ರಾಜ್ಯ ಚಿನ್ಮಯಿ ಜತೆ ಮೋದಿ ಸಂಸ್ಕೃತ ಸಂಭಾಷಣೆ


Team Udayavani, Aug 27, 2018, 6:00 AM IST

man-modi.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಜನತೆ ಉದ್ದೇಶಿಸಿ ಆಕಾಶವಾಣಿಯ ಮೂಲಕ ಅನಿಸಿಕೆ ಹಂಚಿಕೊಂಡ “ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬಾಲಕಿ ಚಿನ್ಮಯಿ ಸಂಸ್ಕೃತದಲ್ಲಿ ಸಂಭಾಷಣೆ ನಡೆಸಿ ದೇಶದ ಗಮನ ಸೆಳೆದಿದ್ದಾರೆ.

ಗಿರಿನಗರದ ನಿವಾಸಿ ಲಕ್ಷ್ಮೀನಾರಾಯಣ ಭುವನಕೋಟೆ ಎಂಬವರ ಪುತ್ರಿ ಚಿನ್ಮಯಿ ವಿಜಯ ಭಾರತಿ ವಿದ್ಯಾನಿಲಯದಲ್ಲಿ 10ನೇ ತರಗತಿ ಓದುತ್ತಿದ್ದಾರೆ. 

ಪ್ರಧಾನಿಯವರೊಂದಿಗೆ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡುವ ಬಯಕೆಯಿಂದ ಹಲವು ಬಾರಿ ಕರೆ ಮಾಡಿದ್ದು, ಭಾನುವಾರ ಅದು ಸಾಧ್ಯವಾಗಿದೆ. ತಂದೆ ಲಕ್ಷ್ಮೀನಾರಾಯಣ ಅವರು ಪ್ರತಿಬಾರಿಯಂತೆ ಭಾನುವಾರವೂ ಕರೆ ಮಾಡಿದಾಗ ಸಂಪರ್ಕ ಸಿಕ್ಕಿದೆ. ಇದರಿಂದ ಸಂತಸಗೊಂಡ ಅವರು, ಕೂಡಲೇ ಮಗಳಿಗೆ ಮೊಬೈಲ್‌ ಕೊಟ್ಟು ಪ್ರಧಾನಿ ಅವರೊಂದಿಗೆ ಮಾತನಾಡುವಂತೆ ಹಾಗೂ ಸಂಸ್ಕೃತ ಭಾಷಾ ದಿನದ ಶುಭಾಶಯ ಕೋರುವಂತೆ ತಿಳಿಸಿದ್ದಾರೆ.

ಭಾನುವಾರ ತಡವಾಗಿ ನಿದ್ದೆಯಿಂದ ಎದ್ದ ಚಿನ್ಮಯಿಗೆ ತಂದೆ ಪ್ರಧಾನಿಯೊಂದಿಗೆ ಮಾತನಾಡುವಂತೆ ಮೊಬೈಲ್‌ ಕೊಟ್ಟಾಗ, ಮೋದಿಯವರಿಗೆ ಮೊದಲು ಸಂಸ್ಕೃತ ದಿನದ ಶುಭಾಶಯ ಕೋರಿದರು. “”ಪ್ರಧಾನ ಮಂತ್ರಿಗಳೇ ನಮಸ್ಕಾರ, ಇಂದು ಸಂಸ್ಕೃತ ದಿನವಾದ ಕಾರಣ ನಾನು ಸಂಸ್ಕೃತದಲ್ಲಿಯೇ ಮಾತನಾಡುತ್ತೇನೆ. ನನ್ನಂತೆಯೇ ಸಾಕಷ್ಟು ಜನ ಸಂಸ್ಕೃತದಲ್ಲಿಯೇ ಮಾತನಾಡುತ್ತಾರೆ. ಸಂಸ್ಕೃತ ಭಾಷೆ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು.

ಬಾಲಕಿಯ ಮಾತುಗಳನ್ನು ಆಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತದಲ್ಲಿಯೇ ಉತ್ತರಿಸುವ ಮೂಲಕ ಚಿನ್ಮಯಿ ಸಂತಸಗೊಳ್ಳುವಂತೆ ಮಾಡಿದ್ದಾರೆ. ಕೆಲ ಸಮಯ ಸಂಸ್ಕೃತದಲ್ಲಿಯೇ ಮಾತಕತೆ ನಡೆಸಿದ್ದಾರೆ.

ನಾನು ಪ್ರಧಾನಿಗಳೊಂದಿಗೆ ಮಾತನಾಡಿದೆ ಎಂಬುದನ್ನು ಇನ್ನೂ ನಂಬಲಾಗುತ್ತಿಲ್ಲ. ಅವರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿದ್ದಕ್ಕೆ ಸಂತಸವಾಗಿದ್ದು, ಅವರು ಸಹ ಸಂಸ್ಕೃತದಲ್ಲಿಯೇ ಮಾತನಾಡಿದ್ದು ಮತ್ತಷ್ಟು  ಖುಷಿಯಾಯಿತು.
– ಚಿನ್ಮಯಿ, ಪ್ರಧಾನಿಗಳೊಂದಿಗೆ ಮಾತನಾಡಿ ಬಾಲಕಿ

ಸಾರ್ವನಿಕರಿಗೆ ಲಭ್ಯವಿರುವ ಆಕಾಶವಾಣಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದೆ. 10 ನಿಮಿಷಗಳ ಕಾಲ ನಿರಂತರವಾಗಿ ಪ್ರಯತ್ನ ಮಾಡಿದೆ ಕರೆ ಲಭ್ಯವಾಯಿತು. ಸಾಮಾನ್ಯರ ಕರೆಗೆ ಸ್ಪಂದಿಸಿದ ಪ್ರಧಾನಿ ಅವರು ಸಂಸ್ಕೃತದಲ್ಲಿಯೇ ಮಾತನಾಡಿ, ಸಂಸ್ಕೃತದ ಹಿರಿಮೆಯನ್ನು ಭಾಷಣದಲ್ಲಿ ತಿಳಿಸಿದ್ದು ಸಂತಸವಾಯಿತು.
– ಲಕ್ಷ್ಮೀನಾರಾಯಣ ಭುವನಕೋಟೆ. ಸಂಸ್ಕೃತ ಭಾರತೀ ಸಂಘಟನೆ ಸಂಚಾಲಕರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.