ಆರಾಧನೆ ನಿಮಿತ್ತ ರಾಯರಿಗೆ ವಿಶೇಷ ಪೂಜೆ
Team Udayavani, Aug 27, 2018, 6:40 AM IST
ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವ ನಿಮಿತ್ತ ನಡೆಯುತ್ತಿರುವ ಸಪ್ತರಾತ್ರೋತ್ಸವದ ಎರಡನೇ ದಿನವಾದ ಭಾನುವಾರ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ
ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಪ್ರಾತಃಕಾಲದಲ್ಲಿ ನಿರ್ಮಾಲ್ಯ ವಿಸರ್ಜನೆ, ಶ್ರೀ ಉತ್ಸವ ರಾಯರ ಪಾದಪೂಜೆ ಹಾಗೂ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ನಂತರ ನೂತನ ಶಿಲಾ ಮಂಟಪದಲ್ಲಿ ಶ್ರೀಗಳಿಂದ ಶ್ರೀ ಮೂಲರಘುಪತಿ ವೇದವ್ಯಾಸರ ಪೂಜೆ, ಅಲಂಕಾರ ಸಂತರ್ಪಣೆ, ಹಸ್ತೋದಕ, ಮಹಾಮಂಗಳಾರತಿ ನೆರವೇರಿಸಿದರು.
ನಂತರ ತೀರ್ಥ ಪ್ರಸಾದ ವಿತರಣೆ ಜರುಗಿತು. ಸಂಜೆ ವಿದ್ಯಾರ್ಥಿಗಳಿಂದ ಜ್ಞಾನಯಜ್ಞ ನೆರವೇರಿತು. ಸೋಮವಾರ ರಾಯರ ಪೂರ್ವಾರಾಧನೆ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ