ಬಿಜೆಪಿ ನಾಯಕರಿಗೆ ಸಚಿವ ಡಿಕೆಶಿ ಟಾಂಗ್‌


Team Udayavani, Aug 27, 2018, 6:10 AM IST

dk-bj.jpg

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಒಡೆದು ಸರ್ಕಾರ ಉರುಳುತ್ತದೆ ಎನ್ನಲು ಅದೇನು ಮಡಕೆಯಲ್ಲ ಎನ್ನುವ ಮೂಲಕ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಮೈತ್ರಿ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್‌ ನೀಡಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಚರ್ಚಿಸಿಯೇ ಮೈತ್ರಿ ಸರ್ಕಾರ ರಚಿಸಿದ್ದು, ಇದು ಸಂವಿಧಾನಾತ್ಮಕವಾಗಿಯೇ ಆಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಒಡೆದು ಹೋಗಲಿದೆ. ಸರ್ಕಾರ ಬೀಳುಸುತ್ತೇವೆ ಎನ್ನಲು ಅದೇನೂ ಮಡಕೆಯಲ್ಲ. ಆದರೂ ಪ್ರಯತ್ನ ಮಾಡುತ್ತೇವೆ ಎನ್ನುವ ಬಿಜೆಪಿಯ ಸ್ನೇಹಿತರಿಗೆ ಒಳ್ಳೆಯದಾಗಲಿ ಎಂದು ವ್ಯಂಗ್ಯವಾಡಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕರ ಸಂಖ್ಯಾ ಬಲ 104 ಅದು 113ಕ್ಕೇರಬೇಕಾದರೆ ಇತರೆ ಪಕ್ಷಗಳ ಶಾಸಕರಿಂದ ರಾಜೀನಾಮೆ ಕೊಡಿಸಿ ಅವರನ್ನು ಗೆಲ್ಲಿಸಿಕೊಂಡು ಬಂದು ಬಳಿಕ ಅವಿಶ್ವಾಸ ನಿರ್ಣಯ ಮಂಡಿಸಿ ಸರ್ಕಾರ ಉರುಳಿಸಬೇಕು. ಆದರೆ, ಅದು ಸುಲಭದ ಮಾತಲ್ಲ. ಈ ಹಿಂದೆ ಆತುರಕ್ಕೆ ಬಿದ್ದು ಸರ್ಕಾರ ರಚಿಸಿದ ಬಿಜೆಪಿಯ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಮತ್ತೆ ಅದೇ ಆತುರ ಮಾಡಿ ನಂಬರ್‌ ಗೇಮ್‌ ಆಟದಲ್ಲಿ ಗೆಲ್ಲುವುದು ಕಷ್ಟ ಮಾತ್ರವಲ್ಲ, ಬಿಜೆಪಿಯವರೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು ಎಂದರು.

ಮುಖ್ಯಮಂತ್ರಿಗಳ ಬೆನ್ನಿಗಿದ್ದು ಕೆಲಸ ಮಾಡುತ್ತಿದ್ದೇನೆ:ಹಿಂದೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಾಲ್ಕೂವರೆ ವರ್ಷ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದೆ. ಈಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬೆನ್ನಿಗೆ ನಿಂತು ಕೆಲಸ ಮಾಡುತ್ತೇನೆ. ಐದು ವರ್ಷ ಕಾಲ ಅವರೇ ಅಧಿಕಾರದಲ್ಲಿರುತ್ತಾರೆ. ಯಾರ ಕಾಲೆಳೆಯುವ ಕೆಲಸವನ್ನೂ ನಾನು ಮಾಡುವುದಿಲ್ಲ ಮತ್ತು ಅದು ನನಗೆ ಬೇಕಾಗಿಯೂ ಇಲ್ಲ ಎಂದರು.

ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ಪಕ್ಷದ ಹಿರಿಯ ನಾಯಕರು ಮಾತ್ರವಲ್ಲ ವಿದ್ಯಾವಂತ ಮತ್ತು ಮುತ್ಸದಿ ರಾಜಕಾರಣಿ. ಅಂಥವರು ಸರ್ಕಾರವನ್ನು ಗೊಂದಲಕ್ಕೆ ನೂಕುವ ಕೆಲಸ ಮಾಡುವುದಿಲ್ಲ. ರಾಜಕಾರಣದಲ್ಲಿ ಕಾರ್ಯಕರ್ತರನ್ನು ಹುಮ್ಮಸ್ಸಿನಲ್ಲಿಡಲು ನಾನಾ ರೀತಿಯ ಹೇಳಿಕೆಗಳನ್ನು ನೀಡಬೇಕಾಗುತ್ತದೆ. ಅದರಂತೆ ಅವರು ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಸದ್ಯಕ್ಕೆ ನಾನು ಮುಖ್ಯಮಂತ್ರಿಯ ಹುದ್ದೆ ರೇಸ್‌ನಲ್ಲಿ ಇಲ್ಲ. ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಐದು ವರ್ಷ ಪೂರ್ಣಗೊಳ್ಳುತ್ತದೆ. ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮುಂದೆ ಚುನಾವಣೆ ನಡೆದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಯಾರು ಮುಖ್ಯಮಂತ್ರಿ ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ. ಹೈಕಮಾಂಡ್‌ ಸೂಚನೆ ಎಲ್ಲರೂ ಪಾಲಿಸುತ್ತಾರೆ ಎಂದು ಹೇಳಿದರು.

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸಚಿವ ಸಾ.ರಾ.ಮಹೇಶ್‌ರನ್ನು ತರಾಟೆಗೆ ತೆಗೆದುಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೊಡಗಿನಲ್ಲಿ ಮಳೆ ಅನಾಹುತದಿಂದ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಲು ಸಾ.ರ.ಮಹೇಶ್‌ ಸಂಪುಟ ಸಭೆಗೂ ಬರದೆ ಅಲ್ಲಿ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ನಿರ್ಮಾಲಾ ಸೀತಾರಾಮ್‌ ನಿಂದಿಸಿದ್ದಾರೆ. ಅವರು ದೊಡ್ಡವರು, ಒಳ್ಳೆಯದಾಗಲಿ. ಬೇಕಿದ್ದರೆ ಇನ್ನೊಂದು ಬಾರಿ ಬಂದು ಬೈದು ಹೋಗಲಿ. ನಮ್ಮ ಜನರಿಗೆ ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಆಸೆ ಎಂದರು.

ಋಣಪರಿಹಾರ ಅಧಿನಿಯಮ ಏಕಾಏಕಿ ತೀರ್ಮಾನವಲ್ಲ
ಖಾಸಗಿ ಸಾಲ ಮತ್ತು ಲೇವಾದೇವಿಗೆ ಕಡಿವಾಣ ಹಾಕುವ ಋಣ ಪರಿಹಾರ ಅಧಿನಿಯಮವನ್ನು ಏಕಾಏಕಿ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆದಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ಮಧ್ಯೆ ಸುದೀರ್ಘ‌ ಚರ್ಚೆಯ ಬಳಿಕವೇ ಸಂಪುಟ ಸಭೆಗೆ ತಂದು ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಎದ್ದಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ಅವರು, ಬಡ್ಡಿ, ಚಕ್ರಬಡ್ಡಿ, ಮೀಟರ್‌ ಬಡ್ಡಿ ದಂಧೆಯಿಂದ ಜನ ಸಾಮಾನ್ಯರಿಗೆ ಅದರಲ್ಲೂ ಮುಖ್ಯವಾಗಿ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದಿಂದ ಮಾಹಿತಿ ತರಿಸಿಕೊಂಡು ಯಾವ ರೀತಿ ಖಾಸಗಿ ಲೇವಾದೇವಿ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಿದ ಬಳಿಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಋಣ ಪರಿಹಾರ ಅಧಿನಿಯಮ ಕುರಿತು ಚರ್ಚಿಸಿದ್ದರು. ಆದರೆ, ಇದು ಮೊದಲೇ ಬಹಿರಂಗವಾದರೆ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಸಂಪುಟ ಸಭೆ ಆರಂಭವಾಗುವವರೆಗೆ ವಿಷಯವನ್ನು ಗುಟ್ಟಾಗಿ ಇಡಲಾಗಿತ್ತು ಎಂದು ಹೇಳಿದರು.

ಋಣ ಪರಿಹಾರ ಅಧಿನಿಯಮದ ಬಗ್ಗೆ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿದ ಬಳಿಕವೇ ಒಪ್ಪಿಗೆ ಪಡೆಯಲಾಗಿದೆ. ಅಡ್ವೋಕೇಟ್‌ ಜನರಲ್‌ ಕೂಡ ಅದರ ಸಾಧಕ-ಬಾಧಕಗಳ ಬಗ್ಗೆ ತಿಳಿಸಿದ್ದಾರೆ. ಅದರಂತೆ ಅಧಿನಿಯಮವನ್ನು ಶೀಘ್ರವೇ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗುವುದು. ಅವರ ಅಂಕಿತ ಬಿದ್ದ ಕೂಡಲೇ ಜಾರಿಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.