ಲಿದ್ದಾರೆ. ಕುಟುಂಬಕ್ಕೆ ಕುಟುಂಬವೇ ಕೆಲಸವಿಲ್ಲದೇ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.

ಯಾರಿಗೂ ಉದ್ಯೋಗ ಇಲ್ಲದಂತೆ ಮಾಡುವುದಿಲ್ಲ. ನಿರಾಶ್ರಿತರ ಕೇಂದ್ರದಿಂದ ತಾತ್ಕಾಲಿಕ ಶೆಡ್‌ಗೆ ಸ್ಥಳಾಂತರಿಸಿದ ನಂತರ
ಮೊದಲ ಆದ್ಯತೆಯಾಗಿ ಉದ್ಯೋಗ ಸೃಷ್ಟಿಸಲಾಗುವುದು. ಈ ಬಗ್ಗೆ ಈಗಾಗಲೇ ಜಿಪಂ ಸಿಇಒ ಜತೆ ಚರ್ಚಿಸಲಾಗಿದೆ. ಕೊಡಗು ಪುನರ್‌ ನಿರ್ಮಾಣದ ಕಾರ್ಯಕ್ರಮದಡಿ ನಿರಾಶ್ರಿತರಿಗೆ ತಾತ್ಕಾಲಿಕ ಶೆಡ್‌ ಒದಗಿಸಿ, ನಂತರ ಶಾಶ್ವತ ಮನೆ ನಿರ್ಮಿಸಿ ಕೊಡುವುದೇ ಮೊದಲ ಆದ್ಯತೆಯಾಗಿದೆ. ಹಾಗೆಯೇ ಎಲ್ಲೆಲ್ಲಿ ಸಂಪರ್ಕ ರಸ್ತೆಗಳು ಕಡಿದು ಹೋಗಿದೆಯೋ ಅದನ್ನೆಲ್ಲ ಸರಿಪಡಿಸುವ ಕಾರ್ಯ ವೇಗವಾಗಿ ನಡೆಸಲಾಗುತ್ತಿದೆ. ಈಗಾಗಲೇ ಹಾನಿಯಾಗಿರುವ ಪ್ರದೇಶದಲ್ಲಿ ಎಷ್ಟು ಕಡೆ ಜನ ವಸತಿ ಸಾಧ್ಯ ಎಂಬುದರ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ ಎಂದರು.

ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಬುಡಕಟ್ಟು ಜನಾಂಗದವರು ಹೆಚ್ಚಿದ್ದಾರೆ. ಮಡಿಕೇರಿ, ಸೋಮವಾರಪೇಟೆ
ಭಾಗದಲ್ಲಿ ಅಷ್ಟೇನೂ ಇಲ್ಲ. ಯಾರ್ಯಾರ ಮನೆಗೆ ಹಾನಿಯಾಗಿದೆಯೋ ಅವರೆಲ್ಲರೂ ನಿರಾಶ್ರಿತರ ಶಿಬಿರದಲ್ಲೇ ಇದ್ದಾರೆ. ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಜಮೀನಿಗೆ ಸಂಬಂಧಿಸಿದ ಪತ್ರಗಳು, ಜಮೀನಿನ ಒಪ್ಪಂದ ಪತ್ರ ಇತ್ಯಾದಿ ಎಲ್ಲವನ್ನು ಕಳೆದುಕೊಂಡಿರುವವರು ಅನೇಕರಿದ್ದಾರೆ. ಅಂತವರಿಗೆ ಜಿಲ್ಲಾಡಳಿತದಿಂದಲೇ ಎಲ್ಲ ದಾಖಲೆ ಪತ್ರ ಸೃಷ್ಟಿಸಿ ಕೊಡುವ ಕೆಲಸವೂ ನಡೆಯುತ್ತಿದೆ. ಕುಟುಂಬದ ಯಜಮಾನನ ಹೆಸರು ಹಾಗೂ ಮನೆಯ ಹೆಸರಿನಆಧಾರದಲ್ಲಿ ದಾಖಲೆಗಳನ್ನು ಗ್ರಾಪಂ ಅಭಿವೃದಿಟಛಿ ಅಧಿಕಾರಿಗಳ ಸಹಕಾರದೊಂದಿಗೆ ಸಿದ್ಧಪಡಿಸಿ ಮಾಡಿಕೊಡುತ್ತಿದ್ದೇವೆ. ಕಾಫಿ ಸೇರಿ ವಿವಿಧ ಬೆಳೆ ಹಾನಿ, ಮೂಲಸೌಕ ರ್ಯದ ಹಾನಿಯ ಪರಿಶೀಲನೆಯ ಕಾರ್ಯವೂ ನಡೆಯುತ್ತಿದೆ ಎಂದರು.

ಜಿಲ್ಲಾಡಳಿತದಿಂದ ಕ್ರಮ: ಶ್ರೀವಿದ್ಯಾ ಉದ್ಯೋಗ ಕಳೆದುಕೊಂಡಿರುವ ನಿರಾಶ್ರಿತರಿಗೆ ಮರು ಉದ್ಯೋಗ ಸೃಷ್ಟಿಸಿಕೊಡುವ ಸಂಬಂಧ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಕ್ರಿಯಾಯೋಜನೆ (ಆ್ಯಕ್ಷನ್‌ ಪ್ಯಾನ್‌) ಸಿದಟಛಿಪಡಿಸಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಬೇಕಾದ ಯೋಜನೆ ತಯಾರಾಗಿದೆ. ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಬಳಸಿಕೊಂಡು ಇನ್ನಷ್ಟು ಉದ್ಯೋಗ ನೀಡುತ್ತೇವೆಂದು ಕೊಡಗು ಜಿಲ್ಲಾಧಿಕಾರಿ
ಪಿ.ಐ.ಶ್ರೀವಿದ್ಯಾ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.