ಕಾಂಗ್ರೆಸ್ ಶಾಸಕರಿಗೆ ಯಡಿಯೂರಪ್ಪ ಆಮಿಷ
Team Udayavani, Aug 27, 2018, 6:40 AM IST
ಬೆಳಗಾವಿ: ಬಿಜೆಪಿಯವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಯಡಿಯೂರಪ್ಪ ಅವರಿಗೆ ಹೇಗಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಹುಟ್ಟಿದೆ. ಇದೇಕಾರಣದಿಂದ ಅವರು ನಮ್ಮ ಶಾಸಕರಿಗೆ ದೂರವಾಣಿ ಕರೆ ಮಾಡಿ ಆಮಿಷ ಒಡ್ಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಬೇಗನೆ ಪತನವಾಗುತ್ತದೆ ಎಂಬುದು ಬಿಜೆಪಿ ಭ್ರಮೆ. ಸರ್ಕಾರ ಉರುಳಿಸಬೇಕೆಂದು ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಆದರೆ, ಇದು ಕೈಗೂಡುವುದಿಲ್ಲ.
ಬಿಜೆಪಿಗೆ ವಿರೋಧ ಪಕ್ಷದ ಸ್ಥಾನ ಸಿಕ್ಕಿದೆ. ವಿರೋಧ ಪಕ್ಷದಲ್ಲಿದ್ದು ಒಳ್ಳೆಯ ಕೆಲಸ ಮಾಡಲಿ. ಅದನ್ನು ಬಿಟ್ಟು ಅನ್ಯಾಯದ ಮಾರ್ಗ ಹಿಡಿಯುವುದು ಬೇಡ ಎಂದರು.