ನೆರೆ ಪೀಡಿತ ಪ್ರದೇಶದಲ್ಲಿ ಪ್ರವಾಸಕ್ಕೆ ಅವಕಾಶವಿಲ್ಲ
Team Udayavani, Aug 27, 2018, 6:35 AM IST
ಮಡಿಕೇರಿ: ಪ್ರವಾಹ, ಭೂ ಕುಸಿತದಿಂದಾಗಿ ಕೊಡಗು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾನಿಗೊಳಗಾಗಿದ್ದು, ಅಪಾಯದ ಮಟ್ಟದಲ್ಲಿವೆ. ಹೀಗಾಗಿ, ಜಿಲ್ಲೆಯಲ್ಲಿನ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಇತರ ಖಾಸಗಿ ವಸತಿ ಗೃಹಗಳಲ್ಲಿ ಆಗಸ್ಟ್ 31ರವರೆಗೆ ಪ್ರವಾಸಿಗರ ವಾಸ್ತವ್ಯವನ್ನು ರದ್ದುಪಡಿಸಲಾಗಿದೆ.
ಅಲ್ಲದೆ, ಪ್ರವಾಹಪೀಡಿತ ಪ್ರದೇಶಗಳ ಪ್ರವಾಸಕ್ಕೆ ನಿಷೇಧ ಹೇರಲಾಗಿದೆ. ಆದರೆ,ಜಿಲ್ಲೆಯಲ್ಲಿನ ಕೆಲವು ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಇತರ ಖಾಸಗಿ ವಸತಿ ಗೃಹಗಳ ಮಾಲೀಕರು ಆದೇಶವನ್ನು ಉಲ್ಲಂಘಿಸಿ,ಪ್ರವಾಸಿಗರಿಗೆ ವಾಸ್ತವ್ಯ ನೀಡುತ್ತಿರುವುದು ಹಾಗೂ ವಾಸ್ತವ್ಯ ಹೂಡಿರುವ ಪ್ರವಾಸಿಗರನ್ನು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಇತರ ಪ್ರವಾಸಿ ತಾಣಗಳಿಗೆ ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಆದೇಶ ಉಲ್ಲಂ ಸಿ, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ