ರಾಜ್ಯ ಚಿನ್ಮಯಿ ಜತೆ ಮೋದಿ ಸಂಸ್ಕೃತ ಸಂಭಾಷಣೆ


Team Udayavani, Aug 27, 2018, 6:00 AM IST

man-modi.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಜನತೆ ಉದ್ದೇಶಿಸಿ ಆಕಾಶವಾಣಿಯ ಮೂಲಕ ಅನಿಸಿಕೆ ಹಂಚಿಕೊಂಡ “ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬಾಲಕಿ ಚಿನ್ಮಯಿ ಸಂಸ್ಕೃತದಲ್ಲಿ ಸಂಭಾಷಣೆ ನಡೆಸಿ ದೇಶದ ಗಮನ ಸೆಳೆದಿದ್ದಾರೆ.

ಗಿರಿನಗರದ ನಿವಾಸಿ ಲಕ್ಷ್ಮೀನಾರಾಯಣ ಭುವನಕೋಟೆ ಎಂಬವರ ಪುತ್ರಿ ಚಿನ್ಮಯಿ ವಿಜಯ ಭಾರತಿ ವಿದ್ಯಾನಿಲಯದಲ್ಲಿ 10ನೇ ತರಗತಿ ಓದುತ್ತಿದ್ದಾರೆ. 

ಪ್ರಧಾನಿಯವರೊಂದಿಗೆ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡುವ ಬಯಕೆಯಿಂದ ಹಲವು ಬಾರಿ ಕರೆ ಮಾಡಿದ್ದು, ಭಾನುವಾರ ಅದು ಸಾಧ್ಯವಾಗಿದೆ. ತಂದೆ ಲಕ್ಷ್ಮೀನಾರಾಯಣ ಅವರು ಪ್ರತಿಬಾರಿಯಂತೆ ಭಾನುವಾರವೂ ಕರೆ ಮಾಡಿದಾಗ ಸಂಪರ್ಕ ಸಿಕ್ಕಿದೆ. ಇದರಿಂದ ಸಂತಸಗೊಂಡ ಅವರು, ಕೂಡಲೇ ಮಗಳಿಗೆ ಮೊಬೈಲ್‌ ಕೊಟ್ಟು ಪ್ರಧಾನಿ ಅವರೊಂದಿಗೆ ಮಾತನಾಡುವಂತೆ ಹಾಗೂ ಸಂಸ್ಕೃತ ಭಾಷಾ ದಿನದ ಶುಭಾಶಯ ಕೋರುವಂತೆ ತಿಳಿಸಿದ್ದಾರೆ.

ಭಾನುವಾರ ತಡವಾಗಿ ನಿದ್ದೆಯಿಂದ ಎದ್ದ ಚಿನ್ಮಯಿಗೆ ತಂದೆ ಪ್ರಧಾನಿಯೊಂದಿಗೆ ಮಾತನಾಡುವಂತೆ ಮೊಬೈಲ್‌ ಕೊಟ್ಟಾಗ, ಮೋದಿಯವರಿಗೆ ಮೊದಲು ಸಂಸ್ಕೃತ ದಿನದ ಶುಭಾಶಯ ಕೋರಿದರು. “”ಪ್ರಧಾನ ಮಂತ್ರಿಗಳೇ ನಮಸ್ಕಾರ, ಇಂದು ಸಂಸ್ಕೃತ ದಿನವಾದ ಕಾರಣ ನಾನು ಸಂಸ್ಕೃತದಲ್ಲಿಯೇ ಮಾತನಾಡುತ್ತೇನೆ. ನನ್ನಂತೆಯೇ ಸಾಕಷ್ಟು ಜನ ಸಂಸ್ಕೃತದಲ್ಲಿಯೇ ಮಾತನಾಡುತ್ತಾರೆ. ಸಂಸ್ಕೃತ ಭಾಷೆ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು.

ಬಾಲಕಿಯ ಮಾತುಗಳನ್ನು ಆಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತದಲ್ಲಿಯೇ ಉತ್ತರಿಸುವ ಮೂಲಕ ಚಿನ್ಮಯಿ ಸಂತಸಗೊಳ್ಳುವಂತೆ ಮಾಡಿದ್ದಾರೆ. ಕೆಲ ಸಮಯ ಸಂಸ್ಕೃತದಲ್ಲಿಯೇ ಮಾತಕತೆ ನಡೆಸಿದ್ದಾರೆ.

ನಾನು ಪ್ರಧಾನಿಗಳೊಂದಿಗೆ ಮಾತನಾಡಿದೆ ಎಂಬುದನ್ನು ಇನ್ನೂ ನಂಬಲಾಗುತ್ತಿಲ್ಲ. ಅವರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿದ್ದಕ್ಕೆ ಸಂತಸವಾಗಿದ್ದು, ಅವರು ಸಹ ಸಂಸ್ಕೃತದಲ್ಲಿಯೇ ಮಾತನಾಡಿದ್ದು ಮತ್ತಷ್ಟು  ಖುಷಿಯಾಯಿತು.
– ಚಿನ್ಮಯಿ, ಪ್ರಧಾನಿಗಳೊಂದಿಗೆ ಮಾತನಾಡಿ ಬಾಲಕಿ

ಸಾರ್ವನಿಕರಿಗೆ ಲಭ್ಯವಿರುವ ಆಕಾಶವಾಣಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದೆ. 10 ನಿಮಿಷಗಳ ಕಾಲ ನಿರಂತರವಾಗಿ ಪ್ರಯತ್ನ ಮಾಡಿದೆ ಕರೆ ಲಭ್ಯವಾಯಿತು. ಸಾಮಾನ್ಯರ ಕರೆಗೆ ಸ್ಪಂದಿಸಿದ ಪ್ರಧಾನಿ ಅವರು ಸಂಸ್ಕೃತದಲ್ಲಿಯೇ ಮಾತನಾಡಿ, ಸಂಸ್ಕೃತದ ಹಿರಿಮೆಯನ್ನು ಭಾಷಣದಲ್ಲಿ ತಿಳಿಸಿದ್ದು ಸಂತಸವಾಯಿತು.
– ಲಕ್ಷ್ಮೀನಾರಾಯಣ ಭುವನಕೋಟೆ. ಸಂಸ್ಕೃತ ಭಾರತೀ ಸಂಘಟನೆ ಸಂಚಾಲಕರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.