ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ​​​​​​​


Team Udayavani, Aug 26, 2018, 6:05 AM IST

ban26081806medn.jpg

ರಾಯಚೂರು: ಯತಿಕುಲ ತಿಲಕ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವದ ನಿಮಿತ್ತ ಸಪ್ತರಾತ್ರೋತ್ಸವಕ್ಕೆ ಶನಿವಾರ ವಿಧ್ಯುಕ್ತ ಚಾಲನೆ ದೊರಕಿತು.

ಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮೊದಲ ದಿನ ಪ್ರಾರ್ಥನೋತ್ಸವ, ಪ್ರವಚನ, ದಾಸವಾಣಿ, ಋಗ್ವೇದ ನಿತ್ಯನೂತನ ಉಪಕರ್ಮ, ನೃತ್ಯರೂಪಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಬೆಳಗ್ಗೆ ನೈರ್ಮಾಲ್ಯ ವಿಸರ್ಜನೆ, ಉತ್ಸವ ರಾಯರ ಪಾದಪೂಜೆ ಮತ್ತು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ನಡೆಸಲಾಯಿತು. ನಂತರ, ಪೀಠಾಧಿ ಪತಿಗಳು ನೂತನವಾಗಿ ನಿರ್ಮಿಸಿದ ದಶಾವತಾರ ಮಂಟಪ (ವಸಂತ ಶಿಲಾಮಂಟಪ)ದಲ್ಲಿ ಮೂಲ ರಘುಪತಿ ವೇದವಾಸ್ಯರ ಪೂಜೆ ನೆರವೇರಿಸುವ ಮೂಲಕ ಶಿಲಾಮಂಟಪವನ್ನು ರಾಯರ ಸೇವೆಗೆ ಸಮರ್ಪಿಸಿದರು.

ಮಠದ ಪ್ರವಚನ ಮಂದಿರದಲ್ಲಿ ಬೆಂಗಳೂರಿನ ವಿದ್ವಾನ್‌ ಡಿ.ಧನಂಜಯಾಚಾರ್ಯ ಮತ್ತು ಹೈದರಾಬಾದ್‌ನ ವಿದ್ವಾನ್‌ ಬಿ.ಇ.ನಾಗೇಂದ್ರ ಪ್ರಸಾದಾಚಾರ್ಯರಿಂದ ಪ್ರಾತಃ ಸಂಕಲ್ಪ ಗದ್ಯ, ಮಹಾಭಾರತ ತಾತ್ಪರ್ಯ ನಿರ್ಣಯ ಭಾವಸಂಗ್ರಹ ಎಂಬ ವಿಷಯದ ಮೇಲೆ ಪ್ರವಚನ ನಡೆಯಿತು. ಬಳಿಕ ಮಠದ ಪೂಜಾ ಮಂದಿರದಲ್ಲಿ ಹುಬ್ಬಳ್ಳಿಯ ವಿದ್ವಾನ್‌ ಶ್ರೀಹರಿ ಆಚಾರ್ಯ ವಲ್ವೇಕರ್‌ ಅವರಿಂದ ಭಾಗವತ ಸಪ್ತಾಹ ಮತ್ತು ಋಗ್ವೇದ ನಿತ್ಯನೂತನ ಉಪಕರ್ಮ ನಡೆಯಿತು.

ಸಂಜೆ ಮಠದ ಮುಂಭಾಗದ ಆವರಣದಲ್ಲಿ ಪೀಠಾಧಿ ಪತಿಗಳು ಧ್ವಜಾರೋಹಣ ನೆರವೇರಿಸಿದರು. ಬಳಿಕ, ಅಶ್ವಪೂಜೆ, ಗೋಪೂಜೆ, ಲಕ್ಷಿ ¾à ಹಾಗೂ ಧಾನ್ಯ, ತರಕಾರಿ, ಹಣ್ಣು ಪೂಜೆಗಳನ್ನು ನೆರವೇರಿಸಿದರು. ನಂತರ, ಪ್ರವಚನ ಮಂಟಪದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಪೂಜ್ಯರು ಅನುಗ್ರಹ ಸಂದೇಶ ನೀಡಿದರು.

ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಯಾವುದೇ ಒಂದು ಪ್ರಾಂತ, ಸಮುದಾಯಕ್ಕೆ ಸೀಮಿತವಾಗಿಲ್ಲ. ರಾಯರು ಇಡೀ ವಿಶ್ವಕ್ಕೆ ಗುರುಗಳಿದ್ದಂತೆ. ಇಂತಹ ಅಪಾರ ಮಹಿಮೆಯುಳ್ಳ ಗುರುಗಳ ಆರಾಧನೆಯನ್ನು ಇಡೀ ವಿಶ್ವವೇ ದೊಡ್ಡ ಉತ್ಸವವಾಗಿ ಆಚರಿಸುತ್ತಿದೆ. ಮಠ ಸೇರಿದಂತೆ ದೇಶ, ವಿದೇಶಗಳಲ್ಲಿರುವ ರಾಯರ ಶಾಖಾ ಮಠಗಳು, ಪ್ರಾರ್ಥನಾ ಮಂದಿರಗಳಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಆರಾಧನೆಯನ್ನು ಆಚರಿಸುತ್ತಿದ್ದಾರೆ ಎಂದರು.

ಬಳಿಕ, ನಡೆದ ಪ್ರಾರ್ಥನೋತ್ಸವದಲ್ಲಿ ಮೀನಾಕ್ಷಿ ಸೋಮಸುಂದರಂ ಅವರಿಂದ ವೀಣಾವಾದನ, ಚೆನ್ನೈನ ಸಾಯಿ ಗಣೇಶ ಕಲಾಲಯ ಅವರಿಂದ ಭರತನಾಟ್ಯ, ಟಿಟಿಡಿ ತಿರುಪತಿಯ ಅನ್ನಮಾಚಾರ್ಯ ಪ್ರಾಜೆಕ್ಟ್‌ನ ವಿದ್ವಾನ್‌ ಸರಸ್ವತಿ ಪ್ರಸಾದ ಅವರಿಂದ ಅನ್ನಮಾಚಾರ್ಯರ ಕೀರ್ತನೆ ನಡೆಯಿತು.

ರಜತ ಬಾಗಿಲು ಲೋಕಾರ್ಪಣೆ
ಮಠದ ಮುಖ್ಯದ್ವಾರದ ಬೃಹತ್‌ ಬಾಗಿಲುಗಳಿಗೆ ಒಂದು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿದ ರಜತದ ಹೊದಿಕೆಗಳನ್ನು ಆರಾಧನೆಯ ಮೊದಲ ದಿನ ಮುಕ್ತಗೊಳಿಸಲಾಯಿತು. ಸುಬುಧೇಂದ್ರ ತೀರ್ಥರು ಪೂಜೆ ಸಲ್ಲಿಸುವ ಮೂಲಕ ದ್ವಾರಗಳನ್ನು ಲೋಕಾರ್ಪಣೆ ಮಾಡಿದರು. 350 ಕೆಜಿ ರಜತದಿಂದ ಹೊದಿಕೆ ಮಾಡಲಾಗಿದೆ. ಈ ಬಾಗಿಲುಗಳನ್ನು ಬೆಂಗಳೂರು ಮೂಲದ ಎಚ್‌.ಡಿ.ರಂಗನಗೌಡ ಎನ್ನುವ ಭಕ್ತರು ಮಾಡಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.