ರಾಜಕೀಯ ಕಾರಣಕ್ಕೆ ವಿವಾದ: ವಿಷಾದ
Team Udayavani, Aug 28, 2018, 6:40 AM IST
ಮಡಿಕೇರಿ: ಸೈನಿಕರ ಜಿಲ್ಲೆ ಕೊಡಗಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿದ್ದ ಸಂದರ್ಭ ಅವಮಾನವಾಗುವ ಘಟನೆಗಳು ನಡೆದಿದ್ದು, ರಾಜಕೀಯ ಕಾರಣಕ್ಕಾಗಿ ಈ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿದೆ ಎಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ-ಜನರಲ್ ತಿಮ್ಮಯ್ಯ ಫೋರಂ ವಿಷಾದ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರಂನ ಸಂಚಾಲಕ ನಿವೃತ್ತ ಮೇಜರ್ ಬಿ.ಎ.ನಂಜಪ್ಪ ಹಾಗೂ ಉಳ್ಳಿಯಡ ಎಂ.ಪೂವಯ್ಯ ಕೊಡಗಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತದ ಸಮೀಕ್ಷೆಗೆ ರಕ್ಷಣಾ ಸಚಿವರು ಬಂದಿದ್ದಾಗ ವಿನಾಕಾರಣ ವಿವಾದ ಹುಟ್ಟಿಕೊಂಡಿದ್ದು, ಇದರಲ್ಲಿ ರಕ್ಷಣಾ ಸಚಿವರ ತಪ್ಪಿಲ್ಲವೆಂದು ಸ್ಪಷ್ಟಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವೂ ಇದರಲ್ಲಿ ಇಲ್ಲವೆಂದು ಸಮರ್ಥಿಸಿಕೊಂಡ ಅವರು, ಜಿಲ್ಲೆಯ ಕೆಲವು ಜನಪ್ರತಿನಿಧಿಗಳು ಉಸ್ತುವಾರಿ ಸಚಿವರ ಹಾದಿ ತಪ್ಪಿಸಿದ್ದಾರೆಂದು ಟೀಕಿಸಿದರು. ರಕ್ಷಣಾ ಸಚಿವರು ಅಂದು ತೆಗೆದುಕೊಂಡ ನಿಲುವನ್ನು ಕೊಡಗಿನ ಮಾಜಿ ಸೈನಿಕರ ಸಂಘ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಬೆಂಬಲಿಸಲಿದೆ. ಸಚಿವರು, ರಾಷ್ಟ್ರೀಯ ಸುದ್ದಿಮಾಧ್ಯಮಗಳಲ್ಲಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿವಾದ ಕೇವಲ ಕಾಲ್ಪನಿಕ ಮತ್ತು ರಾಜಕೀಯ ಪ್ರೇರಿತ ಎಂದು ಮೇಜರ್ ಬಿ.ಎ.ನಂಜಪ್ಪ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ