ಸಾಲಮನ್ನಾ ಋಣಭಾರ ಪತ್ರ ತೋರಿಸಿದ್ರೆ ರಾಜಕೀಯ ನಿವೃತ್ತಿ
Team Udayavani, Aug 26, 2018, 10:16 AM IST
ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಆದೇಶ ಹೊರಡಿಸಿಲ್ಲ. ಲೀಡ್ ಬ್ಯಾಂಕ್ ಸೇರಿ ಆರ್ಬಿಐ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದನ್ನು ತೋರಿಸಿದ್ರೆ, ನಾನು ಈ ಕ್ಷಣವೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಯಾವುದೇ ರೈತರಿಗೆ ಸಾಲದ ಋಣಭಾರ ಪತ್ರ ತಲುಪಿಲ್ಲ. ಎಲ್ಲಿಯಾದರೂ, ಒಬ್ಬ ರೈತನನ್ನಾದರೂ ತೋರಿಸಲಿ, ನಾನು ಕೂಡಲೇ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ಹೊಂದುತ್ತೇನೆಂದು ಸವಾಲು ಹಾಕಿದರು.
ರಾಜ್ಯದಲ್ಲಿ ಸರ್ಕಾರ ಇದೆಯಾ ಎಂದು ಜನರೇ ಮಾತನಾಡುತ್ತಿದ್ದಾರೆ. ಶಾಸಕರ ನಿಧಿ ಇನ್ನೂ ಬಿಡುಗಡೆಯಾಗಿಲ್ಲ. ನೆರೆ ಸಂತ್ರಸ್ತರಿಗೆ ರೇವಣ್ಣ ಅವರು ಬಿಸ್ಕೆಟ್ನ್ನು ನಾಯಿಗೆ ಹಾಕಿದಂತೆ ಎಸೆದಿದ್ದಾರೆ. ದೇಶದ ಮಾಜಿ ಪ್ರಧಾನಿ ಮಕ್ಕಳಿಗೆ ಸಂಸ್ಕಾರವೇ ಗೊತ್ತಿಲ್ಲ. ಕೊಡಗು ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯನ್ನು ಇನ್ನೂ ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ