ಮಡಿಕೇರಿ ಮಳೆ ಸಾರ್ವಕಾಲಿಕ ದಾಖಲೆ


Team Udayavani, Aug 27, 2018, 6:00 AM IST

record-all-time.jpg

ಬೆಂಗಳೂರು: ಪ್ರವಾಹದ ಸುಳಿಗೆ ಸಿಲುಕಿರುವ ಕೊಡಗು ಜಿಲ್ಲೆಯ ಮಂಜಿನ ನಗರಿ ಮಡಿಕೇರಿಯಲ್ಲಿ ಈ ಬಾರಿ ಇಡೀ ಮುಂಗಾರು ಹಂಗಾಮಿನಲ್ಲಿ ಸುರಿಯಬೇಕಾದ ಪ್ರಮಾಣಕ್ಕಿಂತ ಹೆಚ್ಚು ಮಳೆ ಕೇವಲ 25 ದಿನಗಳಲ್ಲಿ ಸುರಿದಿದೆ. ಅಲ್ಪಾವಧಿಯಲ್ಲಿ ಸುರಿದ ಈ ತೀವ್ರ ಮಳೆಯು ಊರಿಗೆ ಊರು ಕೊಚ್ಚಿಹೋಗುವಂತೆ ಮಾಡಿತು.ಈಗಾಗಲೇ ಮಡಿಕೇರಿಯಲ್ಲಿ ಸುರಿದ ಮಳೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಇದಲ್ಲದೆ, ಇಡೀ ಮುಂಗಾರಿನ ಮಳೆ ಕೇವಲ 25 ದಿನಗಳಲ್ಲೇ ಬಿದ್ದಿದೆ. 

ಮಡಿಕೇರಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುರಿಯಬೇಕಾಗಿದ್ದ ವಾಡಿಕೆ ಮಳೆ 2,007 ಮಿ.ಮೀ. ಆದರೆ, ಆಗಸ್ಟ್‌ನಲ್ಲೇ ಬಿದ್ದ ಮಳೆ 2,060 ಮಿ.ಮೀ. ಇದು ಹೆಚ್ಚು-ಕಡಿಮೆ ಕೊಡಗಿನ ವರ್ಷದ ಮಳೆಗೆ ಸರಿಸಮವಾಗಿದೆ ಎಂದೂ ಹೇಳಲಾಗುತ್ತಿದೆ.

ಇನ್ನು ಮಡಿಕೇರಿಯಲ್ಲಿ ವಾರ್ಷಿಕ ವಾಡಿಕೆ ಮಳೆ 3,320 ಮಿ.ಮೀ. ಈಗಾಗಲೇ 4,409 ಮಿ.ಮೀ. ಮಳೆ ಆ ಭಾಗದಲ್ಲಿ ಬಿದ್ದಿದೆ. ಜೂನ್‌ 1ರಿಂದ ಆಗಸ್ಟ್‌ 24ರವರೆಗಿನ ವಾಡಿಕೆ ಮಳೆ 2,007 ಮಿ.ಮೀ. ಅಂದರೆ ದುಪ್ಪಟ್ಟು ಮಳೆಯಾಗಿದೆ. ಈ ಮಧ್ಯೆ ಆಗಸ್ಟ್‌ 17ರಂದು ಒಂದೇ ದಿನದಲ್ಲಿ 300 ಮಿ.ಮೀ. ಮಳೆ ಸುರಿದಿದ್ದು, ಇದು ಸಾರ್ವಕಾಲಿಕ ದಾಖಲೆ. ಈ ಅಂಕಿ-ಸಂಖ್ಯೆಗಳು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮಳೆಯ ರಭಸಕ್ಕೆ ಜಿಲ್ಲೆ ಪ್ರವಾಹಕ್ಕೆ ತುತ್ತಾಯಿತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.

ಇನ್ನು 2,060 ಮಿ.ಮೀ.ನಲ್ಲಿ ಆಗಸ್ಟ್‌ 10ರಿಂದ 20ರ ಅವಧಿಯಲ್ಲೇ 867 ಮಿ.ಮೀ. ಮಳೆಯಾಗಿದ್ದು, ಈ ಹತ್ತು ದಿನಗಳ ವಾಡಿಕೆ ಮಳೆ 208.7 ಮಿ.ಮೀ. ಅದೇ ರೀತಿ, ಜೂನ್‌-ಆಗಸ್ಟ್‌ ಅಂತ್ಯದವರೆಗೆ ಕೊಡಗಿನ ವಾಡಿಕೆ ಮಳೆ 1,909.5 ಮಿ.ಮೀ. ಆದರೆ, ಬಿದ್ದ ಮಳೆ 3,229.3 ಮಿ.ಮೀ. ಈ ಮಧ್ಯೆ ಹಾರಂಗಿ ಜಲಾಶಯದ ನೀರು ಕೂಡ ಕೊಡಗು ಜಿಲ್ಲೆಗೆ ಹರಿಯಿತು. ಇವೆರಡರಿಂದ ಕೊಡಗು ಮುಳುಗಡೆಯಾಯಿತು ಎನ್ನುತ್ತಾರೆ ಹವಾಮಾನ ತಜ್ಞರು.

“ಸಾಮಾನ್ಯವಾಗಿ ವಾಯುಭಾರ ಕುಸಿತ ಮತ್ತಿತರ ಬದಲಾವಣೆಗಳಾದಾಗ್ಯೂ ಈ ಪ್ರಮಾಣದಲ್ಲಿ ಮಳೆ ಆಗುವುದಿಲ್ಲ. ಆದರೆ, ಕೊಡಗು ಜಿಲ್ಲೆಯಲ್ಲಿ ಈ ಪರಿಯ ಮಳೆ ನಮಗೂ ಅಚ್ಚರಿ ಮೂಡಿಸಿದೆ. ಅಲ್ಲಿ ಸಾಮಾನ್ಯವಾದ ಬದಲಾವಣೆಗಳ ನಡುವೆ ದಾಖಲೆ ಮಳೆಯಾಗಿದೆ. ಕಾರಣಗಳು ನಿಖರವಾಗಿ ಗೊತ್ತಾಗುತ್ತಿಲ್ಲ. ಈ ಬಗ್ಗೆ ಅಧ್ಯಯನ ಮಾಡುವ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಚಿಂತನೆಯೂ ನಡೆದಿದೆ’ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌. ಪಾಟೀಲ “ಉದಯವಾಣಿ’ಗೆ ತಿಳಿಸಿದರು.

ಮಳೆಯ ತೀವ್ರತೆಯೇ ಪ್ರವಾಹ ಮತ್ತು ಮಣ್ಣುಕುಸಿತಕ್ಕೆ ಮುಖ್ಯಕಾರಣ. ಮಳೆಯ ನೀರಿನ ಹರಿವನ್ನು ಹಸಿರು ಹೊದಿಕೆ ತಕ್ಕಮಟ್ಟಿಗೆ ತಡೆಯೊಡ್ಡುತ್ತದೆ. ಆದರೆ, ಮರಗಳು ನೆಲಕಚ್ಚಿದಾಗ, ಬೇರುಸಹಿತ ಬಿದ್ದ ಮರದ ಜಾಗದಲ್ಲಿ ನೀರು ತುಂಬಿಕೊಳ್ಳುತ್ತದೆ. ಹೀಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಭೂಮಿಯೊಳಗೆ ಸೇರಿತು. ಜತೆಗೆ ಮೇಲಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇತ್ತು. ಪರಿಣಾಮ ಮಣ್ಣುಕುಸಿತ ಉಂಟಾಯಿತು ಎಂದು ಕೊಡಗು ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಕೆ.ಜೆ. ಸೌಮ್ಯ ತಿಳಿಸುತ್ತಾರೆ.

ಮಡಿಕೇರಿಯಲ್ಲಾದ ಮಳೆಯ ವಿವರ (ಮಿ.ಮೀ.ಗಳಲ್ಲಿ).
ವರ್ಷ    ಮಳೆ ಪ್ರಮಾಣ
2008    800.8
2009    437.8
2010    628
2011    866.6
2012    732.7
2013    792.6
2014    704.2
2015    550
2016    665.6
2017    910
2018    2,060 (ಆಗಸ್ಟ್‌ 25ರವರೆಗೆ)
ಈ ಹಿಂದೆ 1931ರ ಆಗಸ್ಟ್‌ನಲ್ಲಿ 1,559.3 ಮಿ.ಮೀ. ಮಳೆ ಬಿದ್ದಿತ್ತು. ಇದು ಸಾರ್ವಕಾಲಿಕ ದಾಖಲೆ ಆಗಿತ್ತು.

ಇಡೀ ರಾಜ್ಯದಲ್ಲಿ ಈ ಬಾರಿ ವಾಡಿಕೆ ಮಳೆಯಾಗಿದೆ. ಆದರೆ, ಉತ್ತರ ಒಳನಾಡಿನಲ್ಲಿ ಮಾತ್ರ ಮಳೆ ಕೊರತೆ ಉಂಟಾಗಿದೆ. ಈ ಸಲ ಮುಂಗಾರಿನಲ್ಲಿ ಈವರೆಗೆ ಸುರಿದ ಮಳೆ ವಿವರ ಹೀಗಿದೆ.
ಪ್ರದೇಶ    ವಾಡಿಕೆ ಮಳೆ    ಬಿದ್ದ ಮಳೆ
ಕರಾವಳಿ    2,671.7    2,853.8
ದಕ್ಷಿಣ ಒಳನಾಡು    492.7    548.1
ಉತ್ತರ ಒಳನಾಡು    33.8    262.7
ಒಟ್ಟಾರೆ     639.6    654.3

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.