ಪ್ರಮುಖ ಸಮಿತಿಯಲ್ಲಿ ಸ್ಥಾನ ಪಡೆದು “ಪವರ್’ ತೋರಿಸಿದ ರಮ್ಯಾ
Team Udayavani, Aug 27, 2018, 6:00 AM IST
ಬೆಂಗಳೂರು:ಮುಂದಿನ ಲೋಕಸಭೆ ಚುನಾವಣೆ ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ರಚಿಸಿರುವ ಮೂರು ಮಹತ್ವದ ಸಮಿತಿಗಳಲ್ಲಿ ಮಾಜಿ ಸಂಸದೆ ರಮ್ಯಾ ಸ್ಥಾನ ಪಡೆದಿರುವುದು ರಾಜ್ಯ ಕಾಂಗ್ರೆಸ್ನಲ್ಲೂ ಅಚ್ಚರಿಗೆ ಕಾರಣವಾಗಿದೆ. ಲೋಕಸಭೆ ಚುನಾವಣೆಗಾಗಿ ರಚಿಸಿರುವ ಪ್ರಚಾರ ಸಮಿತಿಯಲ್ಲಿ ರಾಜ್ಯದ ನಾಯಕರನ್ನು ಹಿಂದಿಕ್ಕಿ ಸ್ಥಾನ ಪಡೆಯುವಲ್ಲಿ ರಮ್ಯಾ ಯಶಸ್ವಿಯಾಗಿದ್ದಾರೆ.
ಚುನಾವಣೆಗೆ ದೇಶಾದ್ಯಂತ ಪ್ರಚಾರದ ರೂಪು-ರೇಷೆ ಸಿದ್ಧಪಡಿಸುವ ಸಮಿತಿಯಲ್ಲಿ ಸ್ಥಾನ ಪಡೆದು ತಮ್ಮನ್ನು ವಿರೋಧಿಸುತ್ತಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೂ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗಿದೆ.
ಆನಂದ್ ಶರ್ಮಾ,ಮನೀಶ್ ತಿವಾರಿ, ರಾಜೀವ್ ಶುಕ್ಲಾ ಅವರಂತಹ ಹಿರಿಯರು ಇರುವ ಸಮಿತಿಯಲ್ಲಿ ರಮ್ಯಾ ಸ್ಥಾನ ಪಡೆದು ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ತೋರಿಸಿದ್ದಾರೆ ಎನ್ನಲಾಗಿದೆ.
ಎಐಸಿಸಿ ರಚಿಸಿರುವ ಕೋರ್ ಗ್ರೂಪ್, ಪ್ರಚಾರ ಸಮಿತಿ, ಪ್ರಣಾಳಿಕೆ ಸಮಿತಿ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇಂತಹ ಸಮಿತಿಗೆ ರಾಷ್ಟ್ರಮಟ್ಟದ ನಾಯಕರು ಹಾಗೂ ಯುವ ನಾಯಕರನ್ನು ನೇಮಿಸಲಾಗಿದೆ.
ಮೂರು ಸಮಿತಿಗಳಲ್ಲಿ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಕೋರ್ ಗ್ರೂಪ್ನಲ್ಲಿ, ರಾಜೀವ್ಗೌಡ ಪ್ರಣಾಳಿಕೆ ಸಮಿತಿಯಲ್ಲಿ ಸ್ಥಾನ ಪಡೆದಿದ್ದರೆ ರಮ್ಯಾ ಪ್ರಚಾರ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿರುವ ರಮ್ಯಾ ಅವರ ಅಧಿಕಾರಕ್ಕೆ ಕತ್ತರಿ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ಗಾಂಧಿ ಯವರ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣ ನೋಡಿಕೊಳ್ಳುವ ಉಸ್ತುವಾರಿ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವಾದರೂ ಇದೀಗ ಪ್ರಮುಖ ಸಮಿತಿಯಲ್ಲಿ ಸ್ಥಾನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ರೂಪು-ರೇಷೆ
ಈ ಮಧ್ಯೆ, ಪ್ರಚಾರ ಸಮಿತಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ರಮ್ಯಾ, ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಪಾಂಡಿಚೇರಿ, ಗೋವಾ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರದ ಬಗ್ಗೆ ವಿಶೇಷ ಗಮನಹರಿಸಲಿದ್ದಾರೆ.
ಮತದಾರರ ತಲುಪಲು ಯಾವ ರೀತಿ ಪ್ರಚಾರ ಕೈಗೊಳ್ಳಬೇಕು. ಯಾವ್ಯಾವ ನಾಯಕರು ಹಾಗೂ ಸಮುದಾಯದ ಮುಖಂಡರನ್ನು ಒಟ್ಟಾಗಿ ಕರೆದೊಯ್ಯಬೇಕು ಎಂಬ ಬಗ್ಗೆ ವರದಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ