ಮಾಸಾಂತ್ಯಕ್ಕೆ ಬರ ಜಿಲ್ಲೆಗಳ ಪಟ್ಟಿ ಘೋಷಣೆ: ಶಿವಶಂಕರರೆಡ್ಡಿ
Team Udayavani, Aug 26, 2018, 10:23 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳ ಪಟ್ಟಿಯನ್ನು ಈ ಮಾಸಾಂತ್ಯಕ್ಕೆ ಘೋಷಿಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ರಾಯಚೂರು, ಕೊಪ್ಪಳ್ಳ, ದಾವಣಗೆರೆ ಸೇರಿ ಸುಮಾರು 13 ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆ ಕ್ಷೀಣಿಸಿ, ಬಿತ್ತನೆ ಪ್ರಮಾಣ ಸಾಕಷ್ಟು ಕುಸಿದಿದೆ. ಕೇಂದ್ರ ಸರ್ಕಾರದ ಬರ ಘೋಷಣೆಯ ಮಾನದಂಡಗಳ ಆಧಾರದಲ್ಲಿ ರಾಜ್ಯದ ಸುಮಾರು 13 ಜಿಲ್ಲೆಗಳಲ್ಲಿನ 80 ತಾಲೂಕುಗಳು ಈ ವರ್ಷ ಬರದ ಪಟ್ಟಿಯಲ್ಲಿವೆ. ಈ ತಿಂಗಳೊಳಗೆ ರಾಜ್ಯದ ಬರ ತಾಲೂಕುಗಳನ್ನು ಘೋಷಿಸಲಾಗುವುದು. ಬಳಿಕ, ಕೇಂದ್ರಕ್ಕೆ ಪಟ್ಟಿ ರವಾನಿಸಿ, ಪರಿಹಾರ ಕೋರಲಾಗುವುದು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ನೆರವನ್ನು ಸೇರಿಸಿ ರೈತರಿಗೆ ಬರ ಪರಿಹಾರ ವಿತರಣೆ ಮಾಡಲಿದೆ ಎಂದರು.
ರಾಜ್ಯದಲ್ಲಿ ರೈತರು ಬೆಳೆಯುವ ಎಲ್ಲಾ ರೀತಿಯ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದರ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ