ಕರಾವಳಿ, ಮಲೆನಾಡಿನಲ್ಲಿ ವ್ಯಾಪಕ ಮಳೆ ಸಾಧ್ಯತೆ
Team Udayavani, Aug 27, 2018, 6:55 AM IST
ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದ್ದು, ಕರಾವಳಿ ಮತ್ತು ಮಲೆನಾಡಿನ ಆಯ್ದ ಭಾಗಗಳಲ್ಲಿ ಮಾತ್ರ ಕೆಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾಯವ್ಯ ಮತ್ತು ಉತ್ತರದ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಆದರೆ, ಇದರ ಪ್ರಭಾವ ರಾಜ್ಯದ ಮೇಲೆ ಅಷ್ಟಾಗಿ ಇರುವುದಿಲ್ಲ. ಇದು ಅಲ್ಪಪ್ರಮಾಣದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಸುವ ನಿರೀಕ್ಷೆಯಿದೆ. ಮುಂದಿನ 2-3 ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದರು.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನ ಆಯ್ದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಶೇ.40 ಜಿಲ್ಲೆಗಳಲ್ಲಿ ಮಳೆ ಕೊರತೆ: ದಕ್ಷಿಣ ಭಾರತದಲ್ಲಿ ಹಲವೆಡೆ ಅತಿವೃಷ್ಟಿಯಿಂದ ಪ್ರವಾಹ ಉಂಟಾಗಿದ್ದರೆ, ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿದಂತೆ ಶೇ.40ರಷ್ಟು ಜಿಲ್ಲೆಗಳಲ್ಲಿ ಮಳೆಯೇ ಸರಿಯಾಗಿ ಸುರಿದಿಲ್ಲ! ಈ ಮುಂಗಾರು ಋತುವಿನಲ್ಲಿ ದಕ್ಷಿಣ ಭಾರತದ 125 ಜಿಲ್ಲೆಗಳ ಪೈಕಿ 54 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ. ಇನ್ನೆರಡು ಜಿಲ್ಲೆಗಳಲ್ಲಿ ಭಾರೀ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡು ಅತ್ಯಂತ ಹೆಚ್ಚು ಮಳೆ ಕೊರತೆ ಅನುಭವಿಸಿದ ರಾಜ್ಯವಾಗಿದೆ. ಇದರ 32 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ ಕಡಿಮೆ ಮಳೆ ಬಿದ್ದಿದೆ. ಕರ್ನಾಟಕದ 30ರಲ್ಲಿ 14 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದ್ದರೆ, ಎರಡು ಜಿಲ್ಲೆಗಳಲ್ಲಿ ತೀರಾ ಕೊರತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್