ಸನ್ನಡತೆ ಕೈದಿಗಳಿಗೆ ಸಾಮೂಹಿಕ ಕ್ಷಮಾದಾನ


Team Udayavani, Aug 26, 2018, 6:00 AM IST

prison.jpg

ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮಶತಮಾನೋತ್ಸವದ ನಿಮಿತ್ತ ದೇಶದ ಹಲವು ಜೈಲುಗಳಲ್ಲಿನ ಕೈದಿಗಳಿಗೆ ವಿಮುಕ್ತಿ ಸಿಗಲಿದೆಯೇ? ಕೇಂದ್ರ ಗೃಹ ಸಚಿವಾಲಯದ ಮೂಲಗಳ ಪ್ರಕಾರ ಹೌದು.

ಅಕೋrಬರ್‌ 2ರ ಗಾಂಧಿ ಜಯಂತಿ ಸೇರಿ ಒಟ್ಟು ಮೂರು ಹಂತದಲ್ಲಿ ದೇಶದ ನಾನಾ ರಾಜ್ಯದ ಕೇಂದ್ರ ಕಾರಾಗೃಹಗಳಲ್ಲಿರುವ 55 ರಿಂದ 60 ವರ್ಷ ಮೇಲ್ಪಟ್ಟ ಪುರುಷ-ಮಹಿಳಾ ಕೈದಿಗಳನ್ನು ಸಾಮೂಹಿಕ ಕ್ಷಮಾದಾನ ಯೋಜನೆಯಡಿ ಜೈಲು ವಾಸದಿಂದ ವಿಮುಕ್ತಿಗೊಳಿಸಲು ಗೃಹ ಸಚಿವಾಲಯ ನಿರ್ಧರಿಸಿದೆ.

ಕೆಲವೊಂದು ಆಯ್ದ ಪ್ರಕರಣಗಳಲ್ಲಿ ಬಂಧಿತರಾದ ಕೈದಿಗಳಿಗೆ 2018ರ ಗಾಂಧಿ ಜಯಂತಿ ಮತ್ತು 2019 ಏಪ್ರಿಲ್‌ 10 ಚಂಪಣ ಸತ್ಯಾಗ್ರಹ ದಿನ ಹಾಗೂ ಅ.2 ಗಾಂಧಿ ಜಯಂತಿ, ಈ ಮೂರು ವಿಶೇಷ ದಿನಗಳಂದು ಮಾತ್ರ ಬಿಡುಗಡೆ ಭಾಗ್ಯ ದೊರೆಯಲಿದೆ. ಈ ನಿರ್ಧಾರದಿಂದ ದೇಶಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಕೈದಿಗಳು ಜೈಲಿನಿಂದ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ.

ಕಾರಾಗೃಹಗಳಿಗೆ ಆದೇಶ ಪತ್ರ:
2018, ಜುಲೈ 18ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದು, ಈಗಾಗಲೇ ರಾಜ್ಯದ ಎಲ್ಲ ಕಾರಾಗೃಹಗಳಿಗೂ ಆದೇಶದ ಪ್ರತಿ ಕಳುಹಿಸಿಕೊಡಲಾಗಿದೆ. ಕೈದಿಗಳ ಬಿಡುಗಡೆಗೂ ಕೆಲವೊಂದು ನಿಯಮಾವಳಿಗಳನ್ನು ವಿಧಿಸಿದ್ದು, ಆದೇಶ ಪ್ರತಿಯಲ್ಲಿ ಇವುಗಳನ್ನು ಉಲ್ಲೇಖೀಸಲಾಗಿದೆ. ಗಂಭೀರ ಸ್ವರೂಪದ ಪ್ರಕರಣಗಳಡಿ ಶಿಕ್ಷೆ ಅನುಭವಿಸುತ್ತಿರುವವರನ್ನು ಹೊರತುಪಡಿಸಿ, ಸಾಮಾನ್ಯ ಸಜೆ ಅನುಭವಿಸುತ್ತಿರುವವರನ್ನು ಮಾತ್ರ ಕ್ಷಮಾದಾನ ಯೋಜನೆಯಡಿ ಬಿಡುಗಡೆ ಮಾಡಬೇಕೆಂದು ಈಗಾಗಲೇ ಆಯಾ ರಾಜ್ಯದ ಕೇಂದ್ರ ಕಾರಾಗೃಹಗಳ ಅಧೀಕ್ಷಕರಿಗೆ ಸೂಚನೆ ನೀಡಲಾಗಿದೆ.

ಕೈದಿಗಳ ಸಂಖ್ಯೆ ಸ್ಪಷ್ಟವಿಲ್ಲ:
ಸಾಮೂಹಿಕ ಕ್ಷಮಾದಾನ ಯೋಜನೆಯಡಿ ಈ ಕಾರಾಗೃಹದ ಎಷ್ಟು ಮಂದಿ ಕೈದಿಗಳು ಬಿಡುಗಡೆ ಆಗುತ್ತಾರೆ?. 55 ರಿಂದ 60 ವರ್ಷ ಮೇಲ್ಪಟ್ಟ ಮಹಿಳಾ ಮತ್ತು ಪುರುಷ ಕೈದಿಗಳು ಎಷ್ಟಿದ್ದಾರೆ? ಅವರೆಲ್ಲ ಯಾವ್ಯಾವ ಪ್ರಕರಣಗಳಲ್ಲಿ ಬಂಧಿಯಾಗಿದ್ದಾರೆ? ಸಾಮಾನ್ಯ ಸಜೆ ಅನುಭವಿಸುತ್ತಿರುವ ಕೈದಿಗಳೆಷ್ಟು? ಎಂಬುದು ಇನ್ನು ಸ್ಪಷ್ಟವಾಗಿಲ್ಲವಾದರೂ, ಸನ್ನಡತೆ ಆಧಾರದ ಮೇಲೆ ದೇಶಾದ್ಯಂತ ಇರುವ ಎಲ್ಲ ಜೈಲುಗಳಲ್ಲಿ ಸಾಮಾನ್ಯ ಸಜೆ ಅನುಭವಿಸುತ್ತಿರುವ ಕೆಲ ಕೈದಿಗಳಿಗೆ ಸಾಮೂಹಿಕವಾಗಿ ಕ್ಷಮಾದಾನ ದೊರೆಯುವ ಸಾಧ್ಯತೆಯಿದೆ.

ಇವರಿಗಿಲ್ಲ ಕ್ಷಮಾದಾನ:
ವರದಕ್ಷಿಣೆ ಕಿರುಕುಳದಿಂದ ಸಾವು, ಮಹಿಳೆಯರ, ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ, ಮಾನವ ಕಳ್ಳಸಾಗಣೆ, ಭಯೋತ್ಪಾದಕ ಚಟುವಟಿಕೆ, ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳ ಕಾಯ್ದೆ ಹಾಗೂ ಮನಿ ಲಾಂಡರಿಂಗ್‌ ಕಾಯ್ದೆ ಉಲ್ಲಂಘನೆ, ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಬಂಧಿತರಾಗಿರುವ ಕೈದಿಗಳನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಮೂರು ಹಂತದಲ್ಲಿ ಬಿಡುಗಡೆ:
ಮೂರು ಹಂತಗಳಲ್ಲಿ ಕೈದಿಗಳನ್ನು ಬಿಡುಗಡೆಗೊಳಿಸುವ ನಿರ್ಧಾರ ಕೈಗೊಂಡಿದ್ದು, 2018ರ ಅ.2ರಂದು ಗಾಂಧೀಜಿಯವರ 150ನೇ ಜಯಂತಿ ನಿಮಿತ್ತ ಮೊದಲನೇ ಹಂತದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗುವುದು. ಬಳಿಕ 2019ರ ಏಪ್ರಿಲ್‌ 10ರ ಚಂಪರಣ ಸತ್ಯಾಗ್ರಹದಂದು ಎರಡನೇ ಹಂತದಲ್ಲಿ ಕೈದಿಗಳನ್ನು ಬಿಡುಗಡೆ ಗೊಳಿಸಲಾಗುವುದು. ಹಾಗೂ 2019ರ ಅಕೋrಬರ್‌ 2 ಪುನಃ ಗಾಂಧಿ ಜಯಂತಿಯಂದು ಮೂರನೇ ಹಂತದಲ್ಲಿ ಕೈದಿಗಳನ್ನು ಬಿಡುಗಡೆಗೊಳಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿಗಳಿಗೆ ಯಾವ ಹಂತದಲ್ಲಿ ಬಿಡುಗಡೆ ಭಾಗ್ಯ ದೊರೆಯುತ್ತದೆ ಎಂಬುದು ಕಾದು ನೋಡಬೇಕಿದೆ. ಆದೇಶದ ಪ್ರತಿಯಲ್ಲಿ ಕೆಲ ನಿಯಮಗಳು ಗೊಂದಲದಿಂದ ಕೂಡಿದ್ದು, ಅವು ಸ್ಪಷ್ಟವಾಗಬೇಕಾಗಿದೆ. ಈಗಾಗಲೇ ಕಾರಾಗೃಹದ ಅಧೀಕ್ಷಕರು ಬಿಡುಗಡೆಗೊಳಿಸಬೇಕಾದ ಕೈದಿಗಳ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.