ಮುಳುಗೆದ್ದ ಕೊಡಗಲ್ಲಿ ಮೊದಲ ಶುಭ ಸಮಾರಂಭ


Team Udayavani, Aug 27, 2018, 6:00 AM IST

marriage5.jpg

ಮಡಿಕೇರಿ: ದಾಖಲೆ ಮಳೆಯಿಂದ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ನೊಂದಿದ್ದ ಕೊಡಗಿನಲ್ಲಿ ಹತ್ತು ದಿನದ ನಂತರ ಮೊದಲ ಶುಭ ಸಮಾರಂಭಕ್ಕೆ ಭಾನುವಾರ ಸಾಕ್ಷಿಯಾಯಿತು.

ಮನೆ, ಜಮೀನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿದ್ದ  ಯುವತಿ ಭಾನುವಾರ ಹಸೆಮಣೆ ಏರುವಾಗ ಇಡೀ ಶಿಬಿರವೇ ಸಂತಸಗೊಂಡಿತು. ಸೇವಾ ಭಾರತಿ ಮತ್ತು ಮಡಿಕೇರಿ ಲಯನ್ಸ್‌ ಕ್ಲಬ್‌ ನೆರವಿನೊಂದಿಗೆ ಮಕ್ಕಂದೂರು ನಿವಾಸಿ ಬೇಬಿಯವರ ಮಗಳು ಆರ್‌. ಮಂಜುಳಾ ಹಾಗೂ ಕೇರಳದ ಕಣ್ಣೂರಿನ ರಜೀಶ್‌ ಎಂಬುವರನ್ನು ವರಿಸಿದರು.

ಕಳೆದ ವರ್ಷವೇ  ಮದುವೆ ನಿಶ್ಚಿತಾರ್ಥವಾಗಿತ್ತು. ಆ.26ರಂದು ಮಕ್ಕಂದೂರಿನ ವಿ.ಎಸ್‌.ಎಸ್‌.ಎನ್‌. ಹಾಲ್‌ನಲ್ಲಿ ಮದುವೆ ನಿರ್ಧರಿಸಿದ್ದರು. ಆಷಾಢ ತಿಂಗಳು ಬರುವ ಮೊದಲೇ ಎಲ್ಲರಿಗೂ ಮದುವೆ ಆಮಂತ್ರಣ ಪತ್ರಿಕೆ ವಿತರಿಸಿದ್ದರು.

ಆದರೆ, ದಿಢೀರ್‌ ಎದುರಾದ ಅನಾಹುತದಿಂದ ಬೇಬಿಯರ ಮನೆ ಸಂಪೂರ್ಣ ನಾಶವಾಗಿ ಇಡೀ ಕುಟುಂಬ ನಿರಾಶ್ರಿತರ ಶಿಬಿರದಲ್ಲಿದೆ. ಇದರಿಂದಾಗಿ ಮದುವೆ ಆಗುತ್ತದೆಯೋ  ಇಲ್ಲವೋ ಎಂಬ ಆತಂಕದಲ್ಲಿದ್ದಾಗ  ಸೇವಾ ಭಾರತಿ ಮತ್ತು ಮಡಿಕೇರಿ ಲಯನ್ಸ್‌ ಕ್ಲಬ್‌ ಮುಂದಾಗಿ ನಿಗದಿತ ದಿನದಂದಲೇ ಮದುವೆ ಮಾಡಿಸಿದೆ.

ಪೂರ್ವ ನಿಗದಿಯ ದಿನದಂದೇ ಮದುವೆ ನಡೆಸಲು ನಿರ್ಧರಿಸಿದ ಸೇವಾ ಭಾರತಿ ಮತ್ತು ಲಯನ್ಸ್‌ ಕ್ಲಬ್‌ನ  ಸದಸ್ಯರು, ಭಾನುವಾರ ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋತ್ತರವಾಗಿ ಮದುವೆ ಕಾರ್ಯ ನಡೆಸಿದರು.

ಮದುವೆಗಾಗಿ ದೇವಸ್ಥಾನ ಮತ್ತು ನಿರಾಶ್ರಿತರ ಶಿಬಿರದ ಮುಂಭಾಗವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಕೇರಳದ ಕಣ್ಣೂರಿನ ರಜೀಶ್‌ ಭಾನುವಾರ ಬೆಳಗ್ಗೆಯೇ ಕುಟುಂಬ ಸಮೇತರಾಗಿ ಮಡಿಕೇರಿಗೆ ಬಂದಿದ್ದರು. ವಧು ಮತ್ತು ವರನಿಗೆ ಶಿಬಿರದಲ್ಲೇ ಮದುವೆ ಅಲಂಕಾರ ಮಾಡಲಾಗಿತ್ತು. ವಧುವಿಗೆ ಶನಿವಾರ ರಾತ್ರಿ ಶಿಬಿರದ ಸದಸ್ಯರೇ ಸುಂದರವಾಗಿ ಮೆಹಂದಿ ಹಚ್ಚಿದ್ದರು.

ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಶಿಬಿರದಿಂದ ಕಾಲ್ನಡಿಗೆಯಲ್ಲಿ ಹೊರಟ ಮದುವೆ ದಿಬ್ಬಣ, 10.30 ಸುಮಾರಿಗೆ ದೇವಸ್ಥಾನ ತಲುಪಿತ್ತು. ಓಂಕಾರೇಶ್ವರ ದೇವಸ್ಥಾನದಲ್ಲಿ ರಜೀಶ್‌, ಮಂಜುಳಾ ಅವರಿಗೆ ಮಂಗಳ ಸೂತ್ರ ಕಟ್ಟಿದರು.

ಅಲ್ಲಿಂದ ದಿಬ್ಬಣ ನೇರವಾಗಿ ಓಂಕಾರ ಸದನದ ನಿರಾಶ್ರಿತರ ಶಿಬಿರಕ್ಕೆ ಹೊರಟಿತು. ಮದುವೆ ನಿಮಿತ್ತ ನಿರಾಶ್ರಿತರಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ನಾಲ್ಕು ಗಂಟೆ ಸುಮಾರಿಗೆ ವಧು ವರನ ಕುಟುಂಬದ ಜತೆ  ಕಣ್ಣೂರಿಗೆ ಹೊರಟರು.

ನಿರಂತರ ಸುರಿದ ಭಾರಿ ಮಳೆಗೆ ಬೇಬಿಯರ ಮನೆ ಕೊಚ್ಚಿಹೋಗಿ ಇಡೀ ಕುಟುಂಬ ನಿರಾಶ್ರಿತರ ಶಿಬಿರ ಸೇರಿದೆ. ಯಾವುದೇ ಕಾರಣಕ್ಕೂ ಶುಭಕಾರ್ಯ ನಿಲ್ಲಬಾರದು ಎಂಬ ಉದ್ದೇಶದಿಂದ ಸೇವಾ ಭಾರತಿ ಹಾಗೂ ಲಯನ್ಸ್‌ ಕ್ಲಬ್‌ವತಿಯಿಂದ ಪೂರ್ವ ನಿಗದಿಯಾದ ದಿನಾಂಕದಂದೇ(ಆ.26) ಮದುವೆ ನಡೆಸಲು ನಿರ್ಧರಿಸಿ, ಶಾಸ್ತ್ರೋತ್ತರವಾಗಿ ಮದುವೆ ನಡೆಸಿದ್ದೇವೆ.
– ಕೆ.ಕೆ.ದಾಮೋದರ,  ಲಯನ್ಸ್‌ ಕ್ಲಬ್‌ ಅಧ್ಯಕ್ಷ

ಮಳೆಗೆ ಮನೆ ಕಳೆದುಕೊಂಡಿದ್ದರಿಂದ ಮದುವೆ ನಡೆಯುತ್ತದೆ ಎಂದುಕೊಂಡಿರಲಿಲ್ಲ. ಎಲ್ಲವನ್ನು ಕೆಳೆದುಕೊಂಡಿರುವ ನಮಗೆ ಈ ಸಂಸ್ಥೆಗಳು ಸಹಕಾರ ನೀಡಿವೆ. ನೋವಿನಲ್ಲೂ ಸಂತೋಷವಾಗುತ್ತಿದೆ.
– ಮಂಜುಳಾ, ವಧು

ಮದುವೆಗಾಗಿ ಎರಡು ಲಕ್ಷ ರೂ. ಸಾಲ ಮಾಡಿದ್ದೇವೆ. ಒಡವೆಯನ್ನು ಮಾಡಿಸಿದ್ದೆವು. ಮಳೆಗೆ ಮನೆ ನಾಶವಾಗಿದ್ದರಿಂದ ಮದುವೆ ಕೂಡಿಟ್ಟ ಹಣವೂ ಸಿಕ್ಕಿಲ್ಲ. ಭಾವನ ಕಡೆಯುವರಿಗೆ ವಿಷಯ ಮನವರಿಕೆ ಮಾಡಿಕೊಟ್ಟಿದ್ದರಿಂದ ಯಾವುದೇ ಆಕ್ಷೇಪ ಇಲ್ಲದೆ ಮದುವೆಗೆ ಒಪ್ಪಿಕೊಂಡಿದ್ದಾರೆ.
– ಆರ್‌.ಅಣ್ಣಪ್ಪ, ವಧು ಸಹೋದರ.
                    
ಚಿತ್ರ: ಎಚ್‌.ಫ‌ಕ್ರುದ್ದೀನ್‌
– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.