ರಾಜಕೀಯ ಕಾರಣಕ್ಕೆ ವಿವಾದ: ವಿಷಾದ
Team Udayavani, Aug 28, 2018, 6:40 AM IST
ಮಡಿಕೇರಿ: ಸೈನಿಕರ ಜಿಲ್ಲೆ ಕೊಡಗಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿದ್ದ ಸಂದರ್ಭ ಅವಮಾನವಾಗುವ ಘಟನೆಗಳು ನಡೆದಿದ್ದು, ರಾಜಕೀಯ ಕಾರಣಕ್ಕಾಗಿ ಈ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿದೆ ಎಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ-ಜನರಲ್ ತಿಮ್ಮಯ್ಯ ಫೋರಂ ವಿಷಾದ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರಂನ ಸಂಚಾಲಕ ನಿವೃತ್ತ ಮೇಜರ್ ಬಿ.ಎ.ನಂಜಪ್ಪ ಹಾಗೂ ಉಳ್ಳಿಯಡ ಎಂ.ಪೂವಯ್ಯ ಕೊಡಗಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತದ ಸಮೀಕ್ಷೆಗೆ ರಕ್ಷಣಾ ಸಚಿವರು ಬಂದಿದ್ದಾಗ ವಿನಾಕಾರಣ ವಿವಾದ ಹುಟ್ಟಿಕೊಂಡಿದ್ದು, ಇದರಲ್ಲಿ ರಕ್ಷಣಾ ಸಚಿವರ ತಪ್ಪಿಲ್ಲವೆಂದು ಸ್ಪಷ್ಟಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವೂ ಇದರಲ್ಲಿ ಇಲ್ಲವೆಂದು ಸಮರ್ಥಿಸಿಕೊಂಡ ಅವರು, ಜಿಲ್ಲೆಯ ಕೆಲವು ಜನಪ್ರತಿನಿಧಿಗಳು ಉಸ್ತುವಾರಿ ಸಚಿವರ ಹಾದಿ ತಪ್ಪಿಸಿದ್ದಾರೆಂದು ಟೀಕಿಸಿದರು. ರಕ್ಷಣಾ ಸಚಿವರು ಅಂದು ತೆಗೆದುಕೊಂಡ ನಿಲುವನ್ನು ಕೊಡಗಿನ ಮಾಜಿ ಸೈನಿಕರ ಸಂಘ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಬೆಂಬಲಿಸಲಿದೆ. ಸಚಿವರು, ರಾಷ್ಟ್ರೀಯ ಸುದ್ದಿಮಾಧ್ಯಮಗಳಲ್ಲಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿವಾದ ಕೇವಲ ಕಾಲ್ಪನಿಕ ಮತ್ತು ರಾಜಕೀಯ ಪ್ರೇರಿತ ಎಂದು ಮೇಜರ್ ಬಿ.ಎ.ನಂಜಪ್ಪ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ